Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಶಬರಿಮಲೆ ಅಯ್ಯಪ್ಪನ ಜನ್ಮ ರಹಸ್ಯವೇನು? ನೀವೆಲ್ಲೂ ಕೇಳಿರದ ಕಥೆ ಇಲ್ಲಿದೆ..
ಶಿವ ಮತ್ತು ವಿಷ್ಣು ದೇವರ ನಿಗೂಢ ದೈವಿಕ ಮಗನ ಬಗ್ಗೆ ನೀವು ಯಾವತ್ತಾದರೂ ಕೇಳಿದ್ದೀರಾ? ಹೌದು, ಹಿಂದೂ ಧರ್ಮದಲ್ಲಿ ಅತ್ಯಂತ ಪೂಜ್ಯನೀಯವಾಗಿರುವ ಭಗವಾನ್ ವಿಷ್ಣುವಿನ ಮಗುವಿಗೆ ಶಿವನು ತಂದೆಯಾಗುತ್ತಾನೆ. ಪ್ರತೀ ವರ್ಷ ಭಕ್ತರು ಇವರಿಬ್ಬರ ಮಗನಿರುವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಾರೆ. ಈ ಪವಿತ್ರ ಸ್ಥಳವು ಕೇರಳದ ಶಬರಿಮಲೆಯಲ್ಲಿದೆ. 41 ದಿನಗಳ ಉಪವಾಸದ ಬಳಿಕ ಲಕ್ಷಾಂತರ ಮಂದಿ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ.
ಅಯ್ಯಪ್ಪ ದೇವರು ಶಿವ ಮತ್ತು ಮೋಹಿನಿ(ವಿಷ್ಣುವಿನ ನಾರಿ ರೂಪ)ಯ ಕೂಡುವಿಕೆಯಿಂದ ಹುಟ್ಟಿದವ. ಬ್ರಹ್ಮ ದೇವರಿಂದ ವರವನ್ನು ಪಡೆದು ಭೂಲೋಕಕ್ಕೆ ಕಂಠಕವಾಗಿದ್ದ ಮಹಿಷಿಯ ವಧೆಗಾಗಿ ಅಯ್ಯಪ್ಪ ಹುಟ್ಟಿದ್ದ. ರಾಜಶೇಖರನೆಂಬ ರಾಜನು ಅಯ್ಯಪ್ಪನನ್ನು ಬೆಳೆಸಿದ.

ಅಯ್ಯಪ್ಪ ದೇವರು ಬ್ರಹ್ಮಚಾರಿ ಮತ್ತು ಆತನು ಯೋಗದ ಭಂಗಿಯಲ್ಲಿ ಕುಳಿತುಕೊಂಡು ಕತ್ತಿನಲ್ಲಿ ಒಂದು ಸರ ಹಾಕಿಕೊಂಡಿದ್ದಾನೆ. ಅಯ್ಯಪ್ಪ ದೇವರು ಜೀವಿಸಿದ ಶಬರಿಮಲೆಯಲ್ಲಿ ಅಯ್ಯಪ್ಪ ದೇವರ ಮಂದಿರವಿದೆ. ಇದು ವಿಶ್ವದ ಅತ್ಯಂತ ದೊಡ್ಡ ಯಾತ್ರೆಯ ಸ್ಥಳವಾಗಿದೆ ಮತ್ತು ಭಕ್ತಿಭಾವದಿಂದ ಅಯ್ಯಪ್ಪ ದೇವರನ್ನು ಪೂಜಿಸಿದರೆ ಭಕ್ತರು ಎಲ್ಲಾ ಇಷ್ಟಾರ್ಥಗಳು ಈಡೇರುತ್ತದೆ ಎಂದು ನಂಬಲಾಗಿದೆ. ಆದರೆ ಇಬ್ಬರು ದೇವರ ಸಂಬಂಧದಿಂದ ಹುಟ್ಟಿದ ನಿಗೂಢ ದೇವರ ಬಗ್ಗೆ ತಿಳಿಯಬೇಕೇ? ಮುಂದೆ ಓದಿ.
