Latest Updates
-
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ
ಹಣ ವಸೂಲಿಗೆ ಅಪಹರಣದ ನಾಟಕ...! ತಂದೆ ಬಳಿಯೇ ₹30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಮಗಳು.!
ಜನ ಈಗ ಹಣ ಮಾಡಲು ಯಾವೆಲ್ಲಾ ಕೆಲಸಕ್ಕೆ ಕೈ ಹಾಕ್ತಾರೆ ಅಂದ್ರೆ ಅದು ಬೇರೆಯವರ ಹೆದರಿಸಿ ಬೆದರಿಸಿ ಅಷ್ಟೇ ಅಲ್ಲ ಕೊಲೆಯನ್ನು ಮಾಡುತ್ತಾರೆ. ಇದಲ್ಲದೆ ಹಣಕ್ಕಾಗಿ ಯಾರನ್ನಾದರು ಅಪಹರಣ ಮಾಡಿ ಅವರ ಕುಟುಂಬಸ್ಥರಿಂದ ಹಣಕ್ಕೆ ಬೇಡಿಕೆ ಇಡುತ್ತಾರೆ. ಇಂತಹ ಸಾವಿರಾರು ಪ್ರಕರಣವನ್ನು ನಾವು ಕೇಳಿರುತ್ತೇವೆ.
ಆದರೆ ಇಲ್ಲೊಂದು ಪ್ರಕರಣ ನಿಮಗೆ ಅಚ್ಚರಿ ಹುಟ್ಟಿಸುತ್ತೆ. ಇಲ್ಲಿ ಮಗಳೇ ತಾನು ಅಪಹರಣ ಆದಂತೆ ನಾಟಕ ಆಡಿ ತಂದೆ ಬಳಿ ಹಣ ವಸೂಲಿಗೆ ನಿಂತ ಕಥೆ ಇದು. ಹೌದು ನಿಮಗೆ ಅಚ್ಚರಿಯಾಗಬಹುದು. ಆಕೆ ತನ್ನ ಕಿಡ್ನಾಪ್ ಕುರಿತು ಕಥೆ ಕಟ್ಟಿ ತಂದೆಯ ಬಳಿಯೇ ಬರೋಬ್ಬರಿ 30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಳು.

ಮಧ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಓದುಗರಲ್ಲಿ ಅಚ್ಚರಿಗೆ ಕಾರಣವಾಗಿದೆ. ಹಾಗಾದ್ರೆ ಆಕೆ ಈ ರೀತಿ ಅಪಹರಣದ ನಾಟಕ ಮಾಡಿದ್ದೇಕೆ? ಕೊನೆ ಸಿಕ್ಕಿಬಿದ್ದಿದ್ದು ಹೇಗೆ ಎಂಬುದನ್ನು ನೋಡಿ.
ಇಂದೋರ್ನ 21 ವರ್ಷದ ಯುವತಿ ತಾನು ವಿದೇಶಿ ಪ್ರವಾಸ ಕೈಗೊಳ್ಳಬೇಕೆಂಬದು ಆಕೆಯ ಆಸೆಯಾಗಿತ್ತಂತೆ. ಇದನ್ನು ತಂದೆ ಬಳಿ ಹಲವಾರು ಬಾರಿ ಪ್ರಸ್ತಾಒ ಮಾಡಿದ್ದಾಳೆ. ಆದ್ರೆ ತಂದೆ ಅಷ್ಟೊಂದು ಹಣವಿಲ್ಲ ಎಂದು ಆಕೆಗೆ ಹೇಳುತ್ತಿದ್ದರಂತೆ. ಆದ್ರೆ ಆಕೆಯ ವಿದೇಶ ಪ್ರವಾಸದ ಆಸೆ ಮಾತ್ರ ಹಾಗೆಯೇ ಉಳಿದುಬಿಟ್ಟಿತ್ತು.
