Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ವಯಸ್ಸು ಕಡ್ಡಾಯ..! ಎಲ್ಲಿ.? ಏಕೆ ಈ ನಿಯಮ?
ಬಾಲ್ಯ ವಿವಾಹ ತಡೆಯಲು ಸರ್ಕಾರ ಎಷ್ಟೋ ಕ್ರಮ ಜಾರಿ ಮಾಡಿದ್ದರು ಹಾಗೆ ಕಠಿಣ ನಿಯಮ, ಜೈಲು, ದಂಡ ಹೀಗೆ ಹತ್ತಾರು ರೀತಿಯಲ್ಲಿ ಕಡಿವಾಣಕ್ಕೆ ಮುಂದಾದರು ಈ ಪಿಡುಗು ಇಂದಿಗೂ ಜಾರಿಯಲ್ಲಿರುವುದು ಆತಂಕ ಹುಟ್ಟಿಸುತ್ತೆ. ಅದರಲ್ಲೂ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಈ ಆಚರಣೆ ಸಂಪ್ರದಾಯ ಎನ್ನುವಂತೆ ಆಚರಿಸಲ್ಪಡುತ್ತದೆ. ಹೀಗಾಗಿ ಈ ಪಿಡುಗು ಹೋಗಲಾಡಿಸಲು ರಾಜಸ್ಥಾನ ಸರ್ಕಾರ ಹೊಸ ಆಲೋಚನೆ ಹೊರತಂದಿದೆ.
ಇನ್ಮು ಮುಂದೆ ವಿವಾಹವಾಗುವ ಜೋಡಿ ತನ್ನ ಆಹ್ವಾನ ಪತ್ರಿಕೆಯಲ್ಲಿ ತಮ್ಮ ವಯಸ್ಸನ್ನು ಕಡ್ಡಾಯವಾಗಿ ನಮೂದಿಸಿರಬೇಕು ಎಂಬ ನಿಯಮ ಜಾರಿ ಮಾಡಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ಮುದ್ರಿಸುವ ಮುದ್ರಾಣಾಲಯಗಳು ಎರಡೂ ಕುಟುಂಬದವರ ಬಳಿಕ ಹುಡುಗ ಹಾಗೂ ಹುಡುಗಿಯ ವಯಸ್ಸನ್ನು ಕೇಳಿ ಅದನ್ನು ಹೆಸರಿನ ಮುಂದೆ ನಮೂದಿಸಬೇಕು ಎಂದು ನಿರ್ದೇಶನ ನೀಡಿದೆ.

ಹಾಗೆ ಮದುವೆಯ ಸಂದರ್ಭದಲ್ಲಿ ಶಾಮಿಯಾನ, ಟೆಂಟ್, ಪುರೋಹಿತರು, ಲೈಟಿಂಗ್ಸ್ ಹೀಗೆ ಎಲ್ಲಾ ವಿಭಾಗದಲ್ಲಿನ ನೌಕರರು, ಏಜೆಂಟರು ಈ ಬಾಲ್ಯ ವಿವಾಹ ಕುರಿತು ಜಾಗೃತಿ ಮೂಡಿಸಲು ಕಾನೂನಿನ ಕುರಿತು ತಿಳಿಹೇಳುವ ಕೆಲಸ ಮಾಡಬೇಕು ಎಂದಿದೆ.
ರಾಜಸ್ಥಾನದಲ್ಲಿ ಹಲವು ವರ್ಷಗಳಿಂದ ಬಾಲ್ಯ ವಿವಾಹಗಳನ್ನು ಆಚರಿಸುವ ಪ್ರಮುಖ ಸಂದರ್ಭಗಳೆಂದು ಪರಿಗಣಿಸಲಾಗಿರುವ ಅಕ್ಷಯ ತೃತೀಯ ಸಮಯವನ್ನು ಗಮನದಲ್ಲಿಟ್ಟುಕೊಂಡು ಈ ರೀತಿಯ ಆದೇಶ ನೀಡಲಾಗಿದೆ. ಈ ಸಮಯದಲ್ಲಿ ಹೆಚ್ಚಿನ ಜನರು ಬಾಲ್ಯ ವಿವಾಹಕ್ಕೆ ಮುಂದಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹಾಗೆ ಈ ಅಕ್ಷಯ ತೃತೀಯ ದಿನವನ್ನು ವಿವಾಹಕ್ಕಾಗಿ ಆಯ್ಕೆ ಮಾಡಿಕೊಳ್ಳುವುದು ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ.
