Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಬ್ಬರಿಸಲಿದೆ ಫೆಂಗಲ್ ಚಂಡಮಾರುತ..! ಫೆಂಗಲ್ ಅರ್ಥವೇನು? ಹೆಸರು ಇಡುವುದು ಯಾರು?
ಹವಾಮಾನ ಬದಲಾಗುತ್ತಿದೆ. ಹಾಗೆ ಒಂದಲ್ಲಾ ಒಂದು ಚಂಡಮಾರುತಗಳು ಈಗ ಕಾಣಿಸಿಕೊಳ್ಳಲು ಆರಂಭಿಸಿದೆ. ಈಗ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರೂಪಗೊಂಡ ಫೆಂಗಲ್ ಚಂಡಮಾರುತ ಕರ್ನಾಟಕದತ್ತ ಆಗಮಿಸುತ್ತಿದೆ. ಫೆಂಗಲ್ ಚಂಡಮಾರುತ ಸಮೀಪಿಸುತ್ತಿರುವಂತೆಯೇ ತಮಿಳುನಾಡು ಹಾಗೂ ಪುದುಚೆರಿಯ ಹಲವು ಕಡೆ ರೆಡ್ ಅಲರ್ಟ್ ಘೋಷಣೆಯಾಗಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ವಾಯುಬಾರ ಕುಸಿತದ ಪರಿಣಾಮವಾಗಿ ಈ ಫೆಂಗಲ್ ಚಂಡಮಾರುತ ಸೃಷ್ಟಿಯಾಗಿದೆ. ಹಾಗೆ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ನಿರೀಕ್ಷೆ ಕೂಡ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಚಂಡಮಾರುತದ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಉತ್ತರಕ್ಕೆ ಗಂಟೆಗೆ 10 ಕಿ.ಮೀ ವೇಗದಲ್ಲಿ ಈ ಚಂಡಮಾರುತ ಚಲಿಸುತ್ತಿದೆ.

ಚೆನ್ನೈ ಸೇರಿ ಅಲ್ಲಿನ ಹಲವು ಕಡೆಗಳಲ್ಲಿ ಮಂಗಳವಾರದಿಂದ ಮಳೆಯಾಗುತ್ತಿದೆ. ಈ ಪ್ರಮಾಣ ಮುಂದುವರೆದರೆ ತಮಿಳುನಾಡಿನ ಕರಾವಳಿ ಹಾಗೂ ದಕ್ಷಣ ಭಾಗದಲ್ಲಿ ಅತ್ಯಧಿಕ ಹಾನಿ ಸಂಭವಿಸಲಿದೆ ಎಂದು ಅಂದಾಜಿಸಲಾಗಿದೆ. ಗುರುವಾರ ನವೆಂಬರ್ 28 ರವರೆಗೆ ವಿವಿಧ ಕಡೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 29ರ ವರೆಗೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಹಾಗೆ ಹಲವು ಕಡೆಗಳಲ್ಲಿ ಶಢಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿತ್ತು, ತೀರ ಪ್ರದೇಶದ ಜನರನ್ನು ಸ್ಥಳಾಂತರ ಮಾಡಲಾಗಿದೆ. ಇನ್ನು ಸಮುದ್ರ ತೀರದಲ್ಲಿನ ಪ್ರವಾಸಿ ತಾಣಗಳನ್ನ ಮುಂದಿನ ಆದೇಶದ ವರೆಗೂ ಮುಚ್ಚಲಾಗಿದೆ.
ಇನ್ನು ಕರ್ನಾಟಕದಲ್ಲೂ ಮುಂದಿನ ನಾಲ್ಕೈದು ದಿನ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರು ಸೇರಿದಂತೆ ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹಾಗೆ ಮೈಸೂರು, ಚಾಮರಾಜನಗರ, ಧಾರವಾಡ, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ. ಹಾಗೆ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದ್ದು ಹೈ ಅಲರ್ಟ್ ಘೋಷಿಸಲಾಗಿದೆ.
ಫೆಂಗಲ್ ಚಂಡಮಾರುತ ಎಂದು ಹೆಸರು ಕೊಟ್ಟಿದ್ಯಾರು?
ವಿಶ್ವ ಹವಾಮಾನ ಸಂಸ್ಥೆ (WMO) ಮತ್ತು ಏಷ್ಯಾ ಮತ್ತು ಪೆಸಿಫಿಕ್ಗಾಗಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಆಯೋಗ (UNESCAP) ಮೇಲ್ವಿಚಾರಣೆಯ ವ್ಯವಸ್ಥಿತ ಕಾರ್ಯವಿಧಾನದ ಭಾಗವಾಗಿ ಈ ಚಂಡಮಾರುತಕ್ಕೆ ಫೆಂಗಲ್ ಚಂಡಮಾರುತ ಎಂಬ ಹೆಸರು ಬಂದಿದೆ. ಈ ಸಂಸ್ಥೆಗಳು ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಓಮನ್ನಂತಹ ದೇಶಗಳನ್ನು ಒಳಗೊಂಡಿರುವ ಹಿಂದೂ ಮಹಾಸಾಗರದ ಪ್ರದೇಶದಲ್ಲಿ ಉಂಟಾಗುವಂತಹ ಸೈಕ್ಲೋನ್ಗಳಿಗೆ ಹೆಸರು ಇಡುವ ಕಾರ್ಯ ಮಾಡಲಿದೆ.
'ಫೆಂಗಲ್' ಎಂದರೆ ಬಲವಾದ ಗಾಳಿ ಎಂಬ ಅರ್ಥ ನೀಡುತ್ತದೆ. ಈ ಹೆಸರುಗಳನ್ನು ಪ್ರಾದೇಶಿಕ ಲಕ್ಷಣಗಳು, ಭಾಷೆ, ಸೈಕ್ಲೋನ್ನಿಂದ ಪ್ರಭಾವಕ್ಕೆ ಒಳಗಾಗುವ ದೇಶದ ಸಂಬಂಧಿಸಿದಂತೆ ಇಡಲಾಗುತ್ತದೆ. ಉಚ್ಚರಿಸಲು ಸುಲಭವಾಗುವಂತೆ ಹಾಗೂ ಸರಳವಾಗಿ ಗುರುತಿಸುವಂತೆ ಈ ಹೆಸರನ್ನೂ ಸೂಚಿಸಲಾಗುತ್ತದೆ. ಫೆಂಗಲ್ ಅಂದರೆ ಅರೇಬಿಕ್ನಲ್ಲಿ ಅಸಡ್ಡೆ ಎಂಬ ಅರ್ಥವೂ ಇದೆ. ಹಿಂದೆ ಚಂಡಮಾರುತಕ್ಕೆ ಹೆಸರು ಸೂಚಿಸುವ ಪರಿಪಾಠವಿರಲಿಲ್ಲ. ಒಂದೊಂದು ದೇಶ ಅಥವಾ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ಹೆಸರಿನಿಂದ ಕರೆಯಲಾಗುತ್ತಿತ್ತು. ಇದು ದೊಡ್ಡ ಗೊಂದಲಕ್ಕೆ ಕಾರಣವಾಗುತ್ತಿತ್ತು. ಹೀಗಾಗಿ ಈ ಹೆಸರನ್ನು ಸೂಚಿಸಲೆಂದೇ ವಿಶ್ವ ಆರೋಗ್ಯ ಸಂಸ್ಥೆ ಏಷ್ಯಾ ಮತ್ತು ಪೆಸಿಫಿಕ್ಗಾಗಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಆಯೋಗವನ್ನು ಕಟ್ಟಿತ್ತು.



Click it and Unblock the Notifications