Latest Updates
-
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ!
ಹುಟ್ಟುಹಬ್ಬಕ್ಕೆ ಡಿಕೆಶಿ ಹೈಕಮಾಂಡ್ನಿಂದ ನಿರೀಕ್ಷಿಸುತ್ತಿದ್ದಾರೆ ಈ ಗಿಫ್ಟ್
ಕೆಪಿಸಿಎಸ್ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರಿಗೆ ಈ ಬಾರಿಯ ಜನ್ಮ ದಿನ ಸ್ಪೆಷಲ್ ಆಗಿದೆ. ಇನ್ನುಈ ಬರ್ತ್ಡೇ ಮತ್ತಷ್ಟು ಸ್ಪೆಷಲ್ ಆಗುವುದೇ ಎಂಬುವುದು ಇನ್ನಷ್ಟೇ ಕಾದು ನೋಡಬೇಕಾಗಿದೆ. ಡಿ. ಕೆ ಶಿವಕುಮಾರ್ ತಮ್ಮ ಹುಟ್ಟುಹಬ್ಬಕ್ಕೆ ಹೈ ಕಮಾಂಡ್ ಭರ್ಜರಿ ಉಡುಗೊರೆ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿಯೂ ಇದ್ದಾರೆ.
ಕರ್ನಾಟಕ ಚುನಾವಣೆ 2023ರಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಭರ್ಜರಿ ಬಹುಮತ ಗಳಿಸಿದರೂ ಕಾಂಗ್ರೆಸ್ ಪಕ್ಷದಿಂದ ಸಿ. ಎಂ ಗದ್ದುಗೆ ಯಾರು ಏರುತ್ತಾರೆ ಎಂಬುವುದೇ ಒಗಟಿನ ಪ್ರಶ್ನೆಯಾಗಿದೆ. ಏಕೆಂದರೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದು ನನ್ನ ಕೊನೆಯ ಚುನಾವಣೆ ಸಿ, ಎಂ ಕುರ್ಚಿ ನನಗೆ ಕೊಡಿ ಎಂದು ಕೇಳಿದರೆ, ಡಿ. ಕೆ ಶಿವಕುಮಾರ್ ಅವರು ಇಲ್ಲಾ... ಇಲ್ಲಾ ಕಳೆದ ಸಾಲಿನಲ್ಲಿ ನಾನು ಪಕ್ಷಕ್ಕಾಗಿ ಬಿಟ್ಟುಕೊಟ್ಟೆ, ಪಕ್ಷದ ತೀರ್ಮಾನಕ್ಕೆ ತಲೆಬಾಗಿದೆ, ಆದರೆ ಈ ಬಾರಿ ಸಿ. ಎಂ ಕುರ್ಚಿ ನನಗೆ ಕೊಡಿ ಎಂದು ಕೇಳುತ್ತಿದ್ದಾರೆ.

ಅಡಿಕೆ ಕತ್ತರಿಯಲ್ಲಿ ಸಿಲುಕಿರುವ ಕಾಂಗ್ರೆಸ್ ಹೈ ಕಮಾಂಡ್
ಇತ್ತ ಡಿಕೆ ಶಿವ ಕುಮಾರ್ಗೆ ಸಿ ಎಂ ಪದವಿ ಕೊಡಲು ಸಾಧ್ಯವಾಗುತ್ತಿಲ್ಲ, ಇತ್ತ ಸಿದ್ಧರಾಮಯ್ಯ ಅವರಿಗೂ ಸಿ ಎಂ ಕುರ್ಚಿ ನೀಡಲು ಸಾಧ್ಯವಾಗುತ್ತಿಲ್ಲ, ಒಬ್ಬರಿಗೆ ನೀಡಿದರೆ ಮತ್ತೊಂದು ಬಣ ಬಂಡಾಯ ಏಳುವುದು ಗ್ಯಾರಂಟಿ, ಇದು ಮುಂದಿನ ಲೋಕಾಸಭೆ ಚುನಾವಣೆಯ ಮೇಲೆ ಖಂಡಿತ ಪ್ರಭಾವ ಬೀರಲಿದೆ. ಈ ಕಾರಣಕ್ಕೆ ಇಬ್ಬರನ್ನು ಖುಷಿ ಪಡಿಸುವುದು ಹೇಗೆ ಎಂದು ತಲೆಕೆಡಿಸಿಕೊಂಡಿದೆ.
