Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಬುದ್ಧ ಪೂರ್ಣಿಮೆಯಂದೇ ಚಂದ್ರಗ್ರಹಣ: ಈ ದಿನ ಹೀಗೆ ಮಾಡಿದರೆ ಪುಣ್ಯಫಲ ದೊರೆಯುವುದು
ವರ್ಷದ ಎರಡನೇ ಗ್ರಹಣ, ಮೊದಲ ಚಂದ್ರಗ್ರಹಣ ಮೇ 5ರಂದು ಸಂಭವಿಸಲಿದೆ. ಏಪ್ರಿಲ್ 20ಕ್ಕೆ ಸೂರ್ಯಗ್ರಹಣ ಸಂಭವಿಸಿದ 15 ದಿನದಲ್ಲಿ ವೈಶಾಖ ಮಾಸದ ಶುಕ್ಲಪಕ್ಷದ ಪೂರ್ಣಿಮೆಯೆಂದು ಚಂದ್ರಗ್ರಹಣ ಸಂಭವಿಸಲಿದೆ. ಈ ಚಂದ್ರಗ್ರಹಣ ಬುದ್ಧ ಪೂರ್ಣಿಮೆ ದಿನವೇ ಸಂಭವಿಸಲಿರುವುದು ಕಾಕತಾಳೀಯವೇ ಸರಿ. ಹಿಂದೂ ಧರ್ಮದಲ್ಲಿ ಬುದ್ಧ ಪೂರ್ಣಿಮೆಯನ್ನು ತುಂಬಾ ವಿಶೇಷವಾದ ದಿನವೆಂದು ಪರಿಗಣಿಸಲಾಗಿದೆ.
ಮನುಕುಲಕ್ಕೆ ಉಪಯುಕ್ತವಾಗುವ ಅನೇಕ ಸಿದ್ಧಾಂತಗಳನ್ನು ನೀಡಿರುವ ಮಹಾನ್ ಗೌತಮ ಬುದ್ಧ. ಗೌತಮ ಬುದ್ಧ ವೈಶಾಖ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯೆಂದು ಜನಿಸಿದರು. ಹಿಂದೂ ನಂಬಿಕೆಗಳ ಪ್ರಕಾರ ವಿಷ್ಣುವಿನ ದಶ ಅವತಾರಗಳನ್ನು ಬುದ್ಧನ ಅವತಾರ ಕೂಡ ಒಂದು ಎಂದು ಹೇಳಲಾಗುವುದು.

ಬುದ್ಧನ ತತ್ವಗಳು ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ.ಇದನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆದರೆ ಬದುಕು ತುಂಬಾನೇ ಸುಂದರವಾಗುವುದು. ಇದೀಗ ಎರಡು ಮಹತ್ವದ ಘಟನೆಗಳು ಒಂದೇ ದಿನ ಸಂಭವಿಸಿರುವುದರಿಂದ ಮೇ 5 ತುಂಬಾನೇ ವಿಶೇಷವಾಗಿದೆ. ಈ ದಿನ ಮಾಡುವ ದಾನ ಧರ್ಮಗಳಿಂದ ವಿಶೇಷ ಫಲ ಪಡೆಯುವಿರಿ.
ಈ ದಿನ ಪುಣ್ಯ ಸ್ನಾನ ಹಾಗೂ ದಾನದ ಮಹತ್ವ
ನೀವು ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಬಡವರಿಗೆ ದಾನ ಮಾಡುವುದರಿಂದ ಬುದ್ಧ ಆದರ್ಶ ಪಾಲಿಸಿದಂತಾಗುವುದು ಅಲ್ಲದೆ ಚಂದ್ರಗ್ರಹಣದಂದು ದಾನ ಮಾಡಿದ ಶುಭ ಫಲವನ್ನು ಪಡೆಯುತ್ತೀರಿ. ಈ ದಿನ ದಾನಗಳನ್ನು ಮಾಡುವುದರಿಂದ ನಿಮ್ಮ ಕಷ್ಟಗಳು ದೂರಾಗುವುದು ಎಂಬ ನಂಬಿಕೆ ಇದೆ.