ಬಾಲ್ಯ ವಿವಾಹವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು, ಬಾಲ್ಯ ವಿವಾಹ ನಿಷೇಧ ಕಾಯ್ದೆಯ ನಿಬಂಧನೆಗಳನ್ನು ಗ್ರಾಮ ಮತ್ತು ತಹಸಿಲ್ ಮಟ್ಟದಲ್ಲಿ ನಿಯೋಜಿಸಲಾದ ವಿವಿಧ ಇಲಾಖೆಗಳ ನೌಕರರು, ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳ ಮೂಲಕ ವ್ಯಾಪಕವಾಗಿ ಪ್ರಚಾರ ಮಾಡಬೇಕು ಎಂದು ಎಸಿಎಸ್ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಹಾಗೆ ಇವರ ಜೊತೆಗೆ ವಿವಿಧ ಬೆಂಬಲ ಗುಂಪುಗಳು, ಮಹಿಳಾ ಗುಂಪುಗಳು, ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಸುರಕ್ಷಾ ಸಖಿ, ಸ್ವ ಸಹಾಯ ಗುಂಪುಗಳು, ಸರ್ಕಾರ ಮಟ್ಟದಲ್ಲಿ ಅಂತಹ ಪೋಷಕರ ಭೇಟಿಯಾಗಿ ಅವರ ಚಿಂತನೆಗಳ ಬದಲಾಯಿಸಲು ಮುಂದಾಗುವಂತೆ ಸೂಚಿಸಲಾಗಿದೆ.
ಸದ್ಯ ಸರ್ಕಾರದ ಈ ಹೊಸ ಆಲೋಚನೆ ಕುರಿತಂತೆ ಮಿಶ್ರ ಪ್ರತಿಕ್ರಿಯೆಗಳು ಕೇಳಿಬಂದಿವೆ. ಸರ್ಕಾರದ ಮಟ್ಟದಲ್ಲಿ ಬಾಲ್ಯ ವಿವಾಹ ತಡೆಗೆ ಇದು ಸೂಕ್ತ ಹಾಗೂ ವ್ಯವಸ್ಥಿತ ಆಲೋಚನೆಯಾಗುವುದಿಲ್ಲ. ಹಾಗೆ ಇದು ಯಶಸ್ವಿಯಾಗುವ ಯಾವುದೇ ಸೂಚನೆ ಇಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ. ಹಾಗೆ ವಧು ವರರು ತಮ್ಮ ಜನ್ಮ ದಿನಾಂಕ ತಿಳಿಸಲು ಯಾವ ದಾಖಲಾತಿ ನೀಡಬೇಕು. ಹೀಗೆ ನೀಡಲಾಗಿರುವ ಜನ್ಮ ದಿನಾಂಕವು ಎಷ್ಟು ನಿಖರ ಎಂಬುದನ್ನು ಯಾರು ದೃಢಪಡಿಸುತ್ತಾರೆ? ಹೀಗೆ ಹಲವು ಪ್ರಶ್ನೆಗಳು ಈಗ ಮೂಡಿವೆ.
ಕಳೆದ ವರ್ಷದ ನವೆಂಬರ್ನಲ್ಲಿ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಭಾರತದ 7 ರಾಜ್ಯಗಳಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹ ನಡೆಯುತ್ತದೆ. ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ್, ತ್ರಿಪುರ, ಅಸ್ಸಾಂ ಮತ್ತು ಆಂಧ್ರ ಪ್ರದೇಶ. 2029ರ ವೇಳೆಗೆ ಈ ಬಾಲ್ಯ ವಿವಾಹ ದರವನ್ನು ಶೇ.5ಕ್ಕಿಂತ ಕಡಿಮೆ ಮಾಡುವ ಗುರಿ ಹೊಂದಲಾಗಿದೆ. 2006 ರಲ್ಲಿ ಬಾಲ್ಯವಿವಾಹ ತಡೆ ಕಾಯ್ದೆ ಜಾರಿಗೆ ಬಂದ ನಂತರ 2019-21 ರಲ್ಲಿ 47.4ರಿಂದ ಶೇ.23.3ಕ್ಕೆ ಇಳಿಕೆ ಕಂಡಿದೆ. ಇದು ದಕ್ಷಿಣ ಏಷ್ಯಾದಲ್ಲಿ ಬಾಲ್ಯ ವಿವಾಹ ಪ್ರಮಾಣ ಇಳಿಕೆಗೆ ಗಮನಾರ್ಹ ಕೊಡುಗೆ ನೀಡಿದೆ.



Click it and Unblock the Notifications