Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈಶಾ ಫೌಂಡೇಶನ್ ಜಗ್ಗಿ ವಾಸುದೇವ್ಗೆ ಕೋರ್ಟ್ ತಪರಾಕಿ.! ಏಕೆ ಗೊತ್ತಾ? ಏನಿದು ಕೇಸ್?
ಈಶಾ ಫೌಂಡೇಶನ್ ಹಾಗೂ ಜಗ್ಗಿ ವಾಸುದೇವ್ ಅವರ ಹೆಸರು ನೀವೆಲ್ಲಾ ಕೇಳಿರುತ್ತೀರಿ. ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಅವರ ಫೌಂಡೇಶನ್ ತುಂಬಾನೆ ಫೇಮಸ್ ಆಗಿದೆ. ಹಾಗೆ ವಿಶ್ವದಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಅವರ ಹಿತವಚನ ಕೇಳಲು ಲಕ್ಷ ಲಕ್ಷ ಮಂದಿ ನಿತ್ಯವು ಭೇಟಿಯಾಗುತ್ತಾರೆ.
ಆದ್ರೆ ಆಗಾಗ ಅವರ ವಿರುದ್ಧ ಹಲವು ರೀತಿಯ ವಿವಾದಗಳು, ಪ್ರಕರಣಗಳು ದಾಖಲಾಗುತ್ತಲೇ ಇರುತ್ತದೆ. ಇತ್ತೀಚಿಗೆ ಅವರ ವಿರುದ್ಧ ಕೇಳಿಬರುತ್ತಿದ್ದ ಪ್ರಕರಣವೊಂದು ಈಗ ಮತ್ತೆ ಸುದ್ದಿಯಾಗುತ್ತಿದೆ. ಮಹಿಳೆಯರನ್ನು ಅವರು ಬಲವಂತವಾಗಿ ಬಂಧಿಸಿಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಅಲ್ಲದೆ ತಮ್ಮ ಮಕ್ಕಳನ್ನು ಈಶಾ ಫೌಂಡೇಶನ್ ಬಂಧಿಸಿಟ್ಟಿದೆ ಎಂದು ಇಬ್ಬರು ಯುವತಿಯರ ತಂದೆ ಕೋರ್ಟ್ ಮೆಟ್ಟಿಲೇರಿದ್ದರು. ಈ ವಿಚಾರಣೆ ನಡೆಸುತ್ತಿರುವ ಕೋರ್ಟ್ ಜಗ್ಗಿ ವಾಸುದೇವ್ ಅವರ ವಿರುದ್ಧ ಕಿಡಿ ಕಾರಿದೆ. ವಾಸುದೇವ್ ಅವರ ಈಶಾ ಫೌಂಡೇಶನ್ ಕುರಿತು ಅಸಮಾಧಾನ ಹೊರಹಾಕಿದೆ.
ಏನಿದು ಪ್ರಕರಣ?
ಕೊಯಮತ್ತೂರಿನ ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಬೋಧನೆ ಮಾಡುತ್ತಿದ್ದ ನಿವೃತ್ತ ಪ್ರಾಧ್ಯಾಪಕ ಎಸ್ ಕಾಮರಾಜ್ ಅವರು ತಮ್ಮ ಪುತ್ರಿಯರನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ತಮ್ಮ ಮಕ್ಕಳನ್ನು ಈಶಾ ಫೌಂಡೇಶನ್ನಲ್ಲಿಯೇ ಶಾಶ್ವತವಾಗಿ ಉಳಿಯುವಂತೆ ಮಾಡಲು ಬ್ರೈನ್ ವಾಶ್ ಮಾಡಲಾಗಿದೆ ಎಂದು ಆರೋಪಿಸಿದ್ದರು.
ಸೋಮವಾರ ನ್ಯಾಯಾಲಯಕ್ಕೆ ಹಾಜರಾದ 42 ಮತ್ತು 39 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು, ನಮ್ಮನ್ನು ಯಾರು ಸಹ ಬಂಧಿಸಿಟ್ಟಿಲ್ಲ, ನಾವು ನಮ್ಮ ಇಚ್ಚೆಯಂತೆ ಈಶಾ ಫೌಂಡೇಶನ್ಗೆ ಬಂದಿದ್ದೇವೆ. ನಮ್ಮನ್ನು ಯಾರು ಅಪಹರಿಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಆದರೆ ಈ ಹಿಂದೆಯೂ ಈಶಾ ಫೌಂಡೇಶನ್ ಕುರಿತು ಹಲವು ಪ್ರಕರಣ, ದೂರು ಕೇಳಿಬಂದಿದ್ದ ಹಿನ್ನೆಲೆ ಈಶಾ ಫೌಂಡೇಶನ್ಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಮರು ಪರಿಶೀಲಿಸಲು ಕೋರ್ಟ್ ತಿಳಿಸಿದೆ. ಹಾಗೆ ತಮ್ಮ ಮಕ್ಕಳನ್ನು ಮದುವೆ ಮಾಡಿ ಮನೆಯಿಂದ ಕಳುಹಿಸಿರುವ ಅವರು ಬೇರೆಯವರ ಮಕ್ಕಳ ಸನ್ಯಾಸ ಸ್ವೀಕರಿಸಲಿ ಎಂದು ಬಯಸುವುದೇಕೆ ಎಂದು ಜಗ್ಗಿ ವಾಸುದೇವ್ ಅವರಿಗೆ ಕೋರ್ಟ್ ಪ್ರಶ್ನಿಸಿದೆ.
