Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
ಕಾಮಿಡಿ ಕಿಲಾಡಿಗಳು ರಾಕೇಶ್ ಪೂಜಾರಿಗೆ ಏನಾಗಿತ್ತು.? ಸ್ನೇಹಿತರ ಮದುವೆಯಲ್ಲಿ ಆಗಿದ್ದೇನು?
ನೀವು ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ವೀಕ್ಷಕರಾಗಿದ್ದರೆ ರಾಕೇಶ್ ಪೂಜಾರಿ ನಿಮಗೆ ಚಿರಪರಿಚಿತ. ಆತನ ಕಾಮಿಡಿಗೆ ನಗದವರೇ ಇಲ್ಲ. ಕಾಮಿಡಿ ಕಿಲಾಡಿಗಳು ಸೀಸನ್ 3ಯಲ್ಲಿ ಆತನ ಕಾಮಿಡಿ ನೋಡಿ ಹಲವರು ಈತ ಮುಂದಿನ ದಿನದಲ್ಲಿ ಸ್ಯಾಂಡಲ್ವುಡ್ನಲ್ಲಿ ಬಹುಬೇಡಿಕೆಯ ಕಾಮಿಡಿ ನಟನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರು.
ಆದರೆ ರಾಕೇಶ್ ಪೂಜಾರಿ ಈಗ ಹಠಾತ್ ಹೃದಯಾಘಾತದಿಂದ ಮೃತಪಟ್ಟಿರುವ ಸುದ್ದಿ ಇಡೀ ಸಿನಿಮಾ ರಂಗದ ಮಂದಿ ಹಾಗೆ ಅಭಿಮಾನಿಗಳಲ್ಲಿಯೂ ಶಾಕ್ಗೆ ಕಾರಣವಾಗಿದೆ. ಕೇವಲ 34 ವರ್ಷದ ಆತ ಹಠಾತ ಹೃದಯಾಘಾತದಿಂದ ಮೃತಪಟ್ಟಿರುವುದು ಎಲ್ಲರನ್ನೂ ಶಾಕ್ಗೆ ಗುರಿ ಮಾಡಿದೆ. ಇತ್ತೀಚಿಗಷ್ಟೇ ಹೊಸ ಮನೆ ಗೃಹ ಪ್ರವೇಶ ಮುಗಿಸಿದ್ದ ಅವರು ಕಾಂತಾರಾ ಚಾಪ್ಟರ್ 1 ಸಿನಿಮಾದಲ್ಲೂ ನಟಿಸುತ್ತಿದ್ದರು.

ಸ್ಯಾಂಡಲ್ವುಡ್ನಲ್ಲಿ ಈಗಷ್ಟೇ ಹಲವು ಅವಕಾಶ ಪಡೆಯುತ್ತಿದ್ದ ಯುವ ನಟನ ಅಗಲಿಕೆ ಚಿತ್ರ ಪ್ರೇಮಿಗಳಲ್ಲಿ ದುಖಃಕ್ಕೆ ಕಾರಣವಾಗಿದೆ. ಉಡುಪಿ ನಿವಾಸಿಯಾಗಿದ್ದ ಅವರು, ಹಲವು ಧಾರಾವಾಹಿಗಳು, ರಿಯಾಲಿಟಿ ಶೋ, ಸಿನಿಮಾದಲ್ಲೂ ನಟಿಸುತ್ತಿದ್ದರು. ಒಬ್ಬನೇ ಪುತ್ರನ ಕಳೆದುಕೊಂಡ ತಾಯಿ ಈಗ ಕಣ್ಣೀರಲ್ಲಿ ಮುಳುಗಿದ್ದಾರೆ ಹಾಗೆ ತಂಗಿಗೆ ಮದುವೆ ಮಾಡುವುದು ತನ್ನ ದೊಡ್ಡ ಕನಸು ಎಂದು ರಾಕೇಶ್ ಹೇಳಿಕೊಂಡಿದ್ದರು.
ರಾಕೇಶ್ ಪೂಜಾರಿಗೆ ಆಗಿದ್ದೇನು?
