Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆನ್ಲೈನ್ನಲ್ಲೇ ಶ್ರೀರಾಮನ ಮಂತ್ರ ಪಠಿಸಿ...ಪ್ರಮಾಣ ಪತ್ರ ಪಡೆಯಿರಿ..! ಹೇಗೆ ಗೊತ್ತಾ?
ಇಂದು ಭವ್ಯ ರಾಮಮಂದಿರ ಉದ್ಘಾಟನೆಯಾಗುತ್ತಿದ್ದು, ಇಡೀ ವಿಶ್ವದ ದೃಷ್ಟಿ ಭಾರತದ ಮೇಲಿದೆ. ಎಲ್ಲಾ ಕಡೆ ರಾಮ ನಾಮ ಸ್ಮರಣೆಯಾಗುತ್ತಿದೆ. ಜೈಶ್ರೀರಾಮ್ ಘೋಷಣೆ ಮುಗಿಲು ಮುಟ್ಟುತ್ತಿದೆ. ಅಯೋಧ್ಯೆ ರಾಮನ ದರ್ಶನ ಪಡೆಯಲು ಕೋಟಿ ಕೋಟಿ ರಾಮ ಭಕ್ತರು ಕಾದಿದ್ದಾರೆ. ಆದರೆ ಎಲ್ಲಾ ಭಕ್ತರು ಇಂದು ಅಯೋಧ್ಯೆಗೆ ತೆರಳಲು ಸಾಧ್ಯವಿಲ್ಲ. ಕೇವಲ ಆಹ್ವಾನಿತ ಗಣ್ಯರಿಗೆ ಮಾತ್ರ ಇಂದು ವಿಶೇಷ ಆರತಿ ಮತ್ತು ದರ್ಶನ ಭಾಗ್ಯವಿದೆ. ಆದರೆ ನೀವು ಕುಳಿತಲ್ಲೇ ರಾಮನ ತಲುಪಬಹುದಿದೆ.
ಹೌದು ನೀವು ಕುಳಿತಲ್ಲೇ ಆನ್ಲೈನ್ ಮೂಲಕ ರಾಮ ಮಂದಿರ ಉದ್ಘಾಟನೆಯನ್ನೂ ವೀಕ್ಷಿಸಬಹುದು ಜೊತೆಗೆ ರಾಮ ನಾಮ ಸ್ಮರಣೆಯ ಮಾಡಿ ಪ್ರಮಾಣ ಪತ್ರವನ್ನೂ ಪಡೆದುಕೊಳ್ಳಬಹುದು. ಆನ್ಲೈನ್ ಮೂಲಕವೇ ಭಾಗವಹಿಸಿ ರಾಮ ನಾಮವನ್ನು ಜಪಿಸಬಹುದು.
ಕಿರು ವಿಡಿಯೋ ಅಪ್ಲಿಕೇಶನ್ ಜೋಶ್ ಮತ್ತು ಸ್ಥಳೀಯ ಸುದ್ದಿ ಅನ್ವೇಷಣೆ ವೇದಿಕೆ ಡೈಲಿ ಹಂಟ್ ಹಾಗೂ ಒನ್ ಇಂಡಿಯಾ ವೆಬ್ಸೈಟ್ ವೇದಿಕೆಗಳು ರಾಮ ಭಕ್ತರಿಗೆ ಇಂತಹದೊಂದು ಅವಕಾಶ ಮಾಡಿಕೊಟ್ಟಿವೆ. ಹಾಗಾದ್ರೆ ನೀವು ಮಾಡಬೇಕಾಗಿರೋದು ಏನು ಎಂಬುದನ್ನು ಇಲ್ಲಿ ಹೇಳಿದ್ದೇವೆ ನೋಡಿ.

ಜೋಶ್ ಮತ್ತು ಡೈಲಿ ಹಂಟ್ ಮತ್ತು ಒನ್ ಇಂಡಿಯಾ ವರ್ಚುವಲ್ ಮೂಲಕ ಶ್ರೀರಾಮ ಮಂತ್ರ ಪಠಿಸಲು ವೇದಿಕೆ ಕಲ್ಪಿಸಿದ್ದು, ನೀವೂ ಸಹ ಭಾಗವಹಿಸಿ ಶ್ರೀರಾಮನ ಮೇಲಿರುವ ಭಕ್ತಿಯನ್ನು ಪ್ರದರ್ಶಿಸಬಹುದು. ಈ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಇಲ್ಲವೆ ಜೋಶ್ ಅಥವಾ ಡೈಲಿ ಹಂಟ್ ಆಪ್ ತೆರೆಯುವ ಮೂಲಕ ನೀವು ಆನ್ಲೈನ್ ರಾಮ ನಾಮ ಸ್ಮರಣೆಯಲ್ಲಿ ಭಾಗಿಯಾಗಬಹುದು.
ಈ ಲಿಂಕ್ನಲ್ಲಿ ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಮಂತ್ರವನ್ನು ಪಠಿಸಬಹುದು. ನೀವು ನಿಮ್ಮ ಹೆಸರನ್ನು ಮೊದಲು ನಮೂದಿಸಿ ಬಳಿಕ ಎಷ್ಟು ಬಾರಿ ಈ ಮಂತ್ರವನ್ನು ಪಠಿಸುತ್ತೀರಿ ಎಂಬ ಆಯ್ಕೆಯನ್ನು ಮಾಡಿದರೆ ಸ್ವಯಂಚಾಲಿತವಾಗಿ ಮಂತ್ರ ಆರಂಭವಾಗುತ್ತದೆ. ಬಳಿಕ ನೀವು ಆ ಮಂತ್ರವನ್ನು ಜಪಿಸಿದರೆ ಸಾಕು. ಈ ಮಂತ್ರ ಪಠಣೆ ಮುಗಿದ ಬಳಿಕ ಪ್ರಮಾಣ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ನೀವು 11, 108, ಅಥವಾ 1008 ಬಾರಿ ಮಂತ್ರವನ್ನು ಪಠಿಸಬಹುದು.
