Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಪ್ರಧಾನಿ ಮೋದಿ ವಿರುದ್ಧ ಶ್ಯಾಮ್ ರಂಗೀಲಾ ನಾಮಪತ್ರ..! ಯಾರು ಈ ಯುವಕ ಗೊತ್ತಾ?
ದೇಶದಲ್ಲಿ ಲೋಕಸಭೆ ಚುನಾವಣೆ ಕಣ ರಂಗು ಪಡೆದುಕೊಂಡಿದೆ. ಈಗಾಗಲೇ ಬಹುತೇಕ ಕಡೆಗಳಲ್ಲಿ ಮತದಾನವೂ ನಡೆದಿದ್ದು, ಮತ್ತೆ ಕೆಲವು ಕಡೆಗಳಲ್ಲಿ ಮತದಾನ ನಡೆಯುವುದು ಬಾಕಿ ಇದೆ. ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವದ ಹಬ್ಬ ಎಂದು ಕರೆಯಲ್ಪಡುವ ದೇಶದ ಚುನಾವಣೆ ಎಲ್ಲೆಲ್ಲೂ ಮಾತಾಗುತ್ತಿದೆ.
ಸದ್ಯ ದೇಶದ ಚುಕ್ಕಾಣಿ ಯಾವ ಪಕ್ಷ ಹಿಡಿಯಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದ್ದು, ಇನ್ನೊಂದು ತಿಂಗಳು ಈ ಫಲಿತಾಂಶಕ್ಕೆ ಕಾಯಬೇಕಿದೆ. ಆದರೆ ಅದಕ್ಕೂ ಮೊದಲು ಚುನಾವಣ ಕಣದಲ್ಲಿ ಕೇಳಿಬರುತ್ತಿರುವ ಹೊಸ ಹೊಸ ಅಭ್ಯರ್ಥಿಗಳ ಹೆಸರು ಎಲ್ಲರಿಗೂ ಅಚ್ಚರಿ ಮೂಡಿಸುತ್ತಿವೆ.

ಮೊದಲು ಮೈಸೂರಿನಲ್ಲಿ ಒಡೆಯರ್ ಕುಡಿ ಚುನಾವಣಾ ಕಣಕ್ಕೆ ಧುಮುಕಿದ್ದು, ದೇಶವ್ಯಾಪಿ ಸುದ್ದಿಯಾಗಿತ್ತು. ಇದಾದ ಬಳಿಕ ಈಗ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಣಾಸಿ ಕ್ಷೇತ್ರ ಸುದ್ದಿಯಲ್ಲಿದೆ. ಅದರಲ್ಲೂ ಪ್ರಧಾನಿ ಎದುರು ಸ್ಪರ್ಧಿಸುತ್ತಿರುವ ವ್ಯಕ್ತಿ ಎಲ್ಲೆಡೆ ಸುದ್ದಿಯಾಗಿದ್ದಾರೆ.
ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಒಂದೇ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದ್ದು, ವಾರಣಾಸಿ ಅವರ ಮೊದಲ ಆದ್ಯತೆ ಆಗಿದೆ. ಈ ನಡುವೆ ವಾರಣಾಸಿಯಿಂದ ಶ್ಯಾಮ್ ರಂಗೀಲಾ ಎಂಬ ಯುವಕ ಪ್ರಧಾನಿ ಎದುರಾಗಿ ಸ್ಪರ್ಧಿಸುತ್ತಿದ್ದಾನೆ. ಈ ಶ್ಯಾಮ್ ರಂಗೀಲಾ ಈ ಮೊದಲು ಯೂಟ್ಯೂಬ್, ಫೇಸ್ಬುಕ್ನಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಇನ್ಪ್ಲೂಯನ್ಸರ್ ಆಗಿದ್ದಾರೆ.
ಯಾರು ಈ ಯುವಕ?
ಶ್ಯಾಮ್ ರಂಗೀಲಾ ಪ್ರಧಾನಿ ಮೋದಿ ಅವರ ಧ್ವನಿಯನ್ನೇ ಅನುಕರಣೆ ಮಾಡುತ್ತಿದ್ದ ಯುವಕನಾಗಿದ್ದಾನೆ. ಆತ ಯೂಟ್ಯೂಬ್ನಲ್ಲಿ ಪ್ರಧಾನಿ ಮೋದಿ ಅವರ ಧ್ವನಿ ಅನುಕರಣೆ ಮಾಡಿ ಹಲವು ವಿಡಿಯೋ ಮಾಡುತ್ತಿದ್ದ, ಆದರೆ ಈ ವಿಡಿಯೋದಲ್ಲಿ ಆತನ ಧ್ವನಿ ಕೇಳಿದರೆ ಪ್ರಧಾನಿ ಮೋದಿ ಅವರ ಧ್ವನಿಗೂ ಆತನಿಗೂ ಎಳ್ಳಷ್ಟು ಬದಲಾವಣೆ ಇರಲಿಲ್ಲ. ಇಬ್ಬರ ಧ್ವನಿಯೂ ಒಂದೇ ರೀತಿ ಇತ್ತು. ಅಷ್ಟು ನಿಖರವಾಗಿ ಆತ ಅನುಕರಣೆ ಮಾಡುತ್ತಿದ್ದ.
ಈ ಕುರಿತು ಶ್ಯಾಮ್ ರಂಗೀಲಾ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದು, "ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧಿಸುವ ಘೋಷಣೆಯ ನಂತರ ನಿಮ್ಮೆಲ್ಲರಿಂದ ನನಗೆ ಸಿಗುತ್ತಿರುವ ಪ್ರೀತಿಯಿಂದ ನಾನು ಉತ್ಸುಕನಾಗಿದ್ದೇನೆ. ನನ್ನ ನಾಮಿನೇಷನ್ ಮತ್ತು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಶೀಘ್ರದಲ್ಲೇ ವಿಡಿಯೋ ಮೂಲಕ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದಿಡುತ್ತೇನೆ'' ಎಂದಿದ್ದಾರೆ.
ಆದರೆ ಇದಕ್ಕೂ ಮೊದಲು ಆತ ''ನಾನು ವಾರಣಾಸಿಯಿಂದ ಸ್ಪರ್ಧಿಸುತ್ತಿದ್ದೇನೆ. ಏಕೆಂದರೆ ಯಾವಾಗ ಯಾರು ನಾಮಪತ್ರ ಹಿಂಪಡೆಯುತ್ತಾರೆ ಎಂಬುದು ಗೊತ್ತಾಗುತ್ತಿಲ್ಲ'' ಎಂದು ವ್ಯಂಗ್ಯವಾಡಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಅಲ್ಲದೆ ಜನರು ಸ್ಪರ್ಧಿಸುವಂತೆ ಮನವಿ ಸಹ ಮಾಡಿದ್ದರು. ಹೀಗಾಗಿ ಆತ ಚುನಾವಣೆ ಸ್ಪರ್ಧಿಸಲು ಮುಂದಾಗಿರುವುದಾಗಿ ತಿಳಿದುಬಂದಿದೆ.
ಮೋದಿ ಅಭಿಮಾನಿಯಾಗಿದ್ದ ಶ್ಯಾಮ್ ರಂಗೀಲಾ
ಆರಂಭದಲ್ಲಿ ಪ್ರಧಾನಿ ಮೋದಿ ಅಭಿಮಾನಿಯಾಗಿದ್ದ ಶ್ಯಾಮ್ ರಂಗೀಲಾ ಅವರಂತೆ ಧ್ವನಿ ಮಾಡಿ ಅವರ ಅನುಕರಣೆ ಮಾಡುತ್ತಿದ್ದರು. ರಾಹುಲ್ ಗಾಂಧಿ ಹಾಗೂ ಕೇಜ್ರಿವಾಲ್ ವಿರುದ್ಧ ಅವರು ಸ್ಟ್ಯಾಂಡ್ ಅಪ್ ಕಾಮಿಡಿಗಳ ಮಾಡುತ್ತಿದ್ದರು. ಆದರ ಬರು ಬರುತ್ತಾ ಅವರು ಮೋದಿ ಕುರಿತಂತೆ ಕಾಮಿಡಿ ಮಾಡಲು ಆರಂಭಿಸಿದರು. ಹಲವು ಬಾರಿ ಅವರ ವಿರುದ್ಧ ಪ್ರಕರಣಗಳು ಸಹ ದಾಖಲಾಗಿದ್ದವು. ಈಗ ಪ್ರಧಾನಿ ವಿರುದ್ಧವೇ ಚುನಾವಣೆ ಎದುರಿಸಲು ಮುಂದಾಗಿದ್ದಾರೆ.
ಇಂದೋರ್ ಹಾಗೂ ಸೂರತ್ನಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಇತರೆ ಪಕ್ಷದ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳನ್ನು ಹಿಂಪಡೆಯಲಾಗಿತ್ತು. ಇದಾದ ಬಳಿಕ ಆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಎಂದು ಘೋಷಿಸಲಾಗಿತ್ತು. ಈ ಪ್ರಕರಣಗಳು ನಡೆದ ಬಳಿಕ ಶ್ಯಾಮ್ ರಂಗೀಲಾ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ.



Click it and Unblock the Notifications