Latest Updates
-
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ!
29 ವರ್ಷದಿಂದ 3 ಹೊತ್ತು ಉಚಿತ ಊಟ ನೀಡುವ ಏಕೈಕ ರೈಲಿದು..! ಯಾವ ಮಾರ್ಗ ಗೊತ್ತಾ?
ಭಾರತೀಯ ರೈಲ್ವೆ ಇಂದು ಬಹಳ ವೇಗವಾಗಿ ಬೆಳೆಯುತ್ತಿರುವ ವಲಯವಾಗಿ. ವಿಶ್ವದ ಅತ್ಯಂತ ದೊಡ್ಡ ನೌಕರರ ಹೊಂದಿರುವ ಹಾಗೆ ದೊಡ್ಡ ಸಂಪರ್ಕ ಜಾಲ ಹೊಂದಿರುವ ರೈಲ್ವೆ ಎಂವ ಹೆಗ್ಗಳಿಕೆ ಕೂಡ ಪಡೆದುಕೊಂಡಿದೆ. ಈಗ ವಂದೇ ಭಾರತ್, ಬುಲೆಟ್ ಟ್ರೈನ್, ಹೈಪರ್ ಲೂಪ್ ಸೇರಿದಂತೆ ಹೈ ಸ್ಪೀಡ್ ರೈಲಿನಂತರ ಹೊಸ ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳುತ್ತಿದೆ.
ಭಾರತೀಯ ರೈಲ್ವೆ ಹಲವು ವಿಚಾರಗಳಿಗೆ ಈಗ ಸುದ್ದಿಯಾಗುತ್ತಿದೆ. ಇತ್ತೀಚಿಗೆ ರೈಲ್ವೆಯಲ್ಲಿ ನೀಡಲಾಗುತ್ತಿರುವ ಆಹಾರ ಹಾಗೆ ರೈಲಿನಲ್ಲಿ ಸೀಟು ಸಿಗದೆ ಇರುವುದು ಸೇರಿ ಹಲವು ರೀತಿಯ ಸಮಸ್ಯೆಗಳಿಂದ ತುಂಬಿದ ಘಟನೆಗಳು ವರದಿಯಾಗುತ್ತಿವೆ. ಭಾರತದ ರೈಲ್ವೆ ಮೇಲ್ದರ್ಜೆಗೆ ಏರಿಸಿದ್ದರು ಕೂಡ ಅದರಿಂದ ಯಾವುದೇ ಪ್ರಯೋಜವಾಗದಿರುವುದು ಹಾಗೆ ಕೆಲವು ಕಡೆ ರೈಲು ಸಂಪರ್ಕ ಇಲ್ಲದಿರುವುದು ಸಹ ನೋಡಬಹುದು.

ಇನ್ನೊಂದು ಕಡೆ ರೈಲ್ವೆ ಜನರ ನಿತ್ಯದ ಬದುಕಿನಲ್ಲಿ ಹಾಸು ಹೊಕ್ಕಾಗಿರುವುದು. ಕಡಿಮೆ ದರದಲ್ಲಿ ಒಂದುಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣಿಸುವುದು. ಹಾಗೆ ಲಕ್ಷಾಂತರ ಮಂದಿಗೆ ಉದ್ಯೋಗ ಕಲ್ಪಿಸಿರುವ ಒಂದು ವಲಯವಾಗಿಯೂ ರೈಲ್ವೆ ಕಾಣಿಸಿಕೊಂಡಿದೆ. ಹಾಗೆ ಈಗ ಭಾರತೀಯ ರೈಲ್ವೆಯು ಪ್ರತಿ ದಿನ ಸುಮಾರು 2.5 ಕೋಟಿ ಪ್ರಯಾಣಿರನ್ನು ಹೊತ್ತು ಸಾಗಲಿದೆ. ಇದು ವಿಶ್ವದ ಯಾವುದೇ ರೈಲ್ವೆ ನೀವು ಹೋಲಿಸಿದರೂ ಇದು ಹೆಚ್ಚು.
ಭಾರತದಲ್ಲಿ ಈಗ 13,452 ರೈಲುಗಳು ಚಲಿಸುತ್ತಿವೆ ಎಂದು ತಿಳಿದುಬಂದಿದೆ. ಆದ್ರೆ ಇಷ್ಟು ರೈಲುಗಳಲ್ಲಿ ಕೇವಲ ಒಂದು ರೈಲು ಮಾತ್ರವೇ ಈಗ ವಿಶೇಷ ರೈಲು ಎನಿಸಿದೆ. ಹೌದು ಈ ರೈಲು ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ, ಹಾಗೆ ರಾತ್ರಿ ಊಟವನ್ನು ಉಚಿತವಾಗಿ ನೀಡುತ್ತಿದೆ. ಅದರಲ್ಲೂ ಎಲ್ಲಾ ಪ್ರಯಾಣಿಕರಿಗೂ ಇದು ಉಚಿತ ಎಂಬುದು ನಿಮಗೆ ಗೊತ್ತಾ?