ಆನ್ಲೈನ್ನಲ್ಲಿ ರಾಮ ಮಂದಿರ ಉದ್ಘಾಟನೆ ನೋಡುವುದು ಹೇಗೆ?
ಅಯೋಧ್ಯೆಗೆ ತೆರಳಲು ಸಾಧ್ಯವಾಗದಿರುವ ಭಕ್ತರು ಆನ್ಲೈನ್ನಲ್ಲೂ ಪ್ರಭು ಶ್ರೀರಾಮನ ಈ ಸ್ಮರಣೀಯ ಕಾರ್ಯಕ್ರಮ ಕಣ್ತುಂಬಿಕೊಳ್ಳಬಹುದು. ಡಿಡಿ ನ್ಯಾಷನಲ್ ಮತ್ತು ದೂರದರ್ಶನದ ಯೂಟ್ಯೂಬ್ ಚಾನಲ್ನಲ್ಲಿ ಬೆಳಗ್ಗೆಯಿಂದಲೇ ನೇರಪ್ರಸಾರವಿದ್ದು, ಅಲ್ಲಿ ಉಚಿತವಾಗಿ ನೀವು ರಾಮ ಮಂದಿರ ಉದ್ಘಾಟನೆಯ ದೃಶ್ಯ ಕಣ್ತುಂಬಿಕೊಳ್ಳಬಹುದು.
ಪ್ರಾಣ ಪ್ರತಿಷ್ಠಾಪನೆಗೆ ಇರುವ ಶುಭ ಮುಹೂರ್ತ ಜನವರಿ 22 ಮಧ್ಯಾಹ್ನ 12:29:08 ಸೆಕೆಂಡ್ನಿಂದ 12:30:32 ಸೆಕೆಂಡ್ ಒಳಗಡೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುವುದು. ಅಭಿಜಿತ್ ಮುಹೂರ್ತ ಕೂಡ ಇದೆ ಅಭಿಜಿತ್ ಮುಹೂರ್ತವನ್ನು ಅತ್ಯಂತ ಶುಭ ಸಮಯ ಎಂದು ಪರಿಗಣಿಸಲಾಗಿದೆ. ಪ್ರಾಣಪ್ರತಿಷ್ಠಾಪನೆ ಸಮಯದಲ್ಲಿಯೇ ಅಭಿಜಿತ್ ಮುಹೂರ್ತ ಕೂಡ ಬಂದಿರುವುದರಿಂದ ತುಂಬಾನೇ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಈ ಮುಹೂರ್ತದಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡುವುದರಿಂದ ಪ್ರಗತಿ ಉಂಟಾಗುವುದು.
ಅಯೋಧ್ಯೆ ರಾಮ ಮಂದಿರಲ್ಲಿ ನೀಡಲಾಗುವ ಪ್ರಸಾದ
ತಿರುಪತಿಯಿಂದ 1 ಲಕ್ಷ ಲಡ್ಡುಗಳನ್ನು ಕಳುಹಿಸಲಾಗಿದೆ, ಅದನ್ನು ಇಂದು ಅಯೋಧ್ಯೆಯಲ್ಲ ನೆರೆದಿರುವ ಭಕ್ತರಿಗೆ ಲಡ್ಡುಪ್ರಸಾದ ನೀಡಲಾಗುವುದು. ಅಯೋಧ್ಯೆಗೆ ಪ್ರಸಾದವಾಗಿ ಶ್ರೀರಾಮನಿಗೆ ಪ್ರಿಯವಾದ ಸಕ್ಕರೆಯನ್ನು ಪ್ರಸಾದವನ್ನಾಗಿ ನೀಡಲಾಗುವುದು. ಇಲ್ಲಿ ನಿಮಗೆ ಕಲ್ಲು ಸಕ್ಕರೆ ಹೊರತು ಪಡಿಸಿ ಬೇರೆ ಯಾವುದೇ ಪ್ರಸಾದ ಸಿಗುವುದಿಲ್ಲ , ಕಲ್ಲುಸಕ್ಕರೆ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು, ಇದೇ ಕಲ್ಲು ಸಕ್ಕರೆ ಪ್ರಸಾದವಾಗಿ ನೀಡಲಾಗುವುದು.
ಈ ಲಿಂಕ್ ಮೂಲಕ ನೀವು ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ ಮೂಲಕ ರಾಮ ನಾಮ ಸ್ಮರಣೆಯಲ್ಲಿ ಭಾಗಿಯಾಗಬಹುದು. ಮೊಬೈಲ್ನಲ್ಲಾದರೆ ಡೈಲಿ ಹಂಟ್ ಅಥವಾ ಜೋಶ್ ಆಪ್ ತೆರೆದು ಭಾಗಿಯಾಗಬಹುದು https://share.myjosh.in/webview/ram-mandir-event



Click it and Unblock the Notifications