ಮಹಿಷಿ
ದುರ್ಗಾ ದೇವಿಯು ಮಹಿಷಾಸುರನನ್ನು ಕೊಲ್ಲುತ್ತಾಳೆ. ಇದರಿಂದ ಸಿಟ್ಟಿಗೆದ್ದ ಆತನ ಸೋದರಿ ಮಹಿಷಿ ತನ್ನ ಸೋದರನ ಸಾವಿಗೆ ಸೇಡು ತೀರಿಸಿಕೊಳ್ಳಲು ನಿರ್ಧರಿಸುತ್ತಾಳೆ. ದೀರ್ಘಕಾಲ ತಪಸ್ಸು ಮಾಡಿದ ಆಕೆ ಬ್ರಹ್ಮನನ್ನು ಒಲಿಸಿಕೊಳ್ಳುತ್ತಾಳೆ. ಶಿವ ಮತ್ತು ವಿಷ್ಣುವಿನ ಮಗನನ್ನು ಹೊರತುಪಡಿಸಿ ಯಾರಿಂದಲೂ ತನಗೆ ಸಾವು ಬರಬಾರದೆಂಬ ವರವನ್ನು ಪಡೆಯುತ್ತಾಳೆ. ಪುರುಷರಿಬ್ಬರು ಮಗುವನ್ನು ಪಡೆಯಲು ಸಾಧ್ಯವಿಲ್ಲವೆಂದು ಭಾವಿಸಿದ ಮಹಿಷಿ ತಾನು ಅಮರಳೆಂದು ಭಾವಿಸುತ್ತಾಳೆ. ಇದರಿಂದ ಆಕೆ ಭೂಮಿ ಎಲ್ಲರಿಗೂ ತೊಂದರೆಯನ್ನು ಉಂಟುಮಾಡುತ್ತಿರುತ್ತಾಳೆ.
ಶಿವ ಮತ್ತು ವಿಷ್ಣುವಿನ ಮಿಲನ
ಮಹಿಷಿಯು ದೇವಲೋಕಕ್ಕೆ ಬಂದು ಹಾನಿಯುಂಟು ಮಾಡಿದಾಗ ಎಲ್ಲಾ ದೇವದೇವತೆಗಳು ವಿಷ್ಣು ಮತ್ತು ಶಿವನಿಂದ ನೆರವು ಪಡೆಯಲು ತೆರಳುತ್ತಾರೆ. ಈ ವೇಳೆ ವಿಷ್ಣು ಒಂದು ಯೋಜನೆ ರೂಪಿಸುತ್ತಾನೆ. ಸಮುದ್ರ ಮಂಥನದ ವೇಳೆ ರಾಕ್ಷಸರು ಅಮೃತವನ್ನು ಕುಡಿಯುವುದನ್ನು ತಪ್ಪಿಸಲು ವಿಷ್ಣು, ಮೋಹಿನಿ ರೂಪವನ್ನು ಧರಿಸಿದ್ದ. ವಿಷ್ಣು ಮತ್ತೆ ಮೋಹಿನಿಯ ರೂಪ ತಳೆದರೆ ಆಗ ಶಿವನೊಂದಿಗಿನ ಮಿಲನದಿಂದ ದೈವಿಕ ಮಗುವನ್ನು ಪಡೆಯಬಹುದು. ಇದರಿಂದ ದುರ್ಗೆಯ ಶಕ್ತಿಯೊಂದಿಗೆ ಮಹಿಷಿಯನ್ನು ಮಣಿಸಬಹುದು ಎನ್ನುತ್ತಾನೆ.
