Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ನವೆಂಬರ್ 30ಕ್ಕೆ ಅಪ್ಪಳಿಸಲಿದೆ ದಿತ್ವಾ ಚಂಡಮಾರುತ: ಎಲ್ಲೆಲ್ಲಿ ಮಳೆ, ಯಾವ ಪ್ರದೇಶಕ್ಕೆ ಎಚ್ಚರಿಕೆ?
ಮಲಕ್ಕಾ ಜಲಸಂಧಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದ ಪಕ್ಕದ ಭಾಗಗಳ ಮೇಲೆ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗಿ ಸೆನ್ಯಾರ್ ಚಂಡಮಾರುತ ರೂಪುಗೊಂಡಿತ್ತು. ಇದರಿಂದ ಹಲವು ಕಡೆಗಳಲ್ಲಿ ಮಳೆಯಾಗಿತ್ತು. ಆದ್ರೆ ಈಗ ಸೆನ್ಯಾರ್ ದುರ್ಬಲಗೊಂಡಿದ್ದು, ಅದರ ಜೊತೆಗೆ ಮತ್ತೊಂದು ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 30ರ ಸುಮಾರಿಗೆ ಈ ಚಂಡಮಾರುತವು ತಮಿಳುನಾಡು, ಪುದುಚೆರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲಕ್ಕಾ ಜಲಸಂಧಿ ಮತ್ತು ಪಕ್ಕದ ಇಂಡೋನೇಷ್ಯಾದ ಮೇಲೆ 'ಸೆನ್ಯಾರ್' ಚಂಡಮಾರುತವು ಆಳವಾದ ಹಾನಿ ಉಂಟು ಮಾಡಿದೆ. ಅದರ ನಡುವೆಯೇ ಈಗ ಮತ್ತೊಂದು ಚಂಡಮಾರುತ ಅಪ್ಪಳಿಸುವುದು ಖಚಿತವಾಗಿದೆ. ಈ ಚಂಡಮಾರುತಕ್ಕೆ ದಿತ್ವಾ ಎಂದು ಕರೆಯಲಾಗಿದೆ. ಇದು ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿ ನೆಲೆಗೊಂಡಿದೆ, ಇದು ನವೆಂಬರ್ 27-30 ರಂದು ತಮಿಳುನಾಡಿನಲ್ಲಿ ಭಾರೀ ಅಥವಾ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ದಿತ್ವಾ ಚಂಡಮಾರುತವು ಇಂದು ಪಶ್ಚಿಮ ಬಂಗಾಳ ಕೊಲ್ಲಿಯ ಮೇಲೆ 6.9°N/81.9°E ಬಳಿ ರೂಪುಗೊಂಡಿದೆ. ಇದು ಪೊಟ್ಟುವಿಲ್, ಬಟಿಕಲೋವಾದ ~90 ಕಿಮೀ ದಕ್ಷಿಣ ಪೂರ್ವ ಮತ್ತು ಚೆನ್ನೈನ ~700 ಕಿಮೀ ದಕ್ಷಿಣ ಪೂರ್ವ ಕರಾವಳಿಗೆ ಹತ್ತಿರದಲ್ಲಿದೆ. ಈ ವ್ಯವಸ್ಥೆಯು ನವೆಂಬರ್ 30 ರ ಆರಂಭದ ವೇಳೆಗೆ ನೈರುತ್ಯ ದಿಕ್ಕಿಗೆ ಚಲಿಸಲಿದೆ. ಹಾಗೆ ಉತ್ತರ ತಮಿಳುನಾಡು-ಪುದುಚೇರಿ-ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ತಲುಪುತ್ತದೆ ಎಂದು ಐಎಂಡಿ ತನ್ನ ವರದಿಯಲ್ಲಿ ತಿಳಿಸಿದೆ.
ಈ ಚಂಡಮಾರುತದ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯು ನವೆಂಬರ್ 27, 28 ಮತ್ತು 29 ರಂದು ಚೆನ್ನೈ, ನಾಗಪಟ್ಟಣಂ, ತಿರುವಳ್ಳೂರು ಮತ್ತು ತಂಜಾವೂರು ಸೇರಿದಂತೆ ಹಲವಾರು ತಮಿಳುನಾಡು ಜಿಲ್ಲೆಗಳಿಗೆ ಹಳದಿ ಮತ್ತು ಆರೇಂಜ್ ಅಲರ್ಟ್ ಅನ್ನು ಹೊರಡಿಸಿದೆ. ಇದರಿಂದ ನವೆಂಬರ್ 27-30 ರವರೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ನವೆಂಬರ್ 28 ಮತ್ತು 29 ರಂದು ಪ್ರತ್ಯೇಕವಾದ ಮಳೆ ಬೀಳಲಿದೆ. ಕರಾವಳಿ ಆಂಧ್ರಪ್ರದೇಶ ಮತ್ತು ಯಾಣಂ ಮತ್ತು ರಾಯಲಸೀಮಾದಲ್ಲಿ ನವೆಂಬರ್ 28-ಡಿಸೆಂಬರ್ 1ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನವೆಂಬರ್ 30, 2025 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಹಾಗೆ ಈ ಚಂಡಮಾರುತದ ಪರಿಣಾಮವಾಗಿ ಗಂಟೆಗೆ 80-90 ಕಿ.ಮೀ ವೇಗದ ಗಾಳಿ ಮತ್ತು ಅಲೆಗಳ ಅಬ್ಬರ ಕಂಡುಬರುವ ನಿರೀಕ್ಷೆಯಿದೆ.
ಕರ್ನಾಟಕದಲ್ಲೂ ಮಳೆ ಸಂಭವ
ಈ ದಿತ್ವಾ ಚಂಡಮಾರುತ ಹಿನ್ನೆಲೆ ಕರ್ಕಾಟಕ ಭಾಗದಲ್ಲೂ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ, ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಾಧಾರಣದಿಂದ ಕೂಡಿದ ಮಳೆ ಬೀಳಬಹುದು ಎನ್ನಲಾಗಿದೆ.
ಇದಕ್ಕೂ ಮೊದಲು ಸೆನ್ಯಾರ್ ಚಂಡಮಾರುತವು ಇದೇ ರೀತಿ ಅಪ್ಪಳಿಸಿತ್ತು. ಆದ್ರೆ ಅದರ ಪರಿಣಾಮ ಬಹಳ ಕಡಿಮೆಯಾಗಿತ್ತು. ಬಂಗಾಳಕೊಲ್ಲಿಯ ನೈರುತ್ಯ ಮತ್ತು ಶ್ರೀಲಂಕಾದ ಆಗ್ನೇಯ ಮತ್ತು ಹಿಂದೂ ಮಹಾಸಾಗರದ ಸಮಭಾಜಕ ಪ್ರದೇಶಗಳಲ್ಲಿ ಕಡಿಮೆ ಒತ್ತಡದ ಪ್ರದೇಶ ಗುರುತಿಸಲಾಗಿತ್ತು. ಸದ್ಯ ಈಗ ನವೆಂಬರ್ 30ರ ಸುಮಾರಿಗೆ ದಿತ್ವಾ ಚಂಡಮಾರುತವು ತಮಿಳುನಾಡು, ಪುದುಚೆರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



Click it and Unblock the Notifications
