Latest Updates
-
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು
ಚಂಡಮಾರುತ: ಡಿಸೆಂಬರ್ 1ರಿಂದ ಕರ್ನಾಟಕದ ಈ ಭಾಗಗಳಲ್ಲಿ ಡಿಸೆಂಬರ್ 3ರವರೆಗೆ ಭಾರೀ ಮಳೆ ಸಾಧ್ಯತೆ
ಚಳಿಗಾಲದಲ್ಲಿ ಬರುತ್ತಿರುವ ಅಕಾಲಿಕ ಮಳೆ ಭಾರೀ ನಷ್ಟವನ್ನು ಉಂಟು ಮಾಡುವ ಆತಂಕ ಉಂಟಾಗಿದೆ. ಕರ್ನಾಟಕ ಸೇರಿ ಏಳು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆ ಬೀಳುವ ಸೂಚನೆಯಿದೆ. ಫಂಗಲ್ ಸೈಕ್ಲೋನ್ನಿಂದಾಗಿ ಎಲ್ಲಡೆ ಮೋಡ ಮುಸಕಿದ ವಾತಾವರಣ ಇದೆ.
ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ
ತಮಿಳುನಾಡು, ಪುದುಚೇರಿ, ಕೇರಳ, ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ ಹಾಗೂ ಅಂಡಮಾನ್, ನಿಕೋಬಾರ್ ದ್ವೀಪಗಳಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾರಾಂತ್ಯದಲ್ಲಿ ಟ್ರಿಪ್ ಹೋಗುವವರು ಜಾಗ್ರತೆ
ವಾರಾಂತ್ಯದಲ್ಲಿ ಟ್ರಿಪ್ ಹೋಗುವವರು ಸಾಧ್ಯವಾದರೆ ತಮ್ಮ ಟ್ರಿಪ್ಗಳನ್ನು ಮುಂದೂಡುವುದು ಒಳ್ಳೆಯದು, ಭಾರೀ ಮಳೆ ತುಂಬಾನೇ ಅಡ್ಡಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜನ ಜೀವನ ಅಸ್ತವ್ಯಸ್ಥವಾಗಬಹುದು. ಈ ಸಮಯದಲ್ಲಿ ಸಮುದ್ರದ ಬಳಿ ಹೋಗುವುದು ಅಥವಾ ನೀರಿನ ಅಪಾಯವಿರುವ ಸ್ಥಳಗಳಿಗೆ ಹೋಗದಿರುವುದು ಸುರಕ್ಷಿತ. ಮೀನುಗಾರರಿಗೆ ಮೀನು ಬೋಟುಗಳನ್ನು ಸಮುದ್ರಕ್ಕೆ ಇಳಿಸದಂತೆ ಸೂಚನೆ ನೀಡಲಾಗಿದೆ.
ಅಕಾಲಿಕ ಮಳೆಯಿಂದ ಬೆಳೆ ನಷ್ಟ
ಈಗ ಚಂಡಾಮಾರುತದಿಂದಾಗಿ ಮಳೆ ಬೀಳುತ್ತಿರುವುದರಿಂದ ಹಲವು ಕಡೆ ಬೆಳೆ ನಷ್ಟ ಉಂಟಾಗುತ್ತಿದೆ, ಇನ್ನು ಕೆಲವು ಕಡೆ ಭಾರೀ ದುರಂತವನ್ನೇ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡ ಜನರಿಗೆ ನೆರವಾಗಲು ಸಕಲ ಸಿದ್ಧತೆ ನಡೆಸಿದೆ.
ತಮಿಳುನಾಡಿನಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ, ಹಲವು ಕಡೆಯಿಂದ ಜನರನ್ನು ಸುರಕ್ಷಿತವಾಗಿ ಸಾಗಿಸಲಾಗಿದೆ, ಅಲ್ಲದೆ ನೀರಿನ ಪ್ರಮಾಣ ಹೆಚ್ಚಾದರೆ ಜನರ ರಕ್ಷಣೆಗೆ ಮೋಟಾರ್ ಪಂಪ್ಗಳು, ಜನರೇಟರ್, ದೋಣಿ, ಬೋಟು ಅಂತ ಸಿದ್ಧತೆಗಳನ್ನು ಮಾಡಲಾಗಿದೆ.
ಬೆಂಗಳೂರು, ಅದರ ಸುತ್ತ ಮುತ್ತಲಿನ ಪ್ರದೇಶದಲ್ಲಿ ಮೋಡ ಮುಸುಕಿದ ವಾತಾವರಣ
ಬೆಂಗಳೂರು ಹಾಗೂ ಸುತ್ತ ಮುತ್ತಲಿನ ಪ್ರದೇಶದದಲ್ಲಿ ಇನ್ನೂ 40 ಗಂಟೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ಉಷ್ಣಾಂಶ 18 ಡಿಗ್ರಿC ಇರುವುದರಿಂದ ಚಳಿಯೂ ಅಧಿಕವಿರಲಿದೆ, ಹಾಗಾಗಿ ಟ್ರಾವೆಲ್ ಮಾಡುವಾಗ ಹವಾಮಾನ ವರದಿ ಪರಿಶೀಲಿಸಿ ಹೋಗುವುದು ಸೂಕ್ತವಾಗಿದೆ.
ಡಿಸೆಂಬರ್ 2ರವರೆಗೆ ಭಾರೀ ಮಳೆಯ ಸಾಧ್ಯತೆ ಇದೆ
ಕೊಡಗು, ಚಿಕ್ಕಮಗಳೂರು, ಹಾಸನ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಂದು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೂ ಹಲವು ಕಡೆ ಮಳೆ ಬೀಳುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ರಾಮನಗರ, ಮಂಡ್ಯ, ತುಮಕೂರು ಈ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ, ಉತ್ತರ ಕರ್ನಾಟಕದ ಸಾಧಾರಣ ಮಳೆಯಾಗಲಿದೆ.



Click it and Unblock the Notifications