50:50 ಡೀಲ್ಗೆ ಡಿಕೆಶಿ ನಾಟ್ ಒಕೆ
ಎರಡೂವರೆ ವರ್ಷ ಸಿದ್ಧರಾಮಯ್ಯ, ಎರಡೂವರೆ ವರ್ಷ ಡಿ. ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂಬ ಸಲಹೆಯನ್ನು ನೀಡಲಾಗಿತ್ತು, ಅದಕ್ಕೆ ಡಿ. ಕೆ ಶಿವಕುಮಾರ್ ಅವರು ಒಪ್ಪುತ್ತಿಲ್ಲ. ಇಷ್ಟು ವರ್ಷಗಳ ಕಾಲ ಕಾಂಗ್ರೆಸ್ ಸಂಕಷ್ಟದಲ್ಲಿದ್ದಾಗ ಕಷ್ಟಾಪಟ್ಟು ಹಗಲು-ಇರಳು ದುಡಿದ್ದೇನೆ, ಈ ಬಾರಿ ನನಗೆ ಮುಖ್ಯಮಂತ್ರಿ ಪದವಿ ನೀಡಲೇಬೇಕು ಎಂದು ಪಟ್ಟು ಹಿಡಿದು ಕೂತಿದ್ದಾರೆ. ಹೀಗಾಗಿ ಸಿ ಎಂ ಕುರ್ಚಿ ಸಿಗುವವರೆಗೆ ಗೆದ್ದ ಖುಷಿಯನ್ನು ಸಂಪೂರ್ಣವಾಗಿ ಆನಂದಿಸಲು ಡಿಕೆ ಶಿವಕುಮಾರ್ ಅವರಿಗೆ ಸಾಧ್ಯವಾಗುತ್ತಿಲ್ಲ.
ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದ್ದಾಗ ಪಕ್ಷ ಕಾಪಾಡಲು ಹೆಗಲು ಕೊಟ್ಟಿದ್ದೇ ಡಿಕೆಶಿ
ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ದುರ್ಬಲವಾದಾಗ ಅನೇಕರಿ ಕರ್ನಾಟಕದಲ್ಲಿ ಇನ್ನು ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದು ಕಷ್ಟ ಎಂದು ಭಾವಿಸಿದ್ದರು. ಸ್ವತಃ ಕಾಂಗ್ರೆಸ್ ಪಕ್ಷದಲ್ಲಿಯೇ ಅನೇಕ ನಾಯಕರುಗಳು ಭರವಸೆ ಕಳೆದುಕೊಂಡು ಬೇರೆ ಪಕ್ಷಕ್ಕೆ ವಲಸೆ ಹೋಗಿದ್ದು ಇದೆ. ಅಂಥ ಪಕ್ಷವನ್ನು ಭರ್ಜರಿ ಬಹುಮತಗಳೊಂದಿಗೆ ಗೆಲ್ಲುವಂತೆ ಮಾಡುವಲ್ಲಿ ಡಿಕೆಶಿ ಪಾಲು ತುಂಬಾನೇ ಇದೆ ಎಂಬುವುದನ್ನು ಯಾರೂ ತಳ್ಳಿ ಹಾಕುವಂತಿಲ್ಲ. ಪಕ್ಷಕ್ಕಾಗಿ ಹಗಲಿರಳು ಶ್ರಮಿಸಿದ್ದಾರೆ. ಜಾತಿವಾರು ಲೆಕ್ಕಾಚಾರದಲ್ಲೂ ಡಿಕೆಶಿ ಸೈ ಅನಿಸಿಕೊಂಡಿದ್ದಾರೆ. ಜೆಡಿಎಸ್ನ ಒಕ್ಕಲಿಗ ಮತಗಳನ್ನು ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಈ ಬಾರಿ ನನಗೆ ಸಿ ಎಂ ಪಟ್ಟ ನೀಡಿ ಎಂದು ಕೇಳುತ್ತಿದ್ದಾರೆ ಡಿಕೆಶಿ.
ಈ ಹುಟ್ಟುಹಬ್ಬದಂದು ದೊರೆಯುವುದೇ ಭರ್ಜರಿ ಗಿಫ್ಟ್?
ಡಿಕೆಶಿ ಹುಟ್ಟುಹಬ್ಬವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂತೋಷದಿಂದ ಆಚರಿಸುತ್ತಿದ್ದಾರೆ. ಆದರೆ ಸಿ. ಎಂ ಪದವಿ ಸಿಕ್ಕರೆ ಮಾತ್ರ ಡಿಕೆಶಿ ಫುಲ್ ಖುಷಿಯಾಗುತ್ತಾರೆ. ... ಈ ಹುಟ್ಟುಹಬ್ಬಕ್ಕೆ ಹೈಕಮಾಂಡ್ನಿಂದ ಸಿಎಂ ಕುರ್ಚಿ ಉಡುಗೊರೆಯಾಗಿ ಸಿಗುವ ನಿರೀಕ್ಷೆಯಲ್ಲಿದ್ದಾರೆ, ಈ ಉಡುಗೊರೆ ಸಿಗುವುದೇ? ಒಂದೆರಡು ದಿನದಲ್ಲಿ ತಿಳಿಯುತ್ತದೆ, ರಾಜ್ಯದ ಜನತೆ ಕೂಡ ಯಾರಾಗುತ್ತಾರೆ ಸಿ ಎಂ ಎಂದು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.
ನಿಮಗೆ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇವರಲ್ಲಿ ಯಾರಾಗಬೇಕು ಮುಂದಿನ ಸಿ ಎಂ? ಕಮೆಂಟ್ ಮಾಡಿ



Click it and Unblock the Notifications