Latest Updates
-
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ?
ಜೂ.24-ಜು. 17ರವರೆಗೆ ಬುಧಾದಿತ್ಯ ಯೋಗ: ಈ ರಾಶಿಯವರಿಗೆ ಅದೃಷ್ಟದ ಅವಧಿ
ಬುಧಾದಿತ್ಯ ಯೋಗವನ್ನು ಅದೃಷ್ಟದ ಯೋಗವೆಂದು ಪರಿಗಣಿಸಲಾಗಿದೆ. ಯಾವಾಗ ಬುಧ ಹಾಗೂ ಆದಿತ್ಯ ಒಂದೇ ರಾಶಿಯಲ್ಲಿ ಸಂಯೋಗವಾಗುವುದೋ ಆವಾಗ ಬುಧಾದಿತ್ಯ ಯೋಗ ಉಂಟಾಗುವುದು. ಜೂನ್ 24ಕ್ಕೆ ಬುಧ ಮಿಥುನ ರಾಶಿಯನ್ನು ಪ್ರವೇಶಿಸಲಿದೆ, ಸೂರ್ಯ ಈಗಾಗಲೇ ಮಿಥುನ ರಾಶಿಯಲ್ಲಿದೆ. ಬುಧ ಹಾಗೂ ಸೂರ್ಯ ಮಿಥುನ ರಾಶಿಯಲ್ಲಿ ಇರುವಾಗ ಇನ್ನು 15 ದಿನ ಬುಧಾದಿತ್ಯ ಯೋಗವಿದ್ದು ಈ ರಾಶಿಯವರಿಗೆ ತುಂಬಾ ಅದೃಷ್ಟಕರವಾಗಿರಲಿದೆ.

ಬುಧಾದಿತ್ಯ ಯೋಗದಿಂದ ದೊರೆಯುವ ಪ್ರಯೋಜನಗಳೇನು?
* ಈ ಅವಧಿಯಲ್ಲಿ ವ್ಯಕ್ತಿಯ ಕೀರ್ತಿ ಹೆಚ್ಚಾಗಲಿದೆ.
* ಬ್ಯುಸ್ನೆಸ್, ಮೀಡಿಯಾ, ಸಂವಹನ ಮಾಧ್ಯಮದಲ್ಲಿ ಇರುವವರಿಗೆ ಈ ಅವಧಿ ಅನುಕೂಲಕರವಾಗಿದೆ.
* ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರಲಿದೆ.
* ಬುಧಾದಿತ್ಯ ಯೋಗದಿಂದ ವೃತ್ತಿ ಜೀವನದಲ್ಲಿ ಪ್ರಗತಿಯಾಗಲಿದೆ.
ಈ ಬಾರಿ ಬುಧಾದಿತ್ಯ ಯೋಗ ಈ 3 ರಾಶಿಯವರಿಗೆ ಒಳ್ಳೆಯದಿದೆ
ವೃಷಭ ರಾಶಿ:
ವೃಷಭ ರಾಶಿಯವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನೀವು ಉತ್ತಮವಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದು. ವ್ಯವಹಾರಸ್ಥರು ತಮ್ಮ ಸಂವಹನ ಸಾಮರ್ಥ್ಯದಿಂದ ತಮ್ಮ ವ್ಯವಹಾರದಲ್ಲಿ ಲಾಭವನ್ನು ಗಳಿಸುತ್ತಾರೆ. ಉದ್ಯೋಗಿಗಳಿಗೆ ಬಡ್ತಿ ಸಿಗಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಿಂದ ನಿಮ್ಮ ಕೀರ್ತಿ, ಗೌರವ ಮತ್ತಷ್ಟು ಹೆಚ್ಚಾಗಲಿದೆ. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ನಿಮ್ಮ ಆಸೆಗಳು ನೆರವೇರಲಿದೆ. ವ್ಯಾಪಾರಿಗಳನ್ನು ಒಳ್ಳೆಯ ಲಾಭ ಗಳಿಸುತ್ತಾರೆ. ಏನಾದರೂ ಹೊಸ ಕೆಲಸ ಪ್ರಾರಂಭಿಸಲು ಕೂಡ ಈ ಅವಧಿ ಅನುಕೂಲಕರವಾಗಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೂ ಬುಧಾದಿತ್ಯದ ಈ ಅವಧಿ ಅನುಕೂಲಕರವಾಗಿರಲಿದೆ. ಈ ಸಮಯದಲ್ಲಿ ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಆರ್ಥಿಕವಾಗಿ ಈ ಅವಧಿ ಒಳ್ಳೆಯದಿದೆ. ಈ ಸಮಯದಲ್ಲಿ ಉಳಿತಾಯ ಮಾಡಲು ಸಾಧ್ಯವಾಗುವುದು.



Click it and Unblock the Notifications











