Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಹಣದ ಸಮಸ್ಯೆಗೆ ಮುಕ್ತಿ ಪಡೆಯಲು ಈ ಕುಬೇರ ಮಂತ್ರ ಪಠಿಸಿ..!
ಹಿಂದೂ ಧರ್ಮದ ಪ್ರಕಾರ ಪ್ರತಿಯೊಂದು ಮಂತ್ರಕ್ಕೂ ಅದರದ್ದೇ ಆದ ಪ್ರಾಮುಖ್ಯತೆಗಳಿವೆ. ಯಾವ ಸಮಯದಲ್ಲಿ ಯಾವ ಮಂತ್ರ ಪಠಿಸಬೇಕು ಎಂಬುದನ್ನು ನಿಯಮಸಾರವಾಗಿ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಕೆಲವು ಮಂತ್ರಗಳು ನಮ್ಮ ಜೀವನವನ್ನೇ ಬದಲಿಸುವಷ್ಟು ಶಕ್ತಿಶಾಲಿಯಾಗಿರುತ್ತವೆ. ಅದರಲ್ಲೂ ಯಾವ ವಾರ ಯಾವ ಮಂತ್ರ ಪಠಿಸಬೇಕು ಎಂಬುದು ಸಹ ಹಿಂದೂ ಧರ್ಮದಲ್ಲಿ ಮುಖ್ಯವಾಗಿದೆ.
ಎಲ್ಲಾ ಮಂತ್ರಗಳಿಗಿಂತಲು ಗಾಯತ್ರಿ ಮಂತ್ರವು ಅತ್ಯಂತ ಶಕ್ತಿಶಾಲಿ ಮಂತ್ರ ಎಂದು ಪರಿಗಣಿಸಲಾಗಿದೆ. ಇದರ ಜೊತೆ ಕುಬೇರ ಮಂತ್ರ ಸಹ ಅಷ್ಟೇ ಪ್ರಭಾವಶಾಲಿ ಎಂದು ಶಾಸ್ತ್ರದಲ್ಲಿ ಪರಿಗಣಿಸಲಾಗಿದೆ. ಲಕ್ಷ್ಮಿ ದೇವಿಯ ಜೊತೆಗೆ ಕುಬೇರ ಮಂತ್ರ ಪಠಣೆ ಆದಾಯ, ಸಂಪತ್ತಿನ ವೃದ್ಧಿಗೆ ಮೂಲ ಎಂದು ಹೇಳಲಾಗಿದೆ.
ಈ ಮಂತ್ರವನ್ನು ನಿಯಮಿತವಾಗಿ ಪಠಿಸುವ ವ್ಯಕ್ತಿಯ ಮನೆಯಲ್ಲಿ ಯಾವಾಗಲೂ ಲಕ್ಷ್ಮಿ ಮತ್ತು ಕುಬೇರನ ಆಶೀರ್ವಾದವಿದೆ ಮತ್ತು ಹಣದ ಕೊರತೆಯಿಲ್ಲ ಎಂಬ ನಂಬಿಕೆ ಜ್ಯೋತಿಷ್ಯದಲ್ಲಿದೆ.

ಈ ಮಂತ್ರವನ್ನು ಶುಕ್ರವಾರದಂದು ಪಠಿಸಿದರೆ ವಿಶೇಷವಾಗಿ ಅನುಗ್ರಹಕ್ಕೆ ನೀವು ಪಾತ್ರರಾಗಬಹುದು ಎಂಬುದು ಶಾಸ್ತ್ರದಲ್ಲಿರುವ ಸಾರಾಂಶವಾಗಿದೆ. ಹಾಗಾದರೆ ಶುಕ್ರವಾರದಂದು ಯಾವ ಮಂತ್ರ ಪಠಿಸಬೇಕು? ಯಾವ ಮಂತ್ರ ಪಠಿಸಿದರೆ ಕುಬೇರನ ಒಲಿಸಬಹುದು ಆತನ ಆರ್ಶೀವಾದ ಪಡೆಯಬಹುದು ಎಂಬ ಮಾಹಿತಿ ಇಲ್ಲಿದೆ ನೋಡಿ.
ಕುಬೇರನ ಕೃಪೆಗಾಗಿ ಈ ಮಂತ್ರ ಪಠಿಸಿ
'ಓಂ ಹ್ರೀಂ ಶ್ರೀಂ ಕ್ರೀಂ ಶ್ರೀಂ ಕುಬೇರಾಯ, ಅಷ್ಟ-ಲಕ್ಷ್ಮೀ ಮಮ ಗೃಹೇ ಧನಂ ಪುರಾಯೈ ನಮಃ ||
ಓಂ ಹ್ರೀಂ ಶ್ರೀಂ ಕ್ರೀಂ ಶ್ರೀಂ ಕುಬೇರಾಯ ಅಷ್ಟ-ಲಕ್ಷ್ಮೀ ಮಮ ಗೃಹೇ ಧನಂ ಪುರಾಯೈ ನಮಃ ||
ಈ ಕುಬೇರ ಮಂತ್ರವನ್ನು ಪಠಿಸುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಯಾವಾಗಲೂ ನಿಮಗೆ ದೊರೆಯುತ್ತದೆ.
