Latest Updates
-
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ!
ಈ ರೀತಿಯ ನಡವಳಿಕೆ ಇದ್ದರೆ ಬಿಟ್ಟು ಬಿಡಿ ! ಇಲ್ಲದಿದ್ದರೆ ಸಂಸಾರಕ್ಕೆ ಆಪತ್ತು
ಆಚಾರ್ಯ ಚಾಣಕ್ಯರು ಒರ್ವ ಶ್ರೇಷ್ಠ ಅರ್ಥ ಶಾಸ್ತ್ರಜ್ಞರು ಮಾತ್ರವಲ್ಲದೇ ಇವರೊಬ್ಬರು ಮಹಾನ್ ಜ್ಞಾನಿ, ವಿಧ್ವಾಂಸರೂ ಕೂಡ ಹೌದು. ಒರ್ವ ಸಾಮಾನ್ಯ ಧನ ಕಾಯುವ ಹುಡುಗನಿಗೆ ತರಭೇಟಿ ಕೊಟ್ಟು ಮುಂದೆ ಆತ ಮೌರ್ಯ ಸಾಮ್ರಾಜ್ಯ ಸ್ಥಾಪನೆ ಮಾಡೋದಕ್ಕೆ ಕಾರಣರಾಗುತ್ತಾರೆ. ಇಂತಹ ಮಹಾತ್ಮ ಚಾಣಕ್ಯರು ಹಾಕಿಕೊಟ್ಟ ದಾರಿಯಲ್ಲಿ ನಡೆದುಕೊಂಡು ಬಂದವರು ಯಾರೂ ಕೂಡ ಇದುವರೆಗೂ ಸೋಲು ಕಂಡಿದ್ದೇ ಇಲ್ಲ.
ವೈವಾಹಿಕ ಜೀವನದ ಬಗ್ಗೆ ಕೂಡ ಚಾಣಕ್ಯರು ಅನೇಕ ನೀತಿಗಳನ್ನು ರೂಪಿಸಿದ್ದಾರೆ. ಜೀವನದಲ್ಲಿ ಖುಷಿಯಾಗಿರಲು ಏನು ಮಾಡಬೇಕು, ದಾಂಪತ್ಯದಲ್ಲಿ ದುಃಖವನ್ನು ಹೋಗಲಾಡಿಸೋದು ಹೇಗೆ ಅನ್ನೋದ್ರ ಬಗ್ಗೆಯೂ ತಿಳಿಸಿದ್ದಾರೆ. ಸದ್ಯ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಳ್ಳದಿರಲು ಏನು ಮಾಡ್ಬೇಕು ಅನ್ನೋದ್ರ ಬಗ್ಗೆ ತಿಳಿಸಿದ್ದಾರೆ. ಚಾಣಕ್ಯನ ಈ ನೀತಿಗಳನ್ನು ಪಾಲಿಸಿದ್ರೆ ದಾಂಪತ್ಯದಲ್ಲಿ ಬಿರುಕು ಮೂಡೋದಕ್ಕೆ ಸಾಧ್ಯವೇ ಇಲ್ಲ.

1. ಮೋಸ ಮಾಡಬಾರದು
ಚಾಣಕ್ಯರು ತಮ್ಮ ನೀತಿಯಲ್ಲಿ ಮೋಸ ಮಾಡೋದು ವಿಷ ಇದ್ದ ಹಾಗೆ ಎಂದು ಹೇಳಿದ್ದಾರೆ. ಕೇವಲ ಪತ್ನಿ- ಪತ್ನಿ ಒಬ್ಬರಿಗೊಬ್ಬರು ಮೋಸ ಮಾಡೋದು ಮಾತ್ರವಲ್ಲ. ಸಂಬಂಧದಲ್ಲಿ ಯಾರು ಯಾರಿಗೂ ಮೋಸ ಮಾಡಬಾರದು ಎಂದು ಹೇಳಿದ್ದಾರೆ. ಒಂದು ವೇಳೆ ಪತಿ- ಪತ್ನಿ ತಮ್ಮ ಸಂಬಂಧವನ್ನು ಗಟ್ಟಿ ಮಾಡೋದಕ್ಕೆ ಇಚ್ಚಿಸಿದ್ದೇ ಆದರೆ ಈ ಸಂಬಂಧದಲ್ಲಿ ಮೋಸಕ್ಕೆ ಅವಕಾಶವೇ ಇರಬಾರದು ಎಂದಿದ್ದಾರೆ. ಹೀಗಾಗಿ ಯಾವ ಸಂಬಂಧದಲ್ಲಿ ಮೋಸ ಇರುತ್ತದೆಯೋ ಅಂತಹ ಸಂಬಂಧದಕ್ಕೆ ಬೇಗನೆ ಬಿರುಕು ಕಾಣಿಸಿಕೊಳ್ಳುತ್ತದೆ.
2. ಸುಳ್ಳು ಹೇಳಬಾರದು
ಚಾಣಕ್ಯ ಪ್ರಕಾರ ಸುಳ್ಳುಗಳನ್ನೇ ಹೇಳಿ ಕಟ್ಟಿದ ಸಂಸಾರ ಖಂಡಿತವಾಗಿ ಉಳಿಯೋದಿಕ್ಕೆ ಸಾಧ್ಯವೇ ಇಲ್ಲ. ಒಂದು ವೇಳೆ ಸಂಬಂಧದಲ್ಲಿ ಸುಳ್ಳು ಹೇಳಿರೋದು ಸಾಭೀತಾದರೆ ಆ ಸಂಬಂಧದಲ್ಲಿ ಬಿರುಕು ಕಾಣಿಸಿಕೊಳ್ಳೋದಕ್ಕೆ ಶುರುವಾಗುತ್ತದೆ. ಹೀಗಾಗಿ ಸುಳ್ಳಿನಿಂದ ಯಾವತ್ತೂ ದೂರವಿರಿ. ಸಂಬಂಧವನ್ನು ಯಾವಾಗಲೂ ಸತ್ಯ, ನಂಬಿಕೆಯ ಸರಪಳಿಯಿಂದ ಕಟ್ಟಬೇಕೇ ವಿನಹ ಸುಳ್ಳಿನಿಂದಲ್ಲ. ಸುಳ್ಳಿನಿಂದ ಸಂಸಾರ ಇಂದಲ್ಲ ನಾಳೆ ಕೊನೆಯಾಗುತ್ತದೆ.
3. ಕೋಪ ಮಾಡಿಕೊಳ್ಳಬಾರದು
ಚಾಣಕ್ಯನ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೂ ಕೋಪ ನಿಯಂತ್ರಿಸಿಕೊಳ್ಳುವ ಶಕ್ತಿ ಇರಬೇಕು. ಕೋಪ ಎಂತಹ ಸಂಬಂಧದಲ್ಲೂ ಬಿರುಕು ಕಾಣಿಸಿಕೊಳ್ಳೋದಕ್ಕೆ ಕಾರಣವಾಗುತ್ತದೆ. ಕೋಪದಲ್ಲಿ ಆಡಿದ ಮಾತನ್ನು ಹಿಂತೆಗೆದುಕೊಳ್ಳೋದಕ್ಕೆ ಸಾಧ್ಯವೇ ಇಲ್ಲ. ನಮ್ಮ ಕಟುವಾದ ಮಾತಿನಿಂದ ನೊಂದುಕೊಂಡ ನಮ್ಮ ಸಂಗಾತಿ ಮತ್ತೆಂದಿಗೂ ನಮ್ಮ ಜೊತೆಗೆ ಬದುಕೋದಕ್ಕೆ ಇಷ್ಟ ಪಡೋದಿಲ್ಲ. ಸುಖಾ ಸುಮ್ಮನೆ ಕೋಪ ಮಾಡಿಕೊಳ್ಳುವ ಬದಲು ಆ ಪರಿಸ್ಥಿತಿಯನ್ನು ಅರಿತುಕೊಂಡು ಬಾಳಿದರೆ ಉತ್ತಮ.
4. ಒಬ್ಬರಿಗಿಂತ ಮತ್ತೊಬ್ಬರು ಮೇಲೂ ಎಂದು ಅಂದುಕೊಳ್ಳಬಾರದು
ಗಂಡ-ಹೆಂಡತಿ ಸಂಬಂಧದಲ್ಲಿ ಯಾರೂ ಮೇಲಿಲ್ಲ ಹಾಗೂ ಯಾರು ಕೂಡ ಕೀಳಲ್ಲ. ಇಬ್ಬರೂ ಕೂಡ ಸಮಾನರು. ಆದರೆ ಕೆಲವೊಂದು ಸಂಬಂಧಗಳಲ್ಲಿ ಗಂಡಂದಿರು ಪ್ರಾಬಲ್ಯವನ್ನು ಪ್ರದರ್ಶಿಸುತ್ತಾರೆ. ಇನ್ನೂ ಕೆಲವು ಸಂಬಂಧಗಳಲ್ಲಿ ಪತ್ನಿಯರು ಪ್ರಾಬಲ್ಯ ಸಾಧಿಸುತ್ತಾರೆ. ಸಂಬಂಧ ಹೀಗಿದ್ದರೆ ಖಂಡಿತ ಉಳಿಯೋದಿಲ್ಲ. ನಿಧಾನವಾಗಿ ಬಿರುಕು ಕಾಣಿಸಿಕೊಂಡು ಒಂದಲ್ಲ ಒಂದು ದಿನ ಒಡೆದು ಹೋಗುತ್ತದೆ.
ದಾಂಪತ್ಯ ಜೀವನ ಮೂರು ಗಂಟಿನ ನಂಟಿನಲ್ಲಿ ಭದ್ರವಾಗಬೇಕು. ಅದನ್ನು ಬಿಟ್ಟು ಬಿಕ್ಕ ಪುಟ್ಟ ವಿಚಾರಗಳಿಗೆ ಜಗಳವಾಡಿ ಸಂಬಂಧ ಹಾಳು ಮಾಡಿಕೊಳ್ಳಬಾರದು.



Click it and Unblock the Notifications