'ತನ್ನ ಮಗಳನ್ನು ಮದುವೆ ಮಾಡಿಸಿ ಜೀವನದಲ್ಲಿ ನೆಲೆಯೂರುವಂತೆ ಮಾಡಿದ ವ್ಯಕ್ತಿ ಬೇರೆಯವರ ಹೆಣ್ಣುಮಕ್ಕಳನ್ನು ತಲೆ ಕೆಡಿಸಿಕೊಂಡು ಸನ್ಯಾಸಿ ಜೀವನ ನಡೆಸುವಂತೆ ಪ್ರೋತ್ಸಾಹಿಸುತ್ತಿರುವುದು ಏಕೆ ಎಂಬುದು ನಮಗೆ ತಿಳಿಯಬೇಕಿದೆ' ಎಂದು ನ್ಯಾಯಮೂರ್ತಿ ಶಿವಜ್ಞಾನಂ ಹೇಳಿದ್ದಾರೆ.
ಆದರೆ ಮಹಿಳೆಯರು ಸ್ವಯಂಪ್ರೇರಣೆಯಿಂದ ಈಶಾ ಫೌಂಡೇಶನ್ಗೆ ಬರುತ್ತಾರೆ. ಇಲ್ಲಿ ಉಳಿಯಲು ಅವರೇ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಈಶಾ ಫೌಂಡೇಶನ್ ಪ್ರತಿಪಾದಿಸಿದೆ.
ಯಾರು ಈ ಜಗ್ಗಿ ವಾಸುದೇವ್?
ತೆಲುಗು ಕುಟುಂಬದಲ್ಲಿ ಜನಿಸಿದ ಜಗದೀಶ್ ವಾಸುದೇವ್ ಅವರು ಬಿ.ವಿ ವಾಸುದೇವ್ ಮತ್ತು ಸುಶೀಲಾ ವಾಸುದೇವ್ ಅವರ ಐದು ಮಕ್ಕಳಲ್ಲಿ ಕಿರಿಯರಾಗಿದ್ದರು. ಸದ್ಗುರುಗಳ ತಂದೆ ಮೈಸೂರು ರೈಲ್ವೆ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರಜ್ಞರಾಗಿದ್ದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಜಗ್ಗಿ ವಾಸುದೇವ್ ಅವರು ಇಂಗ್ಲೀಷ್ ಭಾಷೆಯಲ್ಲಿ ಪದವಿ ಪಡೆದಿದ್ದಾರೆ. ಅವರು 1984ರಲ್ಲಿ ವಿಜಿಕುಮಾರಿ ಅವರನ್ನು ವಿವಾಹವಾಗಿದ್ದರು. ಜೊತೆಗೆ ಇವರಿಗೆ ಒಬ್ಬಳು ಮಗಳಿದ್ದಾಳೆ.
1992 ರಲ್ಲಿ ಚಿಕ್ಕದಾದ ಆಶ್ರಮ ಮತ್ತು ಯೋಗ ಕೇಂದ್ರವನ್ನು ಆರಂಭಿಸಿದ್ದರು. ಇಲ್ಲಿಂದ ಅವರ ಆಧ್ಯಾತ್ಮಿಕ ಜೀವನ ಆರಂಭಗೊಂಡಿತ್ತು. ಜನವರಿ 1997ರಲ್ಲಿ ಸದ್ಗುರು ಪತ್ನಿ ನಿಧನರಾದರು. ಆಕೆಯ ಸಾವಿನ ಹಿಂದೆ ಸದ್ಗುರು ಕೈವಾಡವಿದೆ ಎಂಬ ಆರೋಪ ಸಹ ಕೇಳಿಬಂದಿತ್ತು.
ಆದರೆ ಈಶಾ ಫೌಂಡೇಶನ್ಗೂ ಮುನ್ನ ಅವರು ಮೈಸೂರಿನಲ್ಲಿ ಕೋಳಿ ಫಾರಂ ತೆರೆದಿದ್ದರು. ಆದರೆ ನಿಧಾನವಾಗಿ ಅವರು ಆಧ್ಯಾತ್ಮದ ಕಡೆ ಒಲವು ಹೊಂದಿದರು. ಅವರೇ ಹೇಳಿದ ಪ್ರಕಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಒಮ್ಮೆ ಹೋದಾಗ ಅಲ್ಲಿ ಅವರಿಗೆ ಆಧ್ಯಾತ್ಮವನ್ನು ಅಪ್ಪಿಕೊಳ್ಳಬೇಕು ಎಂಬ ಮನಸ್ಸಾಗಿತಂತೆ.



Click it and Unblock the Notifications