ರಾಜಕುಮಾರ ಮಣಿಕಂಠ
ಅಯ್ಯಪ್ಪ ದೇವರು ಹುಟ್ಟಿದ ಬಳಿಕ ಆತನ ದೈವಿಕ ತಂದೆ-ತಾಯಿ ಆತನ ಕೊರಳಿಗೆ ಬಂಗಾರದ ಮಣಿಯನ್ನು ಕಟ್ಟುತ್ತಾರೆ ಮತ್ತು ಆತನನ್ನು ಪಂಪಾ ನದಿ ತೀರದಲ್ಲಿ ಬಿಡುತ್ತಾರೆ. ಮಕ್ಕಳಿಲ್ಲದ ರಾಜ ರಾಜಶೇಖರ ಈ ನದಿ ಬದಿಯಲ್ಲಿ ಸಾಗಿಹೋಗುತ್ತಿದ್ದಾಗ ಮಗುವಿನ ಅಳುವನ್ನು ಕಂಡು ಹುಡುಕುತ್ತಾ ಹೋಗಿ ಮಗುವನ್ನು ತೆಗೆದುಕೊಂಡು ಅರಮನೆಗೆ ಹೋಗುತ್ತಾನೆ. ಅಲ್ಲಿ ಮಣಿಕಂಠನನ್ನು ಆತ ತನ್ನ ಮಗನಂತೆ ಸಾಕುತ್ತಾನೆ. ಮಣಿಕಂಠನ ಆಗಮನದ ಕೆಲವು ಸಮಯದ ಬಳಿಕ ರಾಣಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡುತ್ತಾಳೆ. ಆದರೆ ರಾಜ ಮಾತ್ರ ಮಣಿಕಂಠನೇ ತನ್ನ ಉತ್ತರಾಧಿಕಾರಿಯಾಗಬೇಕೆಂದು ಬಯಸುತ್ತಾನೆ. ರಾಣಿ ಮಾತ್ರ ತನ್ನ ಮಗನೇ ರಾಜನಾಗಬೇಕೆಂದು ಬಯಸುತ್ತಾಳೆ. ಇದರಿಂದ ಆಕೆ ಅನಾರೋಗ್ಯದ ನೆಪವೊಡ್ಡಿ ಮಣಿಕಂಠನನ್ನು ಕೊಲ್ಲಲು ಪ್ರಯತ್ನಿಸುತ್ತಾಳೆ. ರಾಣಿಯ ಆಜ್ಞೆಯಂತೆ ವೈದ್ಯರು ಕೂಡ ಹುಲಿ ಹಾಲಿನಿಂದ ಮಾತ್ರ ರಾಣಿ ಗುಣಮುಖವಾಗಲು ಸಾಧ್ಯ ಎಂದು ಹೇಳುತ್ತಾರೆ. ಇದರಿಂದ ಮಣಿಕಂಠನು ರಾಣಿಗಾಗಿ ಹುಲಿ ಹಾಲನ್ನು ತರಲು ಕಾಡಿಗೆ ತೆರಳುತ್ತಾನೆ.
ಮಹಿಷಿಯನ್ನು ಕೊಂದ ಅಯ್ಯಪ್ಪ
ಹುಲಿಯ ಹಾಲನ್ನು ಪಡೆಯಲು ಹೋದ ಮಣಿಕಂಠನಿಗೆ ಮಹಿಷಿ ಎದುರಾಗುತ್ತಾಳೆ. ಇಬ್ಬರ ಮಧ್ಯೆ ದೀರ್ಘ ಕಾಳಗ ನಡೆಯುತ್ತದೆ ಮತ್ತು ಅಂತಿಮವಾಗಿ ಅಜುತಾ ನದಿ ತೀರದಲ್ಲಿ ಮಹಿಷಿಯನ್ನು ಮಣಿಕಂಠ ಕೊಲ್ಲುತ್ತಾನೆ. ಇದರ ಬಳಿಕ ಆತ ಹುಲಿ ಹಾಲನ್ನು ತರಲು ಹೋಗುತ್ತಾನೆ ಮತ್ತು ಅಲ್ಲಿ ಶಿವನನ್ನು ಭೇಟಿಯಾಗುತ್ತಾನೆ. ಅಲ್ಲಿ ತನ್ನ ಹುಟ್ಟಿನ ರಹಸ್ಯ ತಿಳಿದುಕೊಳ್ಳುತ್ತಾನೆ.



Click it and Unblock the Notifications