ವೈಶಾಖ ಮಾಸದ ಪೂರ್ಣಿಮೆಯಂದು ಏನು ಮಾಡಬೇಕು?
* ಸೂರ್ಯೋದಕ್ಕೆ ಮುನ್ನವೇ ಎದ್ದೇಳಿ
* ಪುಣ್ಯ ನದಿಯಲ್ಲಿ ಅಥವಾ ನಿಮ್ಮ ಸ್ನಾನದ ನೀರಿಗೆ ಸ್ವಲ್ಪ ಗಂಗಾ ಜಲ ಸೇರಿಸಿ ಪುಣ್ಯ ಸ್ನಾನ ಮಾಡಿ
* ಈ ದಿನ ಶ್ರೀ ವಿಷ್ಣುವಿಗೆ ತುಪ್ಪದ ದೀಪ ಹಚ್ಚಿ ಆರಾಧನೆ ಮಾಡಿ.
* ಮನೆಯ ಮುಂದುಗಡೆ ಅರಿಶಿಣದಿಂದ ಸ್ವಸ್ತಿಕ ಬಿಡಿಸಿ.
* ಬೋಧಿ ವೃಕ್ಷದ ಸುತ್ತ ದೀಪ ಹಚ್ಚಿ, ಹೂಗಳನ್ನು ಅರ್ಪಿಸಿ
* ನಿರ್ಗತಿಕರಿಗೆ ಆಹಾರ, ಬಟ್ಟೆಗಳನ್ನು ದಾನ ಮಾಡಿ.
* ಮನೆಯಲ್ಲಿ ಗೂಡಿನಲ್ಲಿ ಪಕ್ಷಿಯಿದ್ದರೆ ಬಂಧ ಮುಕ್ತಗೊಳಿಸಿ
* ನಂತರ ಚಂದ್ರನಿಗೆ ಆರ್ಘ್ಯ ಅರ್ಪಿಸಿ.
ಏನು ಮಾಡಬಾರದು?
* ಈ ದಿನ ಮಾಂಸ, ಮದ್ಯ ಸೇವಿಸಬಾರದು
* ಯಾರಿಗೂ ತೊಂದರೆ ನೀಡಬೇಡಿ
* ಕೆಟ್ಟ ಪದಗಳಿಂದ ನಿಂದಿಸಬಾರದು
* ಸುಳ್ಳು ಹೇಳಬಾರದು
ಭಾರತದಲ್ಲಿ ಚಂದ್ರಗ್ರಹಣ ಗೋಚರಿಸುವುದೇ?
2023ರ ಮೊದಲ ಚಂದ್ರಗ್ರಹಣ ಬಾರತದಲ್ಲಿ ಗೋಚರಿಸುವುದಿಲ್ಲ, ಆದ್ದರಿಂದ ಭಾರತದಲ್ಲಿ ಇದರ ಸೂತಕವಿಲ್ಲ. ಆದರೆ ಈ ದಿನ ದಾನಗಳನ್ನು ಮಾಡುವುದರಿಂದ ಇದರ ಪುಣ್ಯದ ಫಲ ದೊರೆಯಲಿದೆ. ವರ್ಷದ ಮೊದಲ ಚಂದ್ರಗ್ರಹಣವು ಮೇ 5 ರಂದು ರಾತ್ರಿ 08.44 ಕ್ಕೆ ಪ್ರಾರಂಭವಾಗಲಿದ್ದು, ರಾತ್ರಿ 01.02 ಕ್ಕೆ ಕೊನೆಗೊಳ್ಳಲಿದೆ. ಈ ನೆರಳು ಚಂದ್ರಗ್ರಹಣದ ಒಟ್ಟು ಅವಧಿ 4 ಗಂಟೆ 15 ನಿಮಿಷಗಳು. ಈ ಪೆನಂಬ್ರಾಲ್ ಚಂದ್ರಗ್ರಹಣವು ಏಷ್ಯಾ, ಯುರೋಪ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಆಗ್ನೇಯ ಯುರೋಪ್ನಲ್ಲಿ ಗೋಚರಿಸುತ್ತದೆ.



Click it and Unblock the Notifications
