Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆಯಾದ ಮಹಿಳೆಯರು! ಇನ್ಸ್ಸ್ಟಾಗ್ರಾಮ್ನಿಂದ ಹುಟ್ಟಿಕೊಂಡ ಪ್ರೀತಿಯಂತೆ..!
ಇತ್ತೀಚಿನ ದಿನಗಳಲ್ಲಿ ನಾವು ಚಿತ್ರ ವಿಚಿತ್ರ ಮದುವೆ ಘಟನೆಗಳ ನೋಡುತ್ತಿದ್ದೇವೆ. ಈಗ ಇದೇ ಸಾಲಿಗೆ ಇಬ್ಬರು ಮಹಿಳೆಯರು ಪರಸ್ಪರ ಒಪ್ಪಿ ಮದುವೆಯಾಗಿರುವ ಅಪರೂಪದ ಘಟನೆ ನಡೆದಿದೆ. ಪತಿ ಮದ್ಯ ಸೇವಿಸಿ ಹಿಂಸೆ ನೀಡುತ್ತಿದ್ದ ಎಂಬ ಕಾರಣದಿಂದ ಇಬ್ಬರು ಮಹಿಳೆಯರು ಮದುವೆಯಾಗಿದ್ದಾರೆ. ಉತ್ತರ ಪ್ರದೇಶದ ಗೋರಖ್ಪುರ್ನ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.
ಕವಿತಾ ಮತ್ತು ಗುಂಜಾ ಎಂಬ ಇಬ್ಬರು ಮನೆ ಬಿಟ್ಟು ಬಂದು ಮದುವೆಯಾಗಲು ನಿರ್ಧರಿಸಿ, ಬಳಿಕ ಶಿವನ ದೇವಾಲಯದಲ್ಲಿ ಹಾರ ಬದಲಾಯಿಸಿಕೊಂಡಿದ್ದಾರೆ. ಹಾಗೆ ಈ ವೇಳೆ ಹಿಂಸೆ ರಹಿತ, ಸುಖ ಜೀವನ ನಡೆಸುವುದಾಗಿ ಇಬ್ಬರೂ ಪ್ರತಿಜ್ಞೆ ಮಾಡಿದ್ದಾರೆ. ಸದ್ಯ ಇಬ್ಬರ ಮದುವೆ ಸುದ್ದಿ ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹಾಗೆ ಹಲವು ರೀತಿಯ ಅಭಿಪ್ರಾಯಗಳು ಕೂಡ ಕೇಳಿಬರುತ್ತಿವೆ.

ಇಬ್ಬರ ಮನೆಯಲ್ಲೂ ಪತಿ ಮದ್ಯವ್ಯಸನಿಯಾಗಿದ್ದು, ಯಾವಾಗಲು ಕುಡಿದು ಬಂದು ಗಲಾಟೆ ಮಾಡುವುದು ಮಾಡುತ್ತಿದ್ದನಂತೆ. ಆದರೆ ಈ ಇಬ್ಬರಿಗೂ ಇನ್ಸ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ನಂತರ ಮಾತುಕತೆಯ ಹಂತ ತಲುಪಿತ್ತು. ಇದಾಗಿ ಹಲವು ತಿಂಗಳುಗಳ ಕಾಲ ಮನೆ ಬಿಟ್ಟು ಬರುವ ನಿರ್ಧಾರ ಕುರಿತು ಇಬ್ಬರು ಆಲೋಚಿಸಿದ್ದರು. ಹಾಗೆ ಕೊನೆಯಲ್ಲಿ ಪತಿಯ ಬಿಟ್ಟು ಬಂದು ಮದುವೆಯಾಗಿದ್ದಾರೆ.
ನಮ್ಮ ಗಂಡಂದಿರ ಮದ್ಯಪಾನ ಮತ್ತು ನಿಂದನೆಯಿಂದ ಮುಕ್ತಿ ಪಡೆಯಲು ನಾವು ಬಯಸಿದ್ದೆವು. ಶಾಂತಿ, ಪ್ರೀತಿಯ ಜೀವನದ ಕನಸು ಕಂಡಿದ್ದೆವು. ಹೀಗಾಗಿ ಗೋರಖ್ಪುರ್ನಲ್ಲಿ ನಾವು ದಂಪತಿಯಾಗಿ ಜೀವಿಸಲು ಮುಂದಾಗಿದ್ದೇವೆ ಎಂದು ಇಬ್ಬರು ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಸಲಿಂಗ ವಿವಾಹ ಕಾನೂನು ಏನು ಹೇಳುತ್ತೆ?