ಸಚ್ಖಂಡ್ ಎಕ್ಸ್ಪ್ರೆಸ್ (12715) ಎಂಬ ಹೆಸರಿನ ರೈಲು ಪ್ರತಿ ದಿನವು ಈ ರೀತಿ ಉಚಿತ ಊಟ, ಉಪಹಾರ ನೀಡುತ್ತದೆ. ಇದು ಮಹಾರಾಷ್ಟ್ರದ ನಾಂದೇಡ್ ಮತ್ತು ಪಂಜಾಬ್ನ ಅಮೃತಸರದ ನಡುವೆ ಕಾರ್ಯ ನಿರ್ವಹಿಸುತ್ತದೆ. ನಾಂದೇಡ್ ಹಾಗೂ ಈ ಪಂಜಾಬ್ನ ಅಮೃತಸರ ಸಿಖ್ಖರ ಪವಿತ್ರ ಭೂಮಿಯಾಗಿದೆ. ಹೀಗಾಗೀ ಈ ರೈಲಿನಲ್ಲಿ ನಿತ್ಯ ಸಾವಿರಾರು ಮಂದಿ ಈ ಪವಿತ್ರ ಸ್ಥಳಗಳಿಗೆ ಭೇಟಿ ನೀಡುವುದು ನೋಡಬಹುದು. ಹೀಗಾಗಿ ಈ ರೈಲಿನಲ್ಲಿ ಉಚಿತ ಊಟ ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗುತ್ತದೆ.
ಸಚ್ಖಂಡ್ ಎಕ್ಸ್ಪ್ರೆಸ್ ಅಮೃತಸರದ ಶ್ರೀ ಹರ್ಮಂದರ್ ಸಾಹಿಬ್ ಗುರುದ್ವಾರದಿಂದ ನಾಂದೇಡ್ನಲ್ಲಿರುವ ಶ್ರೀ ಹಜೂರ್ ಸಾಹಿಬ್ ಗುರುದ್ವಾರಕ್ಕೆ ಚಲಿಸುತ್ತದೆ. ಕಳೆದ 29 ವರ್ಷಗಳಿಂದ ಈ ರೈಲು ತನ್ನ ಪ್ರಯಾಣಿಕರಿಗೆ ಉಚಿತ ಆಹಾರವನ್ನು ನೀಡುತ್ತಾ ಬಂದಿದೆ. ಈ ಎರಡು ಪವಿತ್ರ ಸ್ಥಳಗಳ ನಡುವೆ ಸುಮಾರು 2 ಸಾವಿರ ಕಿ.ಮೀ ಅಂತರವಿದೆ. ಹಾಗೆ ಬರೋಬ್ಬರಿ 39 ನಿಲ್ದಾಣಗಳನ್ನು ದಾಟಲಿದೆ. ಇಂತಹ ಪ್ರಮುಖ ನಿಲ್ದಾಣಗಳಲ್ಲಿಯೂ ಈ ರೈಲು ಪ್ರಯಾಣಿಕರಿಗೆ ಸಾಮೂಹಿಕ ಊಟದ ವ್ಯವಸ್ಥೆ ಮಾಡುವುದು ಇದರ ಇನ್ನೊಂದು ವಿಶೇಷ ಎನ್ನಬಹುದು. ಹಾಗೆ ಈ ರೈಲು ಪ್ರಯಾಣವು ಸುಮಾರು 33 ಗಂಟೆ ತೆಗೆದುಕೊಳ್ಳಲಿದೆ.
ಸಾಮಾನ್ಯವಾಗಿ ಈ ರೈಲಿನಲ್ಲಿ ಅನ್ನ, ಚಪಾತಿ, ಚೋಲೆ, ದಾಲ್ ಖಿಚಡಿ, ಆಲೂಗಡ್ಡೆಯಿಂದ ಮಾಡಲಾದ ಹಲವು ಖಾದ್ಯಗಳ ನೋಡಬಹುದು. ಹಾಗೆ ಈ ರೈಲು ಪ್ರಯಾಣಿಕರು ತಮ್ಮದೇ ತಟ್ಟೆ ಹಾಗೂ ಲೋಟಗಳನ್ನು ಪ್ರಯಾಣದ ಸಮಯದಲ್ಲಿ ಬಳಸುವಂತೆ ಹೇಳಲಾಗುತ್ತದೆ. ಹೀಗಾಗಿ ಪರಿಸರ ಸ್ನೇಹಿಯಾಗಿಯೂ ಗುರುತಿಸಿಕೊಂಡಿದೆ. ಇಂತಹ ಹಲವು ವಿಶೇಷತೆಗಳನ್ನು ಭಾರತೀಯ ರೈಲ್ವೆ ತನ್ನ ಬಳಿ ಇಟ್ಟುಕೊಂಡಿದೆ.



Click it and Unblock the Notifications