Latest Updates
-
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ! -
ಸಣ್ಣ ಬಾಲ್ಕನಿಯಲ್ಲಿ ಓಣಂ ಸಂಭ್ರಮ: ಬಜೆಟ್ನಲ್ಲಿ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್ -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕೊನೆಯ ದಿನದ ಸಂಭ್ರಮ ಮತ್ತು ಮನೆಯನ್ನು ಸಿಂಗರಿಸುವ ಸುಲಭ ಟಿಪ್ಸ್
ವಿದ್ಯುತ್ ಶಾಕ್ ತಗುಲಿದ ಬಾಲಕನ ಜೀವ ಉಳಿಸಿದ ವೈದ್ಯೆ..! ದೇವರಂತೆ ಕಂಡ ಜನ..!
ಮನುಷ್ಯರ ಜೀವನ ಈಗ ನೀರ ಮೇಲಿನ ಗುಳ್ಳೆಯಂತೆ. ಯಾವಾಗ ಅಪಾಯ ಬಂದು ಬಿಡುತ್ತೆ ಅನ್ನೋದನ್ನ ಯಾರು ಸಹ ಊಹಿಸಲು ಸಾಧ್ಯವಿಲ್ಲ. ಅದರಲ್ಲೂ ಹೃದಯಾಘಾತ, ಮೂರ್ಛೆಯಂತಹ ಕಾಯಿಲೆ ಇದ್ದವರು ಯಾವಾಗ ಕುಸಿದು ಬೀಳುತ್ತಾರೆ ಅನ್ನೋದನ್ನ ಅಂದಾಜಿಸಲು ಸಹ ಸಾಧ್ಯವಿಲ್ಲ.
ಆದ್ರೆ ಯಾರಾದರು ಸಾವು ಬದುಕಿನ ನಡುವೆ ಹೋರಾಟ ಮಾಡುವಾಗ ಅವರಿಗೆ ಸಿಪಿಆರ್ ಮಾಡುವ ಮೂಲಕ ಮತ್ತೆ ಜೀವನ ನೀಡಬಹುದು. ಅದರಲ್ಲೂ ಹೃದಯ ಬಡಿತ ನಿಂತಾಗ ಈ ಸಿಪಿಆರ್ ಎಂಬ ಪ್ರಥಮ ಚಿಕಿತ್ಸೆ ಅವರ ಜೀವ ಉಳಿಸಲು ನೆರವಾಗಲಿದೆ.

ಸದ್ಯ ಈಗ ಇಲ್ಲೊಬ್ಬ ಪುಟ್ಟ ಬಾಲಕನನ್ನು ಮಹಿಳಾ ವೈದ್ಯರೊಬ್ಬರು ಈ ಸಿಪಿಆರ್ ಮಾಡಿ ಜೀವ ಉಳಿಸಿದ ಘಟನೆ ನಡೆದಿದ್ದು, ಅದರ ವಿಡಿಯೋ ವೈರಲ್ ಆಗಿ ವೈದ್ಯರ ಮಾನವೀಯ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಶಾಕ್ ತಗುಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಪುಟ್ಟ ಬಾಲಕನ ಜೀವ ಉಳಿಸುವಲ್ಲಿ ಮಹಿಳಾ ವೈದ್ಯರು ಯಶಸ್ವಿಯಾಗಿದ್ದಾರೆ.
ಏನಿದು ಘಟನೆ?
ಆಂಧ್ರ ಪ್ರದೇಶದ ವಿಜಯವಾಡದ ಅಯ್ಯಪ್ಪ ನಗರದಲ್ಲಿ ಮನೆಯಲ್ಲಿ 6 ವರ್ಷದ ಬಾಲಕನಿಗೆ ವಿದ್ಯುತ್ ಶಾಕ್ ತಗುಲಿದೆ. ಇದರಿಂದ ಕುಸಿದು ಬಿದ್ದ ಆತ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾನೆ. ಹೀಗಾಗಿ ಆತನ ಹಿಡಿದು ಪೋಷಕರು ರಸ್ತೆಯಲ್ಲಿ ಓಡುತ್ತಿದ್ದರು. ಅವರು ಆಸ್ಪತ್ರೆಗೆ ಸಾಗಿಸುವ ದಾವಂತದಲ್ಲಿ ರಸ್ತೆಯುದ್ದಕ್ಕೂ ಸಹಾಯಕ್ಕೆ ಕೂಗಿದ್