Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಭಾರತದ ಅತ್ಯಂತ ಬಡ ವ್ಯಕ್ತಿ ಯಾರು ಗೊತ್ತಾ? ಇವನ ಆದಾಯ ವಾರ್ಷಿಕ 3 ರೂಪಾಯಿ..!!
ವಿಶ್ವದ ಶ್ರೀಮಂತ ವ್ಯಕ್ತಿ ಯಾರು ಅಂದ್ರೆ ನಾವು ಸುಲಭವಾಗಿ ಎಲಾನ್ ಮಸ್ಕ್ ಎನ್ನುತ್ತೇವೆ. ಹಾಗೆ ಭಾರತದ ಶ್ರೀಮಂತ ಉದ್ಯಮಿ ಯಾರು ಅಂದರೆ ಅಂಬಾನಿ ಅದಾನಿ ಹೆಸರನ್ನು ಕೂಡ ನಾವು ಹೇಳುತ್ತೇವೆ. ಈ ಎಲ್ಲಾ ಶ್ರೀಮಂತರ ಹೆಸರು ನಮಗೆ ಚಿರಪರಿಚಿತ. ಹಾಗೆ ಇವರ ಆಸ್ತಿ ಕುರಿತಾಗಿಯೂ ನೀವು ಹೇಳಿರಬಹುದು. ಆದ್ರೆ ಅತ್ಯಂತ ಬಡ ವ್ಯಕ್ತಿ ಯಾರು ಅಂತ ಕೇಳಿದ್ರೆ ನಿಮಗೆ ಉತ್ತರ ಗೊತ್ತಿದ್ಯಾ?
ಭಾರತದ ಅತ್ಯಂತ ಬಡ ವ್ಯಕ್ತಿ ಯಾರು? ಈ ರೀತಿ ಕೇಳಿದ್ರೆ ಯಾರಿಗೂ ಉತ್ತರ ತಿಳಿದಿರೋದಿಲ್ಲ. ಯಾಕಂದ್ರೆ ಈಗ ಭಿಕ್ಷುಕರು ಕೂಡ ದಿನಕ್ಕೆ ಸಾವಿರಾರು ರೂಪಾಯಿ ದುಡಿಯುವ ಹಾಗೆ ಸಣ್ಣಪುಟ್ಟ ಕೆಲಸ ಮಾಡುವವರು ಕೂಡ ವರ್ಷಕ್ಕೆ ಒಂದಿಷ್ಟು ಹಣ ಗಳಿಸುತ್ತಾರೆ. ಹಾಗೆ ವೃದ್ಧರು ಕೂಡ ಸರ್ಕಾರದ ಯಾವುದಾದರು ಯೋಜನೆಗಳ ಫಲಾನುಭವಿಗಳಾಗಿರುತ್ತಾರೆ.

ಹೀಗಾಗಿ ಈಗ ತೀರ ಬಡವರು ಯಾರು ಎಂಬುದನ್ನು ಪತ್ತೆ ಮಾಡುವುದು ಕಷ್ಟಕರ. ಆದ್ರೆ ಇಲ್ಲೊಬ್ಬ ವ್ಯಕ್ತಿಯನ್ನ ಜನರೇ ಆತ ಭಾರತದ ಅತ್ಯಂತ ಬಡ ವ್ಯಕ್ತಿ ಎಂದು ಕರೆದಿದ್ದಾರ. ಅಚ್ಚರಿ ವಿಚಾರ ಏನೆಂದರೆ ಇಲ್ಲೊಬ್ಬ ವ್ಯಕ್ತಿಯ ಆದಾಯ ವರ್ಷಕ್ಕೆ ಕೇವಲ 3 ರೂಪಾಯಿ. ಹೌದು ನಿಮಗೆ ಅಚ್ಚರಿ ಎನಿಸುತ್ತಿರಬಹುದು, ದಿನಕ್ಕೊಬ್ಬನಿಗೆ 100 ರೂಪಾಯಿ ಇದ್ದರೂ ಮೂರು ಹೊತ್ತಿನ ಊಟ ಮಾಡುವುದು ಕಷ್ಟವಾಗುತ್ತೆ. ಆದ್ರೆ ಈತ ಕೇವಲ 3 ರೂಪಾಯಿಯಲ್ಲಿ ಇಡೀ ವರ್ಷ ಕಳೆದಿರೋದು ಹೇಗೆ ಎಂಬ ಅಚ್ಚರಿ ಮೂಡುವುದು ಸಹಜ.
ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ರೈತನೊಬ್ಬನ ವಾರ್ಷಿಕ ಆದಾಯ ಕೇವಲ 3 ರೂಪಾಯಿ. ಆದ್ರೆ ಇದು ಸರ್ಕಾರಿ ದಾಖಲಾತಿಗಳಲ್ಲಿ ಮಾತ್ರ. ಹೌದು ರೈನೊಬ್ಬನ ಈ ರೀತಿ ವಾರ್ಷಿಕ ಆದಾಯದ ದಾಖಲಾತಿಯು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತಹಶೀಲ್ದಾರ್ ಅವರ ಅಧಿಕೃತ ಸೀಲ್ ಮತ್ತು ಸಹಿ ಕೂಡ ಇರುವ ಈ ದಾಖಲಾತಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆತ ಭಾರತದ ಅತ್ಯಂತ ಬಡ ವ್ಯಕ್ತಿ ಎಂದು ಜನರೇ ಗುರುತಿಸಿದ್ದಾರೆ.
ಸತ್ನಾ ಜಿಲ್ಲೆಯ ಕೋಥಿ ತಹಶೀಲ್ ಪ್ರದೇಶದ ನಿವಾಸಿ ರಾಮಸ್ವರೂಪ್ ಅವರಿಗೆ ನೀಡಲಾದ ಆದಾಯ ಪ್ರಮಾಣಪತ್ರದ ಫೋಟೋ ವೈರಲ್ ಆಗಿದೆ, ಅದ್ರಲ್ಲೂ ತಹಶೀಲ್ದಾರ್ ಸೌರಭ್ ದ್ವಿವೇದಿ ಅವರ ಸಹಿ ಕೂಡ ಇರುವುದು ಗಮನಿಸಬಹುದು. ಈ ದಾಖಲೆಯ ಪ್ರಕಾರ ರೈತ ರಾಮಸ್ವರೂಪ್ ತಿಂಗಳಿಗೆ ಕೇವಲ 25 ಪೈಸೆ ಅಷ್ಟು ಮಾತ್ರ ಗಳಿಸುತ್ತಾರೆ ಎಂದು ಅರ್ಥೈಸಬಹುದು.
ಆದ್ರೆ ಈ ಘಟನೆ ಭಾರೀ ಟೀಕೆ ಹಾಗೂ ಸರ್ಕಾರಿ ದಾಖಲೆಗಳಲ್ಲಿನ ತಪ್ಪುಗಳ ಕುರಿತಾಗಿ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತ ಆಡಳಿತ ಮಂಡಳಿ ತಕ್ಷಣವೇ ಎರಡು ದಿನದಲ್ಲಿ ರೈತನ ಆದಾಯ ವಾರ್ಷಿಕ 30,000 ಅಂದರೆ ತಿಂಗಳಿಗೆ 2,500 ಎಂದು ನಮೂದಿಸಿರುವ ಹೊಸ ಪ್ರಮಾಣ ಪತ್ರವನ್ನು ನೀಡಿದ್ದಾರೆ. ಈ ಮೊದಲು ತಹಶೀಲ್ದಾರ್ ಅವರ ಸಹಿ ಇದ್ದ ದಾಖಲಾತಿಯಲ್ಲಿ ಇಷ್ಟೊಂದು ದೊಡ್ಡ ತಪ್ಪಾಗಿದ್ದರೂ ಯಾರೊಬ್ಬರು ಗುರುತಿಸದೆ ಇರುವುದು ದೊಡ್ಡ ಪ್ರಮಾದ ಎನ್ನಬಹುದು.
ಆದ್ರೆ ರೈತರ ಯಾವುದಾದರು ಸರ್ಕಾರಿ ದಾಖಲೆಗಳಲ್ಲಿ ತಪ್ಪಾಗಿದ್ದರೆ ಅದನ್ನು ಸರಿಪಡಿಸಲು ಆತ ಹತ್ತಾರು ದಿನ ಹತ್ತಾರು ಕಚೇರಿಗಳಿಗೆ ಅಲೆಯಬೇಕಾಗುತ್ತದೆ. ಅದನ್ನು ಸರಿಪಡಿಸಲು ಮಧ್ಯವರ್ತಿಗಳ ಹಿಡಿಯಬೇಕು, ಹಣ ಖರ್ಚು ಮಾಡಬೇಕು. ಈ ಫೈಲ್ಗಳು ಟೇಬಲ್ ಇಂದ ಟೇಬಲ್ಗೆ ಹೋಗಬೇಕಾದ್ರೆ ಲಂಚ ನೀಡಬೇಕು. ಆದ್ರೆ ಅಧಿಕಾರಿಗಳೇ ತಪ್ಪು ಮಾಡಿದ್ರೆ ದಿನದಲ್ಲಿ ಅದನ್ನು ತಿದ್ದುಪಡಿ ಮಾಡಿ ಹೊಸ ದಾಖಲೆಯು ನಿಮ್ಮ ಕೈಸೇರುತ್ತೆ. ಇದು ಹೇಗೆ ಸಾಧ್ಯ ಎಂಬ ಪ್ರಶ್ನೆ ಎದ್ದಿದೆ.



Click it and Unblock the Notifications