Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಚಂಡಮಾರುತ: ಡಿಸೆಂಬರ್ 1ರಿಂದ ಕರ್ನಾಟಕದ ಈ ಭಾಗಗಳಲ್ಲಿ ಡಿಸೆಂಬರ್ 3ರವರೆಗೆ ಭಾರೀ ಮಳೆ ಸಾಧ್ಯತೆ
ಚಳಿಗಾಲದಲ್ಲಿ ಬರುತ್ತಿರುವ ಅಕಾಲಿಕ ಮಳೆ ಭಾರೀ ನಷ್ಟವನ್ನು ಉಂಟು ಮಾಡುವ ಆತಂಕ ಉಂಟಾಗಿದೆ. ಕರ್ನಾಟಕ ಸೇರಿ ಏಳು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆ ಬೀಳುವ ಸೂಚನೆಯಿದೆ. ಫಂಗಲ್ ಸೈಕ್ಲೋನ್ನಿಂದಾಗಿ ಎಲ್ಲಡೆ ಮೋಡ ಮುಸಕಿದ ವಾತಾವರಣ ಇದೆ.
ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ
ತಮಿಳುನಾಡು, ಪುದುಚೇರಿ, ಕೇರಳ, ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ ಹಾಗೂ ಅಂಡಮಾನ್, ನಿಕೋಬಾರ್ ದ್ವೀಪಗಳಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾರಾಂತ್ಯದಲ್ಲಿ ಟ್ರಿಪ್ ಹೋಗುವವರು ಜಾಗ್ರತೆ
ವಾರಾಂತ್ಯದಲ್ಲಿ ಟ್ರಿಪ್ ಹೋಗುವವರು ಸಾಧ್ಯವಾದರೆ ತಮ್ಮ ಟ್ರಿಪ್ಗಳನ್ನು ಮುಂದೂಡುವುದು ಒಳ್ಳೆಯದು, ಭಾರೀ ಮಳೆ ತುಂಬಾನೇ ಅಡ್ಡಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜನ ಜೀವನ ಅಸ್ತವ್ಯಸ್ಥವಾಗಬಹುದು. ಈ ಸಮಯದಲ್ಲಿ ಸಮುದ್ರದ ಬಳಿ ಹೋಗುವುದು ಅಥವಾ ನೀರಿನ ಅಪಾಯವಿರುವ ಸ್ಥಳಗಳಿಗೆ ಹೋಗದಿರುವುದು ಸುರಕ್ಷಿತ. ಮೀನುಗಾರರಿಗೆ ಮೀನು ಬೋಟುಗಳನ್ನು ಸಮುದ್ರಕ್ಕೆ ಇಳಿಸದಂತೆ ಸೂಚನೆ ನೀಡಲಾಗಿದೆ.
ಅಕಾಲಿಕ ಮಳೆಯಿಂದ ಬೆಳೆ ನಷ್ಟ
ಈಗ ಚಂಡಾಮಾರುತದಿಂದಾಗಿ ಮಳೆ ಬೀಳುತ್ತಿರುವುದರಿಂದ ಹಲವು ಕಡೆ ಬೆಳೆ ನಷ್ಟ ಉಂಟಾಗುತ್ತಿದೆ, ಇನ್ನು ಕೆಲವು ಕಡೆ ಭಾರೀ ದುರಂತವನ್ನೇ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡ ಜನರಿಗೆ ನೆರವಾಗಲು ಸಕಲ ಸಿದ್ಧತೆ ನಡೆಸಿದೆ.
ತಮಿಳುನಾಡಿನಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ, ಹಲವು ಕಡೆಯಿಂದ ಜನರನ್ನು ಸುರಕ್ಷಿತವಾಗಿ ಸಾಗಿಸಲಾಗಿದೆ, ಅಲ್ಲದೆ ನೀರಿನ ಪ್ರಮಾಣ ಹೆಚ್ಚಾದರೆ ಜನರ ರಕ್ಷಣೆಗೆ ಮೋಟಾರ್ ಪಂಪ್ಗಳು, ಜನರೇಟರ್, ದೋಣಿ, ಬೋಟು ಅಂತ ಸಿದ್ಧತೆಗಳನ್ನು ಮಾಡಲಾಗಿದೆ.
ಬೆಂಗಳೂರು, ಅದರ ಸುತ್ತ ಮುತ್ತಲಿನ ಪ್ರದೇಶದಲ್ಲಿ ಮೋಡ ಮುಸುಕಿದ ವಾತಾವರಣ
ಬೆಂಗಳೂರು ಹಾಗೂ ಸುತ್ತ ಮುತ್ತಲಿನ ಪ್ರದೇಶದದಲ್ಲಿ ಇನ್ನೂ 40 ಗಂಟೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ಉಷ್ಣಾಂಶ 18 ಡಿಗ್ರಿC ಇರುವುದರಿಂದ ಚಳಿಯೂ ಅಧಿಕವಿರಲಿದೆ, ಹಾಗಾಗಿ ಟ್ರಾವೆಲ್ ಮಾಡುವಾಗ ಹವಾಮಾನ ವರದಿ ಪರಿಶೀಲಿಸಿ ಹೋಗುವುದು ಸೂಕ್ತವಾಗಿದೆ.
ಡಿಸೆಂಬರ್ 2ರವರೆಗೆ ಭಾರೀ ಮಳೆಯ ಸಾಧ್ಯತೆ ಇದೆ
ಕೊಡಗು, ಚಿಕ್ಕಮಗಳೂರು, ಹಾಸನ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಂದು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೂ ಹಲವು ಕಡೆ ಮಳೆ ಬೀಳುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ರಾಮನಗರ, ಮಂಡ್ಯ, ತುಮಕೂರು ಈ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ, ಉತ್ತರ ಕರ್ನಾಟಕದ ಸಾಧಾರಣ ಮಳೆಯಾಗಲಿದೆ.



Click it and Unblock the Notifications











