Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ನವೆಂಬರ್ 30ಕ್ಕೆ ಅಪ್ಪಳಿಸಲಿದೆ ದಿತ್ವಾ ಚಂಡಮಾರುತ: ಎಲ್ಲೆಲ್ಲಿ ಮಳೆ, ಯಾವ ಪ್ರದೇಶಕ್ಕೆ ಎಚ್ಚರಿಕೆ?
ಮಲಕ್ಕಾ ಜಲಸಂಧಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದ ಪಕ್ಕದ ಭಾಗಗಳ ಮೇಲೆ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗಿ ಸೆನ್ಯಾರ್ ಚಂಡಮಾರುತ ರೂಪುಗೊಂಡಿತ್ತು. ಇದರಿಂದ ಹಲವು ಕಡೆಗಳಲ್ಲಿ ಮಳೆಯಾಗಿತ್ತು. ಆದ್ರೆ ಈಗ ಸೆನ್ಯಾರ್ ದುರ್ಬಲಗೊಂಡಿದ್ದು, ಅದರ ಜೊತೆಗೆ ಮತ್ತೊಂದು ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 30ರ ಸುಮಾರಿಗೆ ಈ ಚಂಡಮಾರುತವು ತಮಿಳುನಾಡು, ಪುದುಚೆರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲಕ್ಕಾ ಜಲಸಂಧಿ ಮತ್ತು ಪಕ್ಕದ ಇಂಡೋನೇಷ್ಯಾದ ಮೇಲೆ 'ಸೆನ್ಯಾರ್' ಚಂಡಮಾರುತವು ಆಳವಾದ ಹಾನಿ ಉಂಟು ಮಾಡಿದೆ. ಅದರ ನಡುವೆಯೇ ಈಗ ಮತ್ತೊಂದು ಚಂಡಮಾರುತ ಅಪ್ಪಳಿಸುವುದು ಖಚಿತವಾಗಿದೆ. ಈ ಚಂಡಮಾರುತಕ್ಕೆ ದಿತ್ವಾ ಎಂದು ಕರೆಯಲಾಗಿದೆ. ಇದು ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿ ನೆಲೆಗೊಂಡಿದೆ, ಇದು ನವೆಂಬರ್ 27-30 ರಂದು ತಮಿಳುನಾಡಿನಲ್ಲಿ ಭಾರೀ ಅಥವಾ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ದಿತ್ವಾ ಚಂಡಮಾರುತವು ಇಂದು ಪಶ್ಚಿಮ ಬಂಗಾಳ ಕೊಲ್ಲಿಯ ಮೇಲೆ 6.9°N/81.9°E ಬಳಿ ರೂಪುಗೊಂಡಿದೆ. ಇದು ಪೊಟ್ಟುವಿಲ್, ಬಟಿಕಲೋವಾದ ~90 ಕಿಮೀ ದಕ್ಷಿಣ ಪೂರ್ವ ಮತ್ತು ಚೆನ್ನೈನ ~700 ಕಿಮೀ ದಕ್ಷಿಣ ಪೂರ್ವ ಕರಾವಳಿಗೆ ಹತ್ತಿರದಲ್ಲಿದೆ. ಈ ವ್ಯವಸ್ಥೆಯು ನವೆಂಬರ್ 30 ರ ಆರಂಭದ ವೇಳೆಗೆ ನೈರುತ್ಯ ದಿಕ್ಕಿಗೆ ಚಲಿಸಲಿದೆ. ಹಾಗೆ ಉತ್ತರ ತಮಿಳುನಾಡು-ಪುದುಚೇರಿ-ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ತಲುಪುತ್ತದೆ ಎಂದು ಐಎಂಡಿ ತನ್ನ ವರದಿಯಲ್ಲಿ ತಿಳಿಸಿದೆ.
ಈ ಚಂಡಮಾರುತದ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯು ನವೆಂಬರ್ 27, 28 ಮತ್ತು 29 ರಂದು ಚೆನ್ನೈ, ನಾಗಪಟ್ಟಣಂ, ತಿರುವಳ್ಳೂರು ಮತ್ತು ತಂಜಾವೂರು ಸೇರಿದಂತೆ ಹಲವಾರು ತಮಿಳುನಾಡು ಜಿಲ್ಲೆಗಳಿಗೆ ಹಳದಿ ಮತ್ತು ಆರೇಂಜ್ ಅಲರ್ಟ್ ಅನ್ನು ಹೊರಡಿಸಿದೆ. ಇದರಿಂದ ನವೆಂಬರ್ 27-30 ರವರೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ನವೆಂಬರ್ 28 ಮತ್ತು 29 ರಂದು ಪ್ರತ್ಯೇಕವಾದ ಮಳೆ ಬೀಳಲಿದೆ. ಕರಾವಳಿ ಆಂಧ್ರಪ್ರದೇಶ ಮತ್ತು ಯಾಣಂ ಮತ್ತು ರಾಯಲಸೀಮಾದಲ್ಲಿ ನವೆಂಬರ್ 28-ಡಿಸೆಂಬರ್ 1ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನವೆಂಬರ್ 30, 2025 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಹಾಗೆ ಈ ಚಂಡಮಾರುತದ ಪರಿಣಾಮವಾಗಿ ಗಂಟೆಗೆ 80-90 ಕಿ.ಮೀ ವೇಗದ ಗಾಳಿ ಮತ್ತು ಅಲೆಗಳ ಅಬ್ಬರ ಕಂಡುಬರುವ ನಿರೀಕ್ಷೆಯಿದೆ.
ಕರ್ನಾಟಕದಲ್ಲೂ ಮಳೆ ಸಂಭವ
ಈ ದಿತ್ವಾ ಚಂಡಮಾರುತ ಹಿನ್ನೆಲೆ ಕರ್ಕಾಟಕ ಭಾಗದಲ್ಲೂ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ, ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಾಧಾರಣದಿಂದ ಕೂಡಿದ ಮಳೆ ಬೀಳಬಹುದು ಎನ್ನಲಾಗಿದೆ.
ಇದಕ್ಕೂ ಮೊದಲು ಸೆನ್ಯಾರ್ ಚಂಡಮಾರುತವು ಇದೇ ರೀತಿ ಅಪ್ಪಳಿಸಿತ್ತು. ಆದ್ರೆ ಅದರ ಪರಿಣಾಮ ಬಹಳ ಕಡಿಮೆಯಾಗಿತ್ತು. ಬಂಗಾಳಕೊಲ್ಲಿಯ ನೈರುತ್ಯ ಮತ್ತು ಶ್ರೀಲಂಕಾದ ಆಗ್ನೇಯ ಮತ್ತು ಹಿಂದೂ ಮಹಾಸಾಗರದ ಸಮಭಾಜಕ ಪ್ರದೇಶಗಳಲ್ಲಿ ಕಡಿಮೆ ಒತ್ತಡದ ಪ್ರದೇಶ ಗುರುತಿಸಲಾಗಿತ್ತು. ಸದ್ಯ ಈಗ ನವೆಂಬರ್ 30ರ ಸುಮಾರಿಗೆ ದಿತ್ವಾ ಚಂಡಮಾರುತವು ತಮಿಳುನಾಡು, ಪುದುಚೆರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



Click it and Unblock the Notifications