Latest Updates
-
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು
ಬುದ್ಧ ಪೂರ್ಣಿಮೆಯಂದೇ ಚಂದ್ರಗ್ರಹಣ: ಈ ದಿನ ಹೀಗೆ ಮಾಡಿದರೆ ಪುಣ್ಯಫಲ ದೊರೆಯುವುದು
ವರ್ಷದ ಎರಡನೇ ಗ್ರಹಣ, ಮೊದಲ ಚಂದ್ರಗ್ರಹಣ ಮೇ 5ರಂದು ಸಂಭವಿಸಲಿದೆ. ಏಪ್ರಿಲ್ 20ಕ್ಕೆ ಸೂರ್ಯಗ್ರಹಣ ಸಂಭವಿಸಿದ 15 ದಿನದಲ್ಲಿ ವೈಶಾಖ ಮಾಸದ ಶುಕ್ಲಪಕ್ಷದ ಪೂರ್ಣಿಮೆಯೆಂದು ಚಂದ್ರಗ್ರಹಣ ಸಂಭವಿಸಲಿದೆ. ಈ ಚಂದ್ರಗ್ರಹಣ ಬುದ್ಧ ಪೂರ್ಣಿಮೆ ದಿನವೇ ಸಂಭವಿಸಲಿರುವುದು ಕಾಕತಾಳೀಯವೇ ಸರಿ. ಹಿಂದೂ ಧರ್ಮದಲ್ಲಿ ಬುದ್ಧ ಪೂರ್ಣಿಮೆಯನ್ನು ತುಂಬಾ ವಿಶೇಷವಾದ ದಿನವೆಂದು ಪರಿಗಣಿಸಲಾಗಿದೆ.
ಮನುಕುಲಕ್ಕೆ ಉಪಯುಕ್ತವಾಗುವ ಅನೇಕ ಸಿದ್ಧಾಂತಗಳನ್ನು ನೀಡಿರುವ ಮಹಾನ್ ಗೌತಮ ಬುದ್ಧ. ಗೌತಮ ಬುದ್ಧ ವೈಶಾಖ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯೆಂದು ಜನಿಸಿದರು. ಹಿಂದೂ ನಂಬಿಕೆಗಳ ಪ್ರಕಾರ ವಿಷ್ಣುವಿನ ದಶ ಅವತಾರಗಳನ್ನು ಬುದ್ಧನ ಅವತಾರ ಕೂಡ ಒಂದು ಎಂದು ಹೇಳಲಾಗುವುದು.

ಬುದ್ಧನ ತತ್ವಗಳು ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ.ಇದನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆದರೆ ಬದುಕು ತುಂಬಾನೇ ಸುಂದರವಾಗುವುದು. ಇದೀಗ ಎರಡು ಮಹತ್ವದ ಘಟನೆಗಳು ಒಂದೇ ದಿನ ಸಂಭವಿಸಿರುವುದರಿಂದ ಮೇ 5 ತುಂಬಾನೇ ವಿಶೇಷವಾಗಿದೆ. ಈ ದಿನ ಮಾಡುವ ದಾನ ಧರ್ಮಗಳಿಂದ ವಿಶೇಷ ಫಲ ಪಡೆಯುವಿರಿ.
ಈ ದಿನ ಪುಣ್ಯ ಸ್ನಾನ ಹಾಗೂ ದಾನದ ಮಹತ್ವ
ನೀವು ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಬಡವರಿಗೆ ದಾನ ಮಾಡುವುದರಿಂದ ಬುದ್ಧ ಆದರ್ಶ ಪಾಲಿಸಿದಂತಾಗುವುದು ಅಲ್ಲದೆ ಚಂದ್ರಗ್ರಹಣದಂದು ದಾನ ಮಾಡಿದ ಶುಭ ಫಲವನ್ನು ಪಡೆಯುತ್ತೀರಿ. ಈ ದಿನ ದಾನಗಳನ್ನು ಮಾಡುವುದರಿಂದ ನಿಮ್ಮ ಕಷ್ಟಗಳು ದೂರಾಗುವುದು ಎಂಬ ನಂಬಿಕೆ ಇದೆ.
