ಗಣೇಶನಿಗೆ ಮೋದಕ ಏಕೆ ಇಷ್ಟ ಗೊತ್ತಾ? ಇದರ ಕಥೆ ಇಲ್ಲಿದೆ ನೋಡಿ

ಗಣೇಶ ಚತುರ್ಥಿ ಹತ್ತಿರವಾಗುತ್ತಿದೆ. ಗಣೇಶನ ಕೂರಿಸಲು ಜನರು ಸಿದ್ಧತೆ ನಡೆಸಿದ್ದಾರೆ. ಹಿಂದೂ ಪುರಾಣಗಳ ಪ್ರಕಾರ ಈ ಗಣೇಶ ಹಬ್ಬಕ್ಕೆ ಬಹಳ ದೊಡ್ಡ ಇತಿಹಾಸವೇ ಇದೆ. ಸಾರ್ವಜನಿಕ ಗಣೇಶೋತ್ಸವದ ಹಿಂದೆಯೂ ಅತೀ ದೊಡ್ಡ ಇತಿಹಾಸವಿದೆ. ಇನ್ನು ವಿನಾಯಕ ಗಣಪತಿಯಾದ ಕಥೆಯೂ ಸಹ ರೋಮಾಂಚನಕಾರಿಯಾಗಿದೆ. ಆನೆಯ ತಲೆಯನ್ನ ವಿಘ್ನ ನಿವಾರಕನಿಗೆ ಹಾಕಿ ಆತ ಗಜಮುಖನಾಗಿ ಬದಲಾದ ಕಥೆ ಸಹ ನಮಗೆ ತಿಳಿದಿದೆ.

ಇನ್ನು ಗಣೇಶ ಹಬ್ಬ ಅಂದ್ರೆ ಅಲ್ಲಿ ವಿಶೇಷ ಆಚರಣೆಗಳನ್ನು ನೋಡುತ್ತೇವೆ. ಅದರಲ್ಲೂ ಗಣೇಶನಿಗೆ ಪ್ರಿಯ ಎಂದು ಮೊದಕವನ್ನು ಅರ್ಪಿಸುವುದನ್ನು ನಾವು ನೋಡಿದ್ದೇವೆ. ಗಣೇಶನಿಗೆ ಸಿಹಿ ಕಡಬು ಹಾಗೂ ಮೋದಕ ಎಂದರೆ ಎಲ್ಲಿಲ್ಲದ ಇಷ್ಟ, ಹೀಗಾಗಿ ಹಬ್ಬದಲ್ಲಿ ಈ ಎರಡು ಖಾದ್ಯ ಮಾಡಿಯೇ ಮಾಡುತ್ತಾರೆ. ಹಾಗಾದ್ರೆ ನಿಮಗೆ ಗೊತ್ತಾ ಗಣೇಶನಿಗೆ ಮೋದಕ ಪ್ರಿಯವಾದ ಸಿಹಿ ಏಕೆ? ಇದರ ಹಿಂದಿರುವ ಕಥೆ ಏನು ಗೊತ್ತಾ?

Do You Know Why Ganesha Likes Modaka Here Is The Story

ಚೌತಿಯಂದು ಮೋದಕವಿಲ್ಲದಿದ್ದರೆ ಹಬ್ಬವೇ ಅಪೂರ್ಣ. ಮೋದಕ ಪ್ರಿಯನಿಗೆ ಕಡ್ಡಾಯವಾಗಿ ಮೋದಕ ಇಡಲೇಬೇಕು. ಭಗವಾನ್ ಗಣೇಶ ಮತ್ತು ಮೋದಕ ಸಿಹಿಯ ನಡುವೆ ಒಂದು ಬಾಂಧವ್ಯವಿದೆ. ಗಣೇಶ ಮೋದಕದ ಸಿಹಿಗೆ ಮಾರುಹೋದ ಘಟನೆಯೊಂದು ನಡೆದಿತ್ತು. ಒಮ್ಮೆ ಪಾರ್ವತಿಯರು ಶಾಂತವಾಗಿ ಕುಳಿತಿರುವಾಗ ಗಣೇಶನ ಹಾಗೂ ಕಾರ್ತಿಕೇಯ ಇಬ್ಬರು ಗಲಾಟೆ ಮಾಡಿಕೊಳ್ಳುತ್ತಿರುವುದು ಕಾಣಿಸಿತು. ಪಾರ್ವತಿ ಇಬ್ಬರನ್ನು ಹತ್ತಿರಕ್ಕೆ ಕರೆದು ಏಕೆ ಜಗಳ ಆಡುತ್ತಿದ್ದೀರಿ ಎಂದು ಕೇಳಿದಳು.