ಲಕ್ಷ್ಮಿ ಕುಬೇರನಿಗೆ ಇತರ ಮಂತ್ರಗಳು
ಓಂ ಶ್ರೀಮ್ ಕ್ರೀಂ ಓಂ ಕುಬೇರ್ ಲಕ್ಷ್ಮೀ ಕಮಲಾ, ದೇವ್ನಾಯೇ ಧನ ಕಾರ್ಷಿಣ್ಯೈ ಸ್ವಾಹಾ ||
ಈ ಮಂತ್ರದ ಅಕ್ಷರಶಃ ಅರ್ಥವೇನೆಂದರೆ "ನಾನು ಲಕ್ಷ್ಮಿ ದೇವಿ ಮತ್ತು ಭಗವಂತ ಕುಬೇರನನ್ನು ನನಗೆ ಸಂಪತ್ತು ಮತ್ತು ಸಮೃದ್ಧಿಯಿಂದ ಆಶೀರ್ವದಿಸುವಂತೆ ಪ್ರಾರ್ಥಿಸುತ್ತೇನೆ.
ಈ ಮಂತ್ರವನ್ನು ಜಪಿಸುವುದರಿಂದ ನಿಮ್ಮ ಜೀವನದಲ್ಲಿ ದೊಡ್ಡ ಯಶಸ್ಸು ಸಾಧಿಸಬಹುದು. ಈ ಮಂತ್ರವನ್ನು ಪಠಿಸುವುದರಿಂದ ಮನೆಯಲ್ಲಿ ಸಂತೋಷ ಇರುತ್ತದೆ. ಈ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದ ಕೆಟ್ಟ ಸಮಯವನ್ನು ಸಹ ಒಳ್ಳೆಯ ಸಮಯಗಳಾಗಿ ಬದಲಾಯಿಸುವ ಶಕ್ತಿ ಇದೆ ಮತ್ತು ದೊಡ್ಡ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ.
ರಾತ್ರಿ ನೀವು 'ಲಕ್ಷ್ಮೀ ಕುಬೇರ ಮಂತ್ರ'ವನ್ನು ಪಠಿಸಿದರೆ, ನಿಮ್ಮ ಜೀವನದಲ್ಲಿ ಹೆಚ್ಚು ಹೆಚ್ಚು ಸಂಪತ್ತಿನ ಮಾರ್ಗಗಳು ತೆರೆದುಕೊಳ್ಳುತ್ತವೆ ಮತ್ತು ನಿಮ್ಮ ಕೆಲಸದ ಜೊತೆಗೆ ನಿಮ್ಮ ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯಲು ಪ್ರಾರಂಭಿಸುತ್ತೀರಿ. ಈ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಮನೆ ಮಕ್ಕಳ ಬುದ್ಧಿವಂತಿಕೆ ಹೆಚ್ಚುತ್ತದೆ.
ಕುಬೇರನ ಆರ್ಶೀವಾದ ಪಡೆಯಲು ಇತರೆ ಮಂತ್ರಗಳು
ಓಂ ಯಕ್ಷಾಯ ಕುಬೇರಾಯ ವೈಶ್ರವಣಾಯ ಶನಧಾನ್ಯಧೀಪತಯೇ
ಧನಧಾನ್ಯಸಮೃದ್ಧಿಮ್ ಮೇದೇಹಿ ದಾಪಯ ಸ್ವಾಹಾ||
ಧನ ಪಾಪ್ತಿಗೆ ಮಂತ್ರ
ಓಂ ಶ್ರೀಮ್ ಹ್ರೀಮ್ ಕ್ಲೀಮ್ ಶ್ರೀಮ್ ಕ್ಲೀಮ್ ವಿತ್ತೇಶ್ವರಾಯ ನಮಃ
ಕುಬೇರ ಅಷ್ಟಲಕ್ಷ್ಮಿ ಮಂತ್ರ
ಓಂ ಹ್ರೀಂ ಶ್ರೀಂ ಕ್ರೀಂ ಶ್ರೀಂ ಕುಬೇರಾಯ ಅಷ್ಟ-ಲಕ್ಷ್ಮಿ
ಮಾಮಾ ಗ್ರಿಹೆ ಧನಂ ಪುರಾಯ ಪುರಾಯ ನಮಃ
ಲಕ್ಷ್ಮಿ ಕುಬೇರ ಮಂತ್ರ
"ಓಂ ಹ್ರೀಂ ಶ್ರೀಂ ಕ್ರೀಂ ಶ್ರೀಂ ಕುಬೇರಾಯ, ಅಷ್ಟ ಲಕ್ಷ್ಮಿ ಮಮ ಗೃಹೆ ಧನಂ ಪುರಾಯ ಪುರಾಯ ನಮಃ"
ಮಹಾಲಕ್ಷ್ಮಿ ಮಂತ್ರ:
"ಓಂ ಶ್ರೀಂ ಹ್ರೀಂ ಶ್ರೀಂ ಕಮಲೆ ಕಮಲಲಾಯೆ ಪ್ರಸೀದ, ಪ್ರಸೀದ ಓಂ ಶ್ರೀಂ ಹ್ರೀಂ ಶ್ರೀಂ ಮಹಾಲಕ್ಷ್ಮಯೆ ನಮಃ"
ಕುಬೇರ ಮಂತ್ರ:
ಓಂ ಶ್ರೀಂ ಒಂ ಹ್ರೀಂ ಶ್ರೀಂ ಓಂ ಹ್ರೀಂ ಶ್ರೀಂ ಕ್ಲೀಮ್ ವಿತ್ತೆಶ್ವರಾಯ ನಮಃ
ಓಂ ಯಕ್ಷಾಯ ಕುಬೇರಾಯ ವೈಶ್ರವಣಾಯ ಧನಧಾನ್ಯಾಧಿಪತಯೇ ಧನಧಾನ್ಯಸಮೃದ್ಧಿಂ ಮೇ ದೇಹಿ ದಾಪಯ ಸ್ವಾಹಾ



Click it and Unblock the Notifications