ವೈಶಾಖ ಮಾಸದ ಪೂರ್ಣಿಮೆಯಂದು ಏನು ಮಾಡಬೇಕು?
* ಸೂರ್ಯೋದಕ್ಕೆ ಮುನ್ನವೇ ಎದ್ದೇಳಿ
* ಪುಣ್ಯ ನದಿಯಲ್ಲಿ ಅಥವಾ ನಿಮ್ಮ ಸ್ನಾನದ ನೀರಿಗೆ ಸ್ವಲ್ಪ ಗಂಗಾ ಜಲ ಸೇರಿಸಿ ಪುಣ್ಯ ಸ್ನಾನ ಮಾಡಿ
* ಈ ದಿನ ಶ್ರೀ ವಿಷ್ಣುವಿಗೆ ತುಪ್ಪದ ದೀಪ ಹಚ್ಚಿ ಆರಾಧನೆ ಮಾಡಿ.
* ಮನೆಯ ಮುಂದುಗಡೆ ಅರಿಶಿಣದಿಂದ ಸ್ವಸ್ತಿಕ ಬಿಡಿಸಿ.
* ಬೋಧಿ ವೃಕ್ಷದ ಸುತ್ತ ದೀಪ ಹಚ್ಚಿ, ಹೂಗಳನ್ನು ಅರ್ಪಿಸಿ
* ನಿರ್ಗತಿಕರಿಗೆ ಆಹಾರ, ಬಟ್ಟೆಗಳನ್ನು ದಾನ ಮಾಡಿ.
* ಮನೆಯಲ್ಲಿ ಗೂಡಿನಲ್ಲಿ ಪಕ್ಷಿಯಿದ್ದರೆ ಬಂಧ ಮುಕ್ತಗೊಳಿಸಿ
* ನಂತರ ಚಂದ್ರನಿಗೆ ಆರ್ಘ್ಯ ಅರ್ಪಿಸಿ.
ಏನು ಮಾಡಬಾರದು?
* ಈ ದಿನ ಮಾಂಸ, ಮದ್ಯ ಸೇವಿಸಬಾರದು
* ಯಾರಿಗೂ ತೊಂದರೆ ನೀಡಬೇಡಿ
* ಕೆಟ್ಟ ಪದಗಳಿಂದ ನಿಂದಿಸಬಾರದು
* ಸುಳ್ಳು ಹೇಳಬಾರದು
ಭಾರತದಲ್ಲಿ ಚಂದ್ರಗ್ರಹಣ ಗೋಚರಿಸುವುದೇ?
2023ರ ಮೊದಲ ಚಂದ್ರಗ್ರಹಣ ಬಾರತದಲ್ಲಿ ಗೋಚರಿಸುವುದಿಲ್ಲ, ಆದ್ದರಿಂದ ಭಾರತದಲ್ಲಿ ಇದರ ಸೂತಕವಿಲ್ಲ. ಆದರೆ ಈ ದಿನ ದಾನಗಳನ್ನು ಮಾಡುವುದರಿಂದ ಇದರ ಪುಣ್ಯದ ಫಲ ದೊರೆಯಲಿದೆ. ವರ್ಷದ ಮೊದಲ ಚಂದ್ರಗ್ರಹಣವು ಮೇ 5 ರಂದು ರಾತ್ರಿ 08.44 ಕ್ಕೆ ಪ್ರಾರಂಭವಾಗಲಿದ್ದು, ರಾತ್ರಿ 01.02 ಕ್ಕೆ ಕೊನೆಗೊಳ್ಳಲಿದೆ. ಈ ನೆರಳು ಚಂದ್ರಗ್ರಹಣದ ಒಟ್ಟು ಅವಧಿ 4 ಗಂಟೆ 15 ನಿಮಿಷಗಳು. ಈ ಪೆನಂಬ್ರಾಲ್ ಚಂದ್ರಗ್ರಹಣವು ಏಷ್ಯಾ, ಯುರೋಪ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಆಗ್ನೇಯ ಯುರೋಪ್ನಲ್ಲಿ ಗೋಚರಿಸುತ್ತದೆ.



Click it and Unblock the Notifications