ಆಗ ಅವರಿಬ್ಬರಲ್ಲಿ ಉಂಟಾಗಿರುವ ಒಂದು ಪ್ರಶ್ನೆಯನ್ನು ಶಿವ-ಪಾರ್ವತಿಯರ ಮುಂದಿಟ್ಟರು. ನಮ್ಮಿಬ್ಬರಲ್ಲಿ ಯಾರು ಬುದ್ಧಿವಂತರು ಎಂದು ಹೇಳುವಂತೆ ಹಠ ಹಿಡಿದರು. ಈ ಪ್ರಶ್ನೆ ಕೇಳಿದ ಶಿವ ಪಾರ್ವತಿಯರು ಒಮ್ಮೆ ಅವರಿಗೆ ಯಾವ ಉತ್ತರ ನೀಡಬೇಕು ಎಂಬ ಗೊಂದಲಕ್ಕೆ ಬಿದ್ದರು, ಇಬ್ಬರಲ್ಲಿ ಯಾರು ಬುದ್ಧಿವಂತರೆಂದು ಸಾಬೀತು ಮಾಡುವುದು ಅವರಿಗೂ ದೊಡ್ಡ ಸವಾಲಾಗಿತ್ತು, ಹಾಗೆ ಅವರ ಬುದ್ಧಿ ಶಕ್ತಿ ತಾನಾಗಿಯೇ ಅವರಿಗೆ ತಿಳಿಯುವಂತೆ ಮಾಡಬೇಕು ಎಂದು ಆಲೋಚನೆ ಮಾಡಿದರು.

ಹೀಗಾಗಿ ಅವರಿಬ್ಬರ ಮುಂದೆ ಒಂದು ಸವಾಲು ಇಟ್ಟರು ಯಾರು ಬೇಗ ಇಡೀ ಭೂಮಿಯನ್ನು ಸುತ್ತು ಹಾಕಿ ಬರುತ್ತಾರೋ ಅವರು ಬುದ್ಧಿವಂತರು ಎಂಬ ಸವಾಲು ನೀಡುತ್ತಾರೆ. ಈ ಮಾತು ಕೇಳಿದ ಕಾರ್ತಿಕೇಯ ನವಿಲಿನ ಮೇಲೆ ಕುಳಿತು ಹಾರಿ ಹೋಗಿಯೇ ಬಿಟ್ಟ. ಆದ್ರೆ ವಿನಾಯಕ ಏನು ಮಾಡಬೇಕು ಎಂದು ತಿಳಿಯದೆ ಶಿವ ಪಾರ್ವತಿಯನ್ನೇ ನಿಲ್ಲಿಸಿ ಅವರಿಗೆ ಕೈಮುಗಿದು ಅವರಿಗೆ ಒಂದು ಸುತ್ತು ಬಂದ.

ಇದರ ಒಳಾರ್ಥ ತಿಳಿದ ಶಿವ ಪಾರ್ವತಿಯರು ಆತನ ಬುದ್ಧಿವಂತಿಕೆ ಕಂಡು ಆರ್ಶೀವಾದ ಮಾಡಿದರು. ಹಾಗೆ ವಿದ್ಯ ವಿನಾಯಕನಾಗಿ ಆತ ಬಿರುದು ಪಡೆದ. ಹಾಗೆ ಬಹುಮಾನವಾಗಿ ಆತನಿಗೆ ಶಿವ ಮೋದಕವನ್ನು ತಿನ್ನಿಸಿದ. ಈ ಮೋದಕದ ರುಚಿ ಕಂಡ ಗಣಪ ಅಲ್ಲಿದ್ದ ಎಲ್ಲಾ ಮೋದಕ ಕ್ಷಣದಲ್ಲಿ ಖಾಲಿ ಮಾಡಿಬಿಟ್ಟನಂತೆ. ಹೀಗಾಗಿ ಆತನಿಗೆ ಮೋದಕ ಅಂದರೆ ಪಂಚಪ್ರಾಣ ಎಂದು ನೈವೇದ್ಯ ಮಾಡಲಾಗುತ್ತದೆ.

ಇನ್ನೊಂದು ಕಥೆಯ ಪ್ರಕಾರ ದೇವಾನುದೇವತೆಗಳು ಶಿವ ಪಾರ್ವತಿ ಮನೆಗೆ ಭೇಟಿ ನೀಡುತ್ತಾರೆ. ಆಗ ಒಂದು ಮೋದಕವನ್ನು ಪಾರ್ವತಿಗೆ ಕೊಡುತ್ತಾರೆ. ಗಣೇಶ, ಕಾರ್ತಿಕ ಇಬ್ಬರಲ್ಲಿ ಯಾರಿಗೆ ಕೊಡುವುದು ಎಂಬ ಗೊಂದಲ ಪಾರ್ವತಿಗೆ ಮೂಡುತ್ತದೆ. ಈ ವೇಳೆ ಇಬ್ಬರಿಗೂ ಭೂಮಿಯನ್ನು ಮೊದಲು ಸುತ್ತಿ ಬರುವವರಿಗೆ ಈ ಮೋದಕ ಸಿಗುತ್ತದೆ ಎನ್ನುತ್ತಾಳೆ. ಇದಾದ ಬಳಿಕ ಏನಾಯಿತು ಎಂಬುದು ನಿಮಗೂ ಗೊತ್ತಿದೆ. ಶಿವ-ಪಾರ್ವತಿಯನ್ನೇ ಸುತ್ತಿ ಮೋದಕವನ್ನ ಗಣೇಶ ಸವಿದು ಬಿಟ್ಟಿದ್ದ ಎಂಬ ಕಥೆ ಇದೆ.

English summary

Do You Know Why Ganesha Likes Modaka? Here Is The Story

If there is no modak on Chauthi, the festival is incomplete. A modak lover must have a modak. There is a bond between Lord Ganesha and Modaka Sihi. There was an incident where Ganesha fell in love with the sweetness of Modaka.
Story first published: Tuesday, September 3, 2024, 7:50 [IST]
X
Desktop Bottom Promotion