ಸ್ನೇಹಿತರೊಂದಿಗೆ ಸೇರಿ ಮಾಡಿದ್ಲು ಕಿಡ್ನಾಪ್ ಪ್ಲಾನ್
ಆಕೆ ರಾಜಸ್ಥಾನದ ಕೋಟಾದಲ್ಲಿ ಕೋಚಿಂಗ್ ಕ್ಲಾಸ್ಗೆ ಹಾಜರಾಗುವುದಾಗಿ ಮನೆಯಲ್ಲಿ ಹೇಳಿ ಹೊರಟಿದ್ದಾಳೆ. ಕೋಟಾದಲ್ಲಿ ಹಾಸ್ಟೆಲ್ ರೂಮ್ ಮಾಡಿ ಉಳಿದುಕೊಂಡು ಮೂರು ದಿನದ ಕೋಚಿಂಗ್ ಕ್ಲಾಸ್ಗೆ ಹಾಜರಾಗಿದ್ದಾಳೆ. ಆದರೆ ಇಲ್ಲಿಯೇ ತನ್ನ ಅಪಹರಣದ ಪ್ಲಾನ್ ಮಾಡಿದ್ದಾಳೆ. ತನ್ನನ್ನು ಹಗ್ಗದಿಂದ ಕಟ್ಟಿಹಾಕಿದಂತೆ ಫೋಟೋ ತೆಗೆದು ತನ್ನದೇ ಮೊಬೈಲ್ನಿಂದ ತಂದೆಗೆ ಕಳುಹಿಸಿ 30 ಲಕ್ಷ ನೀಡಿದರೆ ಮಗಳನ್ನು ಬಿಡುವುದಾಗಿ ಸಂದೇಶ ಕಳುಹಿಸಿದ್ದಾಳೆ. ಇದಕ್ಕೆ ಆಕೆಯ ಇಬ್ಬರು ಸ್ನೇಹಿತರು ಸಾಥ್ ನೀಡಿದ್ದಾರೆ. ಆಕೆಯನ್ನು ಯಾವುದೋ ಮೂಲೆಯಲ್ಲಿ ಇಟ್ಟು ಬಾಯಿ, ಕೈ, ಕಾಲು ಕಟ್ಟಿ ಹಾಕಿದಂತೆ ತೋರಿಸಲಾಗಿದೆ. ಈ ಫೋಟೋವನ್ನು ತಂದೆಗೆ ಕಳುಹಿಸಿ ಹಣ ಕೇಳಲಾಗಿದೆ. ಈ ಫೋಟೋ ಬಳಿಕ ಎಲ್ಲಾ ಸಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿದೆ.
ಪೊಲೀಸರಿಗೆ ದೂರು ನೀಡಿದ ತಂದೆ
ಈ ಸಂದೇಶ ಬಂದೋಡನೆ ಭಯದಿಂದ ಪೊಲೀಸ್ ಠಾನೆಣೆ ಓಡಿದ ತಂದೆ ಅಪಹರಣದ ಕೇಸ್ ದಾಖಲಿಸಿದ್ದಾರೆ. ಆದರೆ ಆಕೆ ಎಲ್ಲಿದ್ದಾಳೆ. ಯಾವ ಸ್ಥಳದಿಂದ ಈ ಸಂದೇಶ ಬಂದಿದೆ ಎಂಬುದನ್ನು ಪತ್ತೆ ಮಾಡಲು ಕೋಟಾ ಪೊಲೀಸರ ಸಹಾಯ ಕೇಳಲಾಗಿದೆ. ಬಳಿಕ ಆಕೆಯ ಕೊನೆಯ ನೆಟ್ವರ್ಕಿಂಗ್ ಯಾವ ಟವರ್ನಿಂದ ಬಂದಿದೆ ಎಂದು ಪತ್ತೆ ಮಾಡಿ ಸ್ಥಳ ಹುಡುಕಾಟಕ್ಕೆ ಮುಂದಾಗಲಾಗಿದೆ. ಇಷ್ಟು ಹೊತ್ತಿಗಾಗಲೇ ಈ ಪ್ರಕರಣ ಕೇಂದ್ರ ಸಚಿವರ ಬಳಿಯೂ ಹೋಗಿದೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಧ್ಯಪ್ರವೇಶಿಸಿ, ಯುವತಿಯನ್ನು ಸುರಕ್ಷಿತವಾಗಿ ವಾಪಾಸು ಕರೆತರಲಾಗುವುದು ಎಂದು ತಿಳಿಸಿದ್ದರು. ಜೊತೆಗೆ ಈ ಸುದ್ದಿ ವ್ಯಾಪಕವಾಗಿ ಹರಡತೊಡಗಿತ್ತು. ಆದರೆ ಯುವತಿ ಎಲ್ಲಿಯೂ ಹೋಗದೆ ತನ್ನ ಸ್ನೇಹಿತರೊಂದಿಗೆ ಇಂದೋರ್ಗೆ ಹೋಗಿ ಅವರ ಜೊತೆ ನೆಲೆಸಿದ್ದಳು.
ಆಕೆಯ ಮೊಬೈಲ್ ನೆಟ್ವರ್ಕ್ ಟ್ರೇಸ್ ಮಾಡಿದ ಪೊಲೀಸರು ಕೊನೆಗೂ ಆಕೆಯನ್ನು ಪತ್ತೆ ಮಾಡಿದರು. ಆಕೆಯ ಸ್ನೇಹಿತನೊಬ್ಬ ವಿದೇಶಕ್ಕೆ ತೆರಳಲು ಸಿದ್ಧತೆ ನಡೆಸಿದ್ದ ಆತನ ಜೊತೆ ವಿದೇಶಕ್ಕೆ ತೆರಳಲೆಂದು ಈ ಪ್ಲಾನ್ ಮಾಡಲಾಗಿತ್ತು ಎಂದು ಯುವತಿ ಕಾವ್ಯ ಹೇಳಿಕೊಂಡಿದ್ದಾಳೆ.



Click it and Unblock the Notifications