ಇತ್ತೀಚಿಗೆ ನೀವು ನೋಡುತ್ತಿರುವಂತೆ ಅನೇಕರಲ್ಲಿ ಹಠಾತ್ ಹೃದಯಾಘಾತದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಈ ಯುವ ಸಮುದಾಯದಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಮದುವೆ, ಶುಭ ಸಮಾರಂಭದಂತಹ ಸಮಯದಲ್ಲಿ ಕುಸಿದು ಬಿದ್ದು ಮೃತಪಡುತ್ತಿರುವ ಒಂದಿಷ್ಟು ಪ್ರಕರಣಗಳು ವರದಿಯಾಗುತ್ತಲೇ ಇವೆ. ರಾಕೇಶ್ ಪೂಜಾರಿ ಕೂಡ ಆಫ್ತರೊಬ್ಬರ ಮದುವೆಯ ಸಂಬಂಧ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ ಕಾರ್ಯಕ್ರಮದ ನಡುವೆ ಅವರು ಲೋ ಬಿಪಿ ಎದುರಿಸಿದ್ದರು.
ಈ ಸಮಾರಂಭದಲ್ಲೇ ಅವರು ಕುಸಿದು ಬಿದ್ದಿದ್ದರು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸದಾ ಕಾಲ ನಗುತ್ತಲೇ ಇರುತ್ತಿದ್ದ ಅವರಿಗೆ ಯಾವುದೇ ಅನಾರೋಗ್ಯ ಅಥವಾ ಕಾಯಿಲೆ ಇರಲಿಲ್ಲ. ಸ್ನೇಹಿತನ ಮೆಹಂದಿ ಕಾರ್ಯಕ್ರಮದಲ್ಲಿ ಎಲ್ಲರೊಂದಿಗೂ ಡ್ಯಾನ್ಸ್ ಕೂಡ ಮಾಡಿದ್ದರು.
ಡ್ಯಾನ್ಸ್ ಮಾಡುವಾಗ ಸುಸ್ತಾದಂತೆ ಕಂಡುಬಂದಿದ್ದರು, ಹಾಗೆ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾರ್ಕಳದ ಗಾಜ್ರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ತುಳು ರಿಯಾಲಿಟಿ ಶೋನಿಂದ ಕಿರುತೆರೆ ಬದುಕು ಆರಂಭ
ಕಾಮಿಡಿ ಕಿಲಾಡಿಗಳು ಸೀಸನ್ 3 ವಿನ್ನರ್ ಆಗಿದ್ದ ಅವರು ತುಳು ರಿಯಾಲಿಟಿ ಶೋನಿಂದ ತಮ್ಮ ಕಿರುತೆರೆ ಬದುಕು ಆರಂಭಿಸಿದ್ದರು. 2014ರಲ್ಲಿ ಕಡ್ಲೆ ಬಜಿಲ್ ಎಂಬ ತುಳು ರಿಯಾಲಿಟಿ ಶೋನಲ್ಲಿ ಅವರ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಹಲವು ಸಿನಿಮಾ ಆಡಿಷನ್ಗಳು, ಧಾರಾವಾಹಿಗಳಲ್ಲಿ ಸಣ್ಣ ಪುಟ್ಟ ಪಾತ್ರ ಮಾಡಿದ್ದರು. ಹಾಗೆ 2018ರಲ್ಲಿ ಜೀ ಕನ್ನಡದಲ್ಲಿ ಆರಂಭಗೊಂಡ ಕಾಮಿಡಿ ಕಿಲಾಡಿಗಳು ಸೀಸನ್ 2ಗೆ ಆಯ್ಕೆಯಾದರು. ಈ ಸೀಸನ್ನಲ್ಲಿ ರನ್ನರ್ ಅಪ್ ಆಗಿದ್ದ ತಂಡದಲ್ಲಿ ರಾಜೇಶ್ ಕೂಡ ಒಬ್ಬರಾಗಿದ್ದರು.
ನಟ ಸುದೀಪ್ ನಟನೆಯ ಪೈಲ್ವಾನ್ ಚಿತ್ರದಲ್ಲೂ ಒಂದು ಪಾತ್ರ ಮಾಡಿದ್ದರು, ಇದಾದ ಬಳಿಕ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಎಲ್ಲರ ಗಮನ ಸೆಳೆಯುವಂತಹ ಪಾತ್ರ ಮಾಡಿದ್ದರು. ಬಳಿಕ ಈಗ ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಚಾಪ್ಟರ್ 1 ಸಿನಿಮಾದಲ್ಲೂ ಅವರು ನಟಿಸುತ್ತಿದ್ದರು. ಆದ್ರೆ ವಿಧಯಾಟ ಈಗ ಅವರ ಬದುಕು ಅಂತ್ಯಗೊಳಿಸಿದೆ. ಕೇವಲ 34 ಕ್ಕೆ ಅವರು ಇಹಲೋಕ ತ್ಯಜಿಸಿರುವುದು ಎಲ್ಲರಿಗೂ ಶಾಕ್ ತಂದಿದೆ.



Click it and Unblock the Notifications











