Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನವೆಂಬರ್ 30ಕ್ಕೆ ಅಪ್ಪಳಿಸಲಿದೆ ದಿತ್ವಾ ಚಂಡಮಾರುತ: ಎಲ್ಲೆಲ್ಲಿ ಮಳೆ, ಯಾವ ಪ್ರದೇಶಕ್ಕೆ ಎಚ್ಚರಿಕೆ?
ಮಲಕ್ಕಾ ಜಲಸಂಧಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದ ಪಕ್ಕದ ಭಾಗಗಳ ಮೇಲೆ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗಿ ಸೆನ್ಯಾರ್ ಚಂಡಮಾರುತ ರೂಪುಗೊಂಡಿತ್ತು. ಇದರಿಂದ ಹಲವು ಕಡೆಗಳಲ್ಲಿ ಮಳೆಯಾಗಿತ್ತು. ಆದ್ರೆ ಈಗ ಸೆನ್ಯಾರ್ ದುರ್ಬಲಗೊಂಡಿದ್ದು, ಅದರ ಜೊತೆಗೆ ಮತ್ತೊಂದು ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 30ರ ಸುಮಾರಿಗೆ ಈ ಚಂಡಮಾರುತವು ತಮಿಳುನಾಡು, ಪುದುಚೆರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲಕ್ಕಾ ಜಲಸಂಧಿ ಮತ್ತು ಪಕ್ಕದ ಇಂಡೋನೇಷ್ಯಾದ ಮೇಲೆ 'ಸೆನ್ಯಾರ್' ಚಂಡಮಾರುತವು ಆಳವಾದ ಹಾನಿ ಉಂಟು ಮಾಡಿದೆ. ಅದರ ನಡುವೆಯೇ ಈಗ ಮತ್ತೊಂದು ಚಂಡಮಾರುತ ಅಪ್ಪಳಿಸುವುದು ಖಚಿತವಾಗಿದೆ. ಈ ಚಂಡಮಾರುತಕ್ಕೆ ದಿತ್ವಾ ಎಂದು ಕರೆಯಲಾಗಿದೆ. ಇದು ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿ ನೆಲೆಗೊಂಡಿದೆ, ಇದು ನವೆಂಬರ್ 27-30 ರಂದು ತಮಿಳುನಾಡಿನಲ್ಲಿ ಭಾರೀ ಅಥವಾ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ದಿತ್ವಾ ಚಂಡಮಾರುತವು ಇಂದು ಪಶ್ಚಿಮ ಬಂಗಾಳ ಕೊಲ್ಲಿಯ ಮೇಲೆ 6.9°N/81.9°E ಬಳಿ ರೂಪುಗೊಂಡಿದೆ. ಇದು ಪೊಟ್ಟುವಿಲ್, ಬಟಿಕಲೋವಾದ ~90 ಕಿಮೀ ದಕ್ಷಿಣ ಪೂರ್ವ ಮತ್ತು ಚೆನ್ನೈನ ~700 ಕಿಮೀ ದಕ್ಷಿಣ ಪೂರ್ವ ಕರಾವಳಿಗೆ ಹತ್ತಿರದಲ್ಲಿದೆ. ಈ ವ್ಯವಸ್ಥೆಯು ನವೆಂಬರ್ 30 ರ ಆರಂಭದ ವೇಳೆಗೆ ನೈರುತ್ಯ ದಿಕ್ಕಿಗೆ ಚಲಿಸಲಿದೆ. ಹಾಗೆ ಉತ್ತರ ತಮಿಳುನಾಡು-ಪುದುಚೇರಿ-ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ತಲುಪುತ್ತದೆ ಎಂದು ಐಎಂಡಿ ತನ್ನ ವರದಿಯಲ್ಲಿ ತಿಳಿಸಿದೆ.
ಈ ಚಂಡಮಾರುತದ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯು ನವೆಂಬರ್ 27, 28 ಮತ್ತು 29 ರಂದು ಚೆನ್ನೈ, ನಾಗಪಟ್ಟಣಂ, ತಿರುವಳ್ಳೂರು ಮತ್ತು ತಂಜಾವೂರು ಸೇರಿದಂತೆ ಹಲವಾರು ತಮಿಳುನಾಡು ಜಿಲ್ಲೆಗಳಿಗೆ ಹಳದಿ ಮತ್ತು ಆರೇಂಜ್ ಅಲರ್ಟ್ ಅನ್ನು ಹೊರಡಿಸಿದೆ. ಇದರಿಂದ ನವೆಂಬರ್ 27-30 ರವರೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ನವೆಂಬರ್ 28 ಮತ್ತು 29 ರಂದು ಪ್ರತ್ಯೇಕವಾದ ಮಳೆ ಬೀಳಲಿದೆ. ಕರಾವಳಿ ಆಂಧ್ರಪ್ರದೇಶ ಮತ್ತು ಯಾಣಂ ಮತ್ತು ರಾಯಲಸೀಮಾದಲ್ಲಿ ನವೆಂಬರ್ 28-ಡಿಸೆಂಬರ್ 1ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನವೆಂಬರ್ 30, 2025 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಹಾಗೆ ಈ ಚಂಡಮಾರುತದ ಪರಿಣಾಮವಾಗಿ ಗಂಟೆಗೆ 80-90 ಕಿ.ಮೀ ವೇಗದ ಗಾಳಿ ಮತ್ತು ಅಲೆಗಳ ಅಬ್ಬರ ಕಂಡುಬರುವ ನಿರೀಕ್ಷೆಯಿದೆ.
ಕರ್ನಾಟಕದಲ್ಲೂ ಮಳೆ ಸಂಭವ
ಈ ದಿತ್ವಾ ಚಂಡಮಾರುತ ಹಿನ್ನೆಲೆ ಕರ್ಕಾಟಕ ಭಾಗದಲ್ಲೂ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ, ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಾಧಾರಣದಿಂದ ಕೂಡಿದ ಮಳೆ ಬೀಳಬಹುದು ಎನ್ನಲಾಗಿದೆ.
ಇದಕ್ಕೂ ಮೊದಲು ಸೆನ್ಯಾರ್ ಚಂಡಮಾರುತವು ಇದೇ ರೀತಿ ಅಪ್ಪಳಿಸಿತ್ತು. ಆದ್ರೆ ಅದರ ಪರಿಣಾಮ ಬಹಳ ಕಡಿಮೆಯಾಗಿತ್ತು. ಬಂಗಾಳಕೊಲ್ಲಿಯ ನೈರುತ್ಯ ಮತ್ತು ಶ್ರೀಲಂಕಾದ ಆಗ್ನೇಯ ಮತ್ತು ಹಿಂದೂ ಮಹಾಸಾಗರದ ಸಮಭಾಜಕ ಪ್ರದೇಶಗಳಲ್ಲಿ ಕಡಿಮೆ ಒತ್ತಡದ ಪ್ರದೇಶ ಗುರುತಿಸಲಾಗಿತ್ತು. ಸದ್ಯ ಈಗ ನವೆಂಬರ್ 30ರ ಸುಮಾರಿಗೆ ದಿತ್ವಾ ಚಂಡಮಾರುತವು ತಮಿಳುನಾಡು, ಪುದುಚೆರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



Click it and Unblock the Notifications