Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಪತ್ನಿಯ ಬಳಿ ಈ ನಾಲ್ಕು ವಿಚಾರಗಳ ಬಗ್ಗೆ ಹೇಳಲೇಬೇಡಿ ಅಂತಾರೆ ಚಾಣಕ್ಯ
ಚಾಣಕ್ಯನು ಸಾಮಾನ್ಯ ಜನರ ಜೀವನಕ್ಕೆ ಬೇಕಾಗಿರುವ ಕೆಲವೊಂದು ನೀತಿಗಳನ್ನು ರೂಪಿಸಿದ್ದಾರೆ. ಇಂದಿಗೂ ಜನ ಅದನ್ನು ಪಾಲಿಸುತ್ತಿದ್ದಾರೆ. ಚಾಣಕ್ಯ ನೀತಿಯಂತೆ ಜೀವನವನ್ನು ನಡೆಸಿದವರು ಬದುಕಿನಲ್ಲಿ ಯಶಸ್ವಿಯಾಗಿದ್ದಾರೆ.
ಸುಖ ಸಂಸಾರ ನಡೆಸೋದಕ್ಕೂ ಚಾಣಕ್ಯ ಕೆಲವೊಂದು ನೀತಿಗಳನ್ನು ರೂಪಿಸಿದ್ದಾರೆ. ಅವರ ಪ್ರಕಾರ ಗಂಡ-ಹೆಂಡತಿ ಒಬ್ಬರಿಗೊಬ್ಬರು ಪ್ರಶಂಸೆ ನೀಡಬೇಕು. ಸಮಸ್ಯೆ ಬಂದಾಗ ಅದನ್ನು ಒಟ್ಟಾಗಿ ಎದುರಿಸಬೇಕು. ಇನ್ನೂ ಕೆಲವೊಂದು ವಿಚಾರಗಳು ಗಂಡ-ಹೆಂಡತಿಯ ಮಧ್ಯೆ ಇರಬೇಕೇ ಹೊರತು ಅದನ್ನು ಬೇರೆ ಯಾರೊಂದಿಗೂ ಹಂಚಿಕೊಳ್ಳ ಬಾರದು ಅಂತ ಹೇಳಿದ್ದಾರೆ.

ಅದ್ರಲ್ಲೂ ಚಾಣಕ್ಯನ ಪ್ರಕಾರ ಕೆಲವೊಂದು ವಿಚಾರಗಳನ್ನು ಪತ್ನಿಯ ಬಳಿ ಹೇಳಲೇ ಬಾರದು. ಹಾಗಾದ್ರೆ ಪತ್ನಿಯ ಬಳಿ ಹೇಳಬಾರದಂತಹ ವಿಚಾರಗಳು ಯಾವುದು ಅನ್ನೋದನ್ನ ಹೇಳ್ತೀವಿ.
1. ಅವಮಾನ
ಮನುಷ್ಯ ಅಂದಮೇಲೆ ಆತನಿಗೆ ಅವಮಾನ, ದುಃಖ, ನೋವುಗಳಾಗೋದು ಸಹಜ. ಅದ್ರಲ್ಲೂ ಚಾಣಕ್ಯನ ಪ್ರಕಾರ ಪುರುಷರು ಮನೆ ಹೊರಗಡೆ ಹೋಗಿ ಕೆಲಸ ಮಾಡೋದ್ರಿಂದ ಕೆಲವೊಂದು ಸಾರಿ ಅವಮಾನಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಎಲ್ಲಾ ವಿಚಾರವನ್ನು ನಿಮ್ಮ ಪತ್ನಿಯ ಬಳಿ ಬಂದು ಹೇಳಿಕೊಳ್ಳಬೇಡಿ. ಯಾಕಂದ್ರೆ ಕೆಲವೊಂದು ಮನೆಗಳಲ್ಲಿ ಪತ್ನಿಯು ಗಂಡಂದಿರ ನೋವುಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ. ಇನ್ನೂ ಕೆಲವು ಕಡೆ ಪತಿಯೇನಾದರೂ ತನಗಾದ ಅವಮಾನವನ್ನು ಹೇಳಿಕೊಂಡರೆ ಪತ್ನಿಯು ಪದೇ ಪದೇ ಅದನ್ನೇ ಹೇಳಿ ಆತನ ಮನಸ್ಸಿಗೆ ನೋವು ಮಾಡುತ್ತಾಳೆ.
2. ಸಂಪಾದನೆ
ಚಾಣಕ್ಯನ ಪ್ರಕಾರ ಪತಿಯಾದವನು ತನ್ನ ದುಡಿಮೆಯ ಬಗ್ಗೆ ಪತ್ನಿಯ ಬಳಿ ಹೇಳಿಕೊಳ್ಳಬಾರದು. ಹೇಳಿಕೊಂಡರೂ ಕೂಡ ಇಷ್ಟೇ ಅಂಪಾದನೆ ಇದೆ ಅಂತ ಸರಿಯಾದ ಲೆಕ್ಕ ಕೊಡಬಾರದು. ಯಾಕಂದ್ರೆ ಮುಂದೆ ಆಕೆ ನಿಮ್ಮ ಸಂಪಾದನೆಯ ಲೆಕ್ಕ ಇಟ್ಟು. ನೀವು ಅಗತ್ಯ ಕೆಲಸಕ್ಕೆ ಖರ್ಚು ಮಾಡುತ್ತಿದ್ದರೆ ಅದಕ್ಕೆ ಖರ್ಚು ಮಾಡದಂತೆ ಆಕೆ ನಿಮ್ಮ ಕೈ ಕಟ್ಟಿ ಹಾಕಬಹುದು. ನೀವು ನಿಮ್ಮವರಿಗೆ ಸಹಾಯ ಮಾಡುತ್ತಿದ್ದರೆ ಅದಕ್ಕೂ ಆಕೆ ಅಡ್ಡಗಾಲು ಹಾಕಬಹುದು. ಇದರಿಂದಾಗಿ ಮುಂದೆ ನೀವು ತೊಂದರೆ ಅನುಭವಿಸಬೇಕಾಗುತ್ತದೆ.
3. ದಾನ
ಚಾಣಕ್ಯನ ಪ್ರಕಾರ ನೀವು ಮಾಡುವ ದಾನದ ಬಗ್ಗೆ ನಿಮ್ಮ ಪತ್ನಿಯ ಬಳಿ ಹೇಳಿಕೊಳ್ಳಲೇಬಾರದು. ಯಾಕಂದ್ರೆ ನಾವು ಮಾಡುವ ದಾನ ಯಾವಾಗಲೂ ರಹಸ್ಯವಾಗಿ ಇರಬೇಕು. ನಾವು ಬಲಗೈಯಲ್ಲಿ ಮಾಡಿದ ದಾನ ಎಡಗೈಗೆ ತಿಳಿಯಬಾರದು. ದಾನದ ಬಗ್ಗೆ ನಾವು ಎಲ್ಲರ ಬಳಿಯೂ ಹೇಳಿಕೊಂಡು ತಿರುಗಾಡಿದರೆ ದಾನ ಅದರ ಪ್ರಾಮುಖ್ಯತೆಯನ್ನು ಕಳೆದುಕೊಂಡು ಬಿಡುತ್ತದೆ. ಅದೇ ರೀತಿ ಪತ್ನಿಯ ಬಳಿ ಕೂಡ ಈ ವಿಚಾರದ ಬಗ್ಗೆ ಮಾತನಾಡಲೇ ಬೇಡಿ. ಯಾಕಂದ್ರೆ ಆಕೆ ನೀವು ಮಾಡುವ ಪುಣ್ಯ ಕಾರ್ಯಕ್ಕೆ ಅಡ್ಡಗಾಲು ಹಾಕುವ ಸಾಧ್ಯತೆ ಇದೆ.
4. ದೌರ್ಬಲ್ಯ
ಚಾಣಕ್ಯನ ಪ್ರಕಾರ ನಿಮ್ಮ ದೌರ್ಬಲ್ಯಗಳು ಏನೇ ಇರಬಹುದು. ಆದರೆ ಅದರ ಬಗ್ಗೆ ಇತರರ ಬಳಿ ಹಂಚಿಕೊಳ್ಳಲೇ ಬಾರದು. ಅಷ್ಟೇ ಅಲ್ಲ, ನಿಮ್ಮ ಪತ್ನಿಯ ಬಳಿಯೂ ಹೇಳಿಕೊಳ್ಳಬೇಡಿ. ಯಾಕಂದ್ರೆ ಆಕೆ ನಿಮ್ಮ ದೌರ್ಬಲ್ಯವನ್ನು ಅಸ್ತ್ರವಾಗಿಸಿಕೊಂಡರೆ ಕಷ್ಟ. ನಿಮ್ಮ ದೌರ್ಬಲ್ಯದ ವಿಚಾರವನ್ನೇ ಇಟ್ಟುಕೊಂಡು ಆಕೆ ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸುವ ಸಾಧ್ಯತೆ ಇದೆ. ಎಲ್ಲರೂ ಈ ರೀತಿ ಮಾಡುತ್ತಾರೆ ಅಂತಲ್ಲ. ಆದರೆ ಹೆಚ್ಚಿನವರು ನಿಮ್ಮ ದೌರ್ಬಲ್ಯದ ಪ್ರಯೋಜನ ಪಡೆದುಕೊಳ್ಳುತ್ತಾರೆ. ಹೀಗಾಗಿ ಮುಂಜಾಗರೂಕತೆಯಿಂದ ಇರೋದು ನಿಮ್ಮ ಕರ್ತವ್ಯ.
ಅದೆಂತಹ ಪರಿಸ್ಥಿತಿ ಬಂದರೂ ಕೂಡ ಇಂತಹ ವಿಚಾರಗಳ ಬಗ್ಗೆ ನಿಮ್ಮ ಪತ್ನಿಯ ಬಳಿ ಹೇಳಿಕೊಳ್ಳಲೇಬೇಡಿ. ಯಾಕಂದ್ರೆ ಒಂದಲ್ಲ ಒಂದು ದಿನ ನಿಮಗೆ ಮುಳುವಾಗುವ ಸಾಧ್ಯತೆ ಇದೆ.



Click it and Unblock the Notifications