ಭಾರತದಲ್ಲಿ ಸಲಿಂಗ ವಿವಾಹ ಎಂಬುದು ಇನ್ನೂ ಕಾನೂನು ಬದ್ದವಾಗಿಲ್ಲ. ಸದ್ಯಕ್ಕೆ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕೇ ಬೇಡವೇ ಎಂಬ ವಾದ ಇನ್ನೂ ಸುಪ್ರೀಂಕೋರ್ಟ್ ಅಂಗಳದಲ್ಲಿದೆ. ಆದರೆ ಸಲಿಂಗಕಾಮಕ್ಕೆ ಭಾರತದಲ್ಲಿ ಕಾನೂನಿನಿಂದ ಅಡ್ಡಿಯಿಲ್ಲ ಆದರೆ ವಿವಾಹಕ್ಕೆ ಇನ್ನು ಮಾನ್ಯತೆ ಸಿಕ್ಕಿಲ್ಲ. ಸಲಿಂಗ ವಿವಾಹಕ್ಕೆ ಅವಕಾಶ ಕಲ್ಪಿಸಲು ವಿಶೇಷ ವಿವಾಹ ಕಾಯ್ದೆ ಅಡಿಯಲ್ಲಿ ಬದಲಾವಣೆ ಕುರಿತು ಸಂಸತ್ತು ನಿರ್ಧರಿಸಬೇಕಿದೆ. ಆದ್ರೆ ಕೇಂದ್ರ ಸರ್ಕಾರ ಈ ಸಲಿಂಗ ವಿವಾಹದ ವಿರುದ್ಧ ವಾದ ಮಾಡುತ್ತಾ ಬಂದಿದೆ. ಹಾಗೆ ಸಂವಿಧಾನದಲ್ಲಿಯೂ ಕೂಡ ಈ ಕುರಿತ ಹಕ್ಕುಗಳ ಉಲ್ಲೇಖವಿಲ್ಲ. ಹೀಗಾಗಿ ಭಾರತದಲ್ಲಿ ಇಂದಿಗೂ ಸಲಿಂಗ ವಿವಾಹ ಕುರಿತು ಕಾನೂನು ಜಾರಿಯಾಗಿಲ್ಲ.
ಆದ್ರೆ ಸಲಿಂಗ ವಿವಾಹ ಆಗುವ ಮಂದಿಗೆ ಕಾನೂನಿನಿಂದ ಅಡ್ಡಿಯಾಗುತ್ತಿದ್ದರೂ ಭಾರತದಲ್ಲಿಯೂ ಕೂಡ ಸಲಿಂಗ ವಿವಾಹ ಸಂಖ್ಯೆ ಏರುಗತಿಯಲ್ಲಿದೆ. ಆದರೆ ಅವರಿಗೆ ಸಂವಿಧಾನಾತ್ಮಕವಾಗಿ ಸಿಗುವಂತಹ ಹಲವು ಹಕ್ಕುಗಳು ಮಾತ್ರ ಸಿಗುತ್ತಿಲ್ಲ. ಜೋಡಿಯು ಮಕ್ಕಳನ್ನು ದತ್ತು ಪಡೆಯುವ ಹಕ್ಕಿಲ್ಲ. ಹಾಗೆ ವಿಮೆ, ವಿವಾಹನಂತರದ ಹಕ್ಕುಗಳ ಪಡೆಯುವಲ್ಲಿ ಅವರು ವಿಫಲರಾಗುತ್ತಾರೆ.
ಭಾರತದ ಸೇರಿದಂತೆ ಕೆಲವೊಂದು ರಾಷ್ಟ್ರಗಳನ್ನು ಹೊರತುಪಡಿಸಿ ವಿಶ್ವದ ಸುಮಾರು 30ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸಲಿಂಗ ವಿವಾಹ ಕಾನೂನು ಬದ್ಧವಾಗಿದೆ. ಅದರಲ್ಲೂ ಹಲವು ದೇಶಗಳಲ್ಲಿ ಜನರ ಅಭಿಪ್ರಾಯ ಪಡೆದುಕೊಂಡು ಈ ಕಾನೂನು ಜಾರಿ ಮಾಡಲಾಗಿದೆ. ಇನ್ನು ಕೆಲವು ದೇಶಗಳಲ್ಲಿ ಸಲಿಂಗ ವಿವಾಹಕ್ಕೆ ಮಾನ್ಯತೆಯೂ ಇಲ್ಲ ಜೊತೆಗೆ ಅದನ್ನು ನಿಷೇಧಿಸಿಯೂ ಇಲ್ಲ. ಮೊಟ್ಟ ಮೊದಲ ಬಾರಿಗೆ ಸಲಿಂಗ ಮದುವೆಯನ್ನು ಕಾನೂನು ಮಾಡಿ ಅದನ್ನು ಒಪ್ಪಿಕೊಂಡಿದ್ದ ನೆದರ್ಲ್ಯಾಂಡ್ ದೇಶವಾಗಿದೆ. 2000ನೇ ಇಸವಿಯಲ್ಲಿಯೇ ಈ ಪುಟ್ಟ ದೇಶ ಈ ರೀತಿ ಕಾನೂನು ಜಾರಿ ಮಾಡಿತ್ತು.



Click it and Unblock the Notifications