Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ನಿಧನ..! ನಟಿಗೆ ಆಗಿದ್ದೇನು?
ಇತ್ತೀಚಿಗೆ ಕಿರುತೆರೆ, ಸಿನಿಮಾ ನಟ ನಟಿಯರು ಆತ್ಮಹತ್ಯೆಯಂತಹ ಕೆಲಸಕ್ಕೆ ಕೈ ಹಾಕುತ್ತಿರುವುದು ಆತಂಕ ಹೆಚ್ಚಲು ಕಾಣವಾಗಿದೆ. ಈಗ ಬ್ರಹ್ಮಗಂಟು ಧಾರವಾಹಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ. ಅವರು ಕೆಲ ವರ್ಷದಿಂದ ಹೈದರಾಬಾದ್ನಲ್ಲಿ ನೆಲಸಿದ್ದರು ಅಲ್ಲಿಯೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
ಶೋಭಿತಾ ಶಿವಣ್ಣ, ಬ್ರಹ್ಮಗಂಟು, ನಿನ್ನಿಂದಲೆ ಸೇರಿ ಹಲವು ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ಹಾಗೆ ಎರಡೊಂದ್ಲಾ ಮೂರು, ಒಂದ್ ಕಥೆ ಹೇಳ್ಲಾ, ಜಾಕ್ ಪಾಟ್, ಎಟಿಎಮ್ , ಅಪಾರ್ಟ್ಮಂಟ್ ಟು ಮರ್ಡರ್, ವಂದನಾ ಸೇರಿ ಇತ್ತಿಚಿಗೆ ತೆರೆಕಂಡಿದ್ದ ಫಸ್ಟ್ ಡೇ ಫಸ್ಟ್ ಶೋ ಸಿನಿಮಾಗಳಲ್ಲು ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಟಿ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ಆ ನಂತರ ಈ ಘಟನೆ ಜರುಗಿದ್ದು, ಅವರ ಆತ್ಮಹತ್ಯೆಯ ಬಗ್ಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಹಾಸನ ಮೂಲದ ಸಕಲೇಶಪುರ ಅವರ ಮೂಲ ಜನ್ಮ ಸ್ಥಳ ಎಂದು ತಿಳಿದುಬಂದಿದೆ. ಅವರ ಸಾವಿನ ಸುದ್ದಿ ಕುಟುಂಬಸ್ಥರು, ಸ್ನೇಹಿತರಿಗೆ ಸಿಡಿಲಿನಂತೆ ಅಪ್ಪಳಿಸಿದೆ.
ಬ್ರಹ್ಮಗಂಟು ಸೀರಿಯಲ್ನಲ್ಲಿ ಖಳನಾಯಕಿಯಾಗಿ ನಟಿಸಿದ್ದ ಅವರು ಎಲ್ಲರ ಮನೆ ಮನೆಯ ಮಾತಾಗಿದ್ದರು, ಹೀಗಾಗಿ ಉತ್ತಮ ನಟನ ಕೌಶಲ್ಯದಿಂದಲೂ ಅವರು ಗಮನ ಸೆಳೆದಿದ್ದರು. ಕಳೆದ ವರ್ಷ 2023ರ ಮೇ 22ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಅವರು ಹೃದರಾಬಾದ್ನಲ್ಲಿಯೇ ನೆಲೆಸಿದ್ದರು, ಆದರೆ ಅವರು ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.
ಇನ್ನು ಇದೇ ನವೆಂಬರ್ ತಿಂಗಳಲ್ಲಿ ನಟ, ನಿರ್ದೇಶಕ ಗುರು ಪ್ರಸಾದ್ ಕೂಡ ಸಾವಿಗೀಡಾಗಿದ್ದರು. ತಮ್ಮ ಅಪಾರ್ಟ್ಮೆಂಟ್ನಲ್ಲೇ ಅವರು ನೇಣಿಗೆ ಶರಣಾಗಿದ್ದರು. ಈಗ ನಟಿ ಶೋಭಿತಾ ಶಿವಣ್ಣ ಸುದ್ದಿ ಗಾಂಧಿನಗರದ ಮಂದಿ ಶಾಕ್ ನೀಡಿದೆ. ಹಾಗೆ ಯಾವ ಕಾರಣಕ್ಕೆ ಆತ್ಮಹತ್ಯೆ ಅಂತಹ ಕಠಿಣ ನಿರ್ಧಾರಕ್ಕೆ ನಟ ನಟಿಯರು ಮುಂದಾಗುತ್ತಿದ್ದಾರೆ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿ ಎಲ್ಲರ ಕಾಡುತ್ತಿದೆ.
ಚಿತ್ರರಂಗಕ್ಕೆ ಶಾಕ್ ಕೊಟ್ಟಿತ್ತು ಗುರುಪ್ರಸಾದ್ ಪ್ರಕರಣ
ಅತ್ಯಂತ ಪ್ರತಿಭಾನ್ವಿತ ನಿರ್ದೇಶಕ ಎಂದೇ ಹೆಸರು ಮಾಡಿದ್ದ ಗುರು ಪ್ರಸಾದ್ ಅವರ ಸಾವು ಇಡೀ ಚಿತ್ರರಂಗಕ್ಕೆ ಶಾಕ್ ಕೊಟ್ಟಿತ್ತು. ಕೇವಲ 50 ವರ್ಷದ ಅವರು ಅಪಾರ್ಟ್ಮೆಂಟ್ನಲ್ಲಿ ಸಾವಿಗೀಡಾಗಿದ್ದರು. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವಾಸನೆ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿತ್ತು.
ಸಿನಿಮಾಗಳಿಂದ ಅವರು ಸಾಲಕ್ಕೆ ಬಿದ್ದಿದ್ದರು, ಹಿಂದಿನ ಸಿನಿಮಾ ಸೋಲು ಅವರನ್ನು ಖಿನ್ನತೆಗೆ ತಳ್ಳಿತ್ತು ಎಂಬ ಅನುಮಾನ ಮೂಡಿತ್ತಲ್ಲದೆ, ಕೌಟುಂಬಿಕ ಸ್ಥಿತಿಗತಿಗಳು ಕೂಡ ಅವರನ್ನು ಈ ನಿರ್ಧಾರಕ್ಕೆ ತಳ್ಳಿದ್ದವು ಎಂಬ ಅನುಮಾನ ಮೂಡಿಸಿತ್ತು. ಆದ್ರೆ ಈಗ ಮತ್ತೋರ್ವ ಪ್ರತಿಭಾನ್ವಿತ ಯುವ ನಟಿಯ ದುರಂತ ಅಂತ್ಯ ಎಲ್ಲರಿಗೂ ಶಾಕ್ ನೀಡಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ- 9152987821



Click it and Unblock the Notifications