Latest Updates
-
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ! -
ಸಣ್ಣ ಬಾಲ್ಕನಿಯಲ್ಲಿ ಓಣಂ ಸಂಭ್ರಮ: ಬಜೆಟ್ನಲ್ಲಿ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್ -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕೊನೆಯ ದಿನದ ಸಂಭ್ರಮ ಮತ್ತು ಮನೆಯನ್ನು ಸಿಂಗರಿಸುವ ಸುಲಭ ಟಿಪ್ಸ್ -
ಜಂಕ್ ಫುಡ್ ತಿನ್ನುವ ಮುನ್ನ ಎಚ್ಚರ! ಪ್ಯಾಕೆಟ್ ಮೇಲೆ ಬರಲಿದೆ ಸುಪ್ರೀಂ ಕೋರ್ಟ್ ಸೂಚಿಸಿದ ವಾರ್ನಿಂಗ್ ಲೇಬಲ್ -
ರೈಲ್ವೆ ನೀರಿನಲ್ಲಿ ಅಪಾಯಕಾರಿ ಇ-ಕೋಲೈ ಪತ್ತೆ: ಪ್ರಯಾಣಿಕರೇ, ಈ ತಪ್ಪುಗಳನ್ನು ಮಾಡಬೇಡಿ! -
ನಾಗರ ಪಂಚಮಿ ಸಂಭ್ರಮ: ಹಬ್ಬದ ಲುಕ್ ಹೆಚ್ಚಿಸಲು ಈ ಫ್ಯಾಷನ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಬೆಂಗಳೂರಿನಲ್ಲಿ ಓಣಂ ಸಂಭ್ರಮ: ಓಣಸದ್ಯ ಮತ್ತು ಪೂಕಳಂ ಕಿಟ್ಗಳಿಗೆ ಭಾರಿ ಬೇಡಿಕೆ, ಈಗಲೇ ಬುಕ್ ಮಾಡಿ!
ಚಂಡಮಾರುತ: ಡಿಸೆಂಬರ್ 1ರಿಂದ ಕರ್ನಾಟಕದ ಈ ಭಾಗಗಳಲ್ಲಿ ಡಿಸೆಂಬರ್ 3ರವರೆಗೆ ಭಾರೀ ಮಳೆ ಸಾಧ್ಯತೆ
ಚಳಿಗಾಲದಲ್ಲಿ ಬರುತ್ತಿರುವ ಅಕಾಲಿಕ ಮಳೆ ಭಾರೀ ನಷ್ಟವನ್ನು ಉಂಟು ಮಾಡುವ ಆತಂಕ ಉಂಟಾಗಿದೆ. ಕರ್ನಾಟಕ ಸೇರಿ ಏಳು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆ ಬೀಳುವ ಸೂಚನೆಯಿದೆ. ಫಂಗಲ್ ಸೈಕ್ಲೋನ್ನಿಂದಾಗಿ ಎಲ್ಲಡೆ ಮೋಡ ಮುಸಕಿದ ವಾತಾವರಣ ಇದೆ.
ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ
ತಮಿಳುನಾಡು, ಪುದುಚೇರಿ, ಕೇರಳ, ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ ಹಾಗೂ ಅಂಡಮಾನ್, ನಿಕೋಬಾರ್ ದ್ವೀಪಗಳಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾರಾಂತ್ಯದಲ್ಲಿ ಟ್ರಿಪ್ ಹೋಗುವವರು ಜಾಗ್ರತೆ
ವಾರಾಂತ್ಯದಲ್ಲಿ ಟ್ರಿಪ್ ಹೋಗುವವರು ಸಾಧ್ಯವಾದರೆ ತಮ್ಮ ಟ್ರಿಪ್ಗಳನ್ನು ಮುಂದೂಡುವುದು ಒಳ್ಳೆಯದು, ಭಾರೀ ಮಳೆ ತುಂಬಾನೇ ಅಡ್ಡಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜನ ಜೀವನ ಅಸ್ತವ್ಯಸ್ಥವಾಗಬಹುದು. ಈ ಸಮಯದಲ್ಲಿ ಸಮುದ್ರದ ಬಳಿ ಹೋಗುವುದು ಅಥವಾ ನೀರಿನ ಅಪಾಯವಿರುವ ಸ್ಥಳಗಳಿಗೆ ಹೋಗದಿರುವುದು ಸುರಕ್ಷಿತ. ಮೀನುಗಾರರಿಗೆ ಮೀನು ಬೋಟುಗಳನ್ನು ಸಮುದ್ರಕ್ಕೆ ಇಳಿಸದಂತೆ ಸೂಚನೆ ನೀಡಲಾಗಿದೆ.
ಅಕಾಲಿಕ ಮಳೆಯಿಂದ ಬೆಳೆ ನಷ್ಟ
ಈಗ ಚಂಡಾಮಾರುತದಿಂದಾಗಿ ಮಳೆ ಬೀಳುತ್ತಿರುವುದರಿಂದ ಹಲವು ಕಡೆ ಬೆಳೆ ನಷ್ಟ ಉಂಟಾಗುತ್ತಿದೆ, ಇನ್ನು ಕೆಲವು ಕಡೆ ಭಾರೀ ದುರಂತವನ್ನೇ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡ ಜನರಿಗೆ ನೆರವಾಗಲು ಸಕಲ ಸಿದ್ಧತೆ ನಡೆಸಿದೆ.
ತಮಿಳುನಾಡಿನಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ, ಹಲವು ಕಡೆಯಿಂದ ಜನರನ್ನು ಸುರಕ್ಷಿತವಾಗಿ ಸಾಗಿಸಲಾಗಿದೆ, ಅಲ್ಲದೆ ನೀರಿನ ಪ್ರಮಾಣ ಹೆಚ್ಚಾದರೆ ಜನರ ರಕ್ಷಣೆಗೆ ಮೋಟಾರ್ ಪಂಪ್ಗಳು, ಜನರೇಟರ್, ದೋಣಿ, ಬೋಟು ಅಂತ ಸಿದ್ಧತೆಗಳನ್ನು ಮಾಡಲಾಗಿದೆ.
ಬೆಂಗಳೂರು, ಅದರ ಸುತ್ತ ಮುತ್ತಲಿನ ಪ್ರದೇಶದಲ್ಲಿ ಮೋಡ ಮುಸುಕಿದ ವಾತಾವರಣ
ಬೆಂಗಳೂರು ಹಾಗೂ ಸುತ್ತ ಮುತ್ತಲಿನ ಪ್ರದೇಶದದಲ್ಲಿ ಇನ್ನೂ 40 ಗಂಟೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ಉಷ್ಣಾಂಶ 18 ಡಿಗ್ರಿC ಇರುವುದರಿಂದ ಚಳಿಯೂ ಅಧಿಕವಿರಲಿದೆ, ಹಾಗಾಗಿ ಟ್ರಾವೆಲ್ ಮಾಡುವಾಗ ಹವಾಮಾನ ವರದಿ ಪರಿಶೀಲಿಸಿ ಹೋಗುವುದು ಸೂಕ್ತವಾಗಿದೆ.
ಡಿಸೆಂಬರ್ 2ರವರೆಗೆ ಭಾರೀ ಮಳೆಯ ಸಾಧ್ಯತೆ ಇದೆ
ಕೊಡಗು, ಚಿಕ್ಕಮಗಳೂರು, ಹಾಸನ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಂದು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೂ ಹಲವು ಕಡೆ ಮಳೆ ಬೀಳುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ರಾಮನಗರ, ಮಂಡ್ಯ, ತುಮಕೂರು ಈ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ, ಉತ್ತರ ಕರ್ನಾಟಕದ ಸಾಧಾರಣ ಮಳೆಯಾಗಲಿದೆ.



Click it and Unblock the Notifications