Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಅಬ್ಬರಿಸಲಿದೆ ಫೆಂಗಲ್ ಚಂಡಮಾರುತ..! ಫೆಂಗಲ್ ಅರ್ಥವೇನು? ಹೆಸರು ಇಡುವುದು ಯಾರು?
ಹವಾಮಾನ ಬದಲಾಗುತ್ತಿದೆ. ಹಾಗೆ ಒಂದಲ್ಲಾ ಒಂದು ಚಂಡಮಾರುತಗಳು ಈಗ ಕಾಣಿಸಿಕೊಳ್ಳಲು ಆರಂಭಿಸಿದೆ. ಈಗ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರೂಪಗೊಂಡ ಫೆಂಗಲ್ ಚಂಡಮಾರುತ ಕರ್ನಾಟಕದತ್ತ ಆಗಮಿಸುತ್ತಿದೆ. ಫೆಂಗಲ್ ಚಂಡಮಾರುತ ಸಮೀಪಿಸುತ್ತಿರುವಂತೆಯೇ ತಮಿಳುನಾಡು ಹಾಗೂ ಪುದುಚೆರಿಯ ಹಲವು ಕಡೆ ರೆಡ್ ಅಲರ್ಟ್ ಘೋಷಣೆಯಾಗಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ವಾಯುಬಾರ ಕುಸಿತದ ಪರಿಣಾಮವಾಗಿ ಈ ಫೆಂಗಲ್ ಚಂಡಮಾರುತ ಸೃಷ್ಟಿಯಾಗಿದೆ. ಹಾಗೆ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ನಿರೀಕ್ಷೆ ಕೂಡ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಚಂಡಮಾರುತದ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಉತ್ತರಕ್ಕೆ ಗಂಟೆಗೆ 10 ಕಿ.ಮೀ ವೇಗದಲ್ಲಿ ಈ ಚಂಡಮಾರುತ ಚಲಿಸುತ್ತಿದೆ.

ಚೆನ್ನೈ ಸೇರಿ ಅಲ್ಲಿನ ಹಲವು ಕಡೆಗಳಲ್ಲಿ ಮಂಗಳವಾರದಿಂದ ಮಳೆಯಾಗುತ್ತಿದೆ. ಈ ಪ್ರಮಾಣ ಮುಂದುವರೆದರೆ ತಮಿಳುನಾಡಿನ ಕರಾವಳಿ ಹಾಗೂ ದಕ್ಷಣ ಭಾಗದಲ್ಲಿ ಅತ್ಯಧಿಕ ಹಾನಿ ಸಂಭವಿಸಲಿದೆ ಎಂದು ಅಂದಾಜಿಸಲಾಗಿದೆ. ಗುರುವಾರ ನವೆಂಬರ್ 28 ರವರೆಗೆ ವಿವಿಧ ಕಡೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 29ರ ವರೆಗೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಹಾಗೆ ಹಲವು ಕಡೆಗಳಲ್ಲಿ ಶಢಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿತ್ತು, ತೀರ ಪ್ರದೇಶದ ಜನರನ್ನು ಸ್ಥಳಾಂತರ ಮಾಡಲಾಗಿದೆ. ಇನ್ನು ಸಮುದ್ರ ತೀರದಲ್ಲಿನ ಪ್ರವಾಸಿ ತಾಣಗಳನ್ನ ಮುಂದಿನ ಆದೇಶದ ವರೆಗೂ ಮುಚ್ಚಲಾಗಿದೆ.
ಇನ್ನು ಕರ್ನಾಟಕದಲ್ಲೂ ಮುಂದಿನ ನಾಲ್ಕೈದು ದಿನ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರು ಸೇರಿದಂತೆ ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹಾಗೆ ಮೈಸೂರು, ಚಾಮರಾಜನಗರ, ಧಾರವಾಡ, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ. ಹಾಗೆ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದ್ದು ಹೈ ಅಲರ್ಟ್ ಘೋಷಿಸಲಾಗಿದೆ.
ಫೆಂಗಲ್ ಚಂಡಮಾರುತ ಎಂದು ಹೆಸರು ಕೊಟ್ಟಿದ್ಯಾರು?
ವಿಶ್ವ ಹವಾಮಾನ ಸಂಸ್ಥೆ (WMO) ಮತ್ತು ಏಷ್ಯಾ ಮತ್ತು ಪೆಸಿಫಿಕ್ಗಾಗಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಆಯೋಗ (UNESCAP) ಮೇಲ್ವಿಚಾರಣೆಯ ವ್ಯವಸ್ಥಿತ ಕಾರ್ಯವಿಧಾನದ ಭಾಗವಾಗಿ ಈ ಚಂಡಮಾರುತಕ್ಕೆ ಫೆಂಗಲ್ ಚಂಡಮಾರುತ ಎಂಬ ಹೆಸರು ಬಂದಿದೆ. ಈ ಸಂಸ್ಥೆಗಳು ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಓಮನ್ನಂತಹ ದೇಶಗಳನ್ನು ಒಳಗೊಂಡಿರುವ ಹಿಂದೂ ಮಹಾಸಾಗರದ ಪ್ರದೇಶದಲ್ಲಿ ಉಂಟಾಗುವಂತಹ ಸೈಕ್ಲೋನ್ಗಳಿಗೆ ಹೆಸರು ಇಡುವ ಕಾರ್ಯ ಮಾಡಲಿದೆ.
'ಫೆಂಗಲ್' ಎಂದರೆ ಬಲವಾದ ಗಾಳಿ ಎಂಬ ಅರ್ಥ ನೀಡುತ್ತದೆ. ಈ ಹೆಸರುಗಳನ್ನು ಪ್ರಾದೇಶಿಕ ಲಕ್ಷಣಗಳು, ಭಾಷೆ, ಸೈಕ್ಲೋನ್ನಿಂದ ಪ್ರಭಾವಕ್ಕೆ ಒಳಗಾಗುವ ದೇಶದ ಸಂಬಂಧಿಸಿದಂತೆ ಇಡಲಾಗುತ್ತದೆ. ಉಚ್ಚರಿಸಲು ಸುಲಭವಾಗುವಂತೆ ಹಾಗೂ ಸರಳವಾಗಿ ಗುರುತಿಸುವಂತೆ ಈ ಹೆಸರನ್ನೂ ಸೂಚಿಸಲಾಗುತ್ತದೆ. ಫೆಂಗಲ್ ಅಂದರೆ ಅರೇಬಿಕ್ನಲ್ಲಿ ಅಸಡ್ಡೆ ಎಂಬ ಅರ್ಥವೂ ಇದೆ. ಹಿಂದೆ ಚಂಡಮಾರುತಕ್ಕೆ ಹೆಸರು ಸೂಚಿಸುವ ಪರಿಪಾಠವಿರಲಿಲ್ಲ. ಒಂದೊಂದು ದೇಶ ಅಥವಾ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ಹೆಸರಿನಿಂದ ಕರೆಯಲಾಗುತ್ತಿತ್ತು. ಇದು ದೊಡ್ಡ ಗೊಂದಲಕ್ಕೆ ಕಾರಣವಾಗುತ್ತಿತ್ತು. ಹೀಗಾಗಿ ಈ ಹೆಸರನ್ನು ಸೂಚಿಸಲೆಂದೇ ವಿಶ್ವ ಆರೋಗ್ಯ ಸಂಸ್ಥೆ ಏಷ್ಯಾ ಮತ್ತು ಪೆಸಿಫಿಕ್ಗಾಗಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಆಯೋಗವನ್ನು ಕಟ್ಟಿತ್ತು.



Click it and Unblock the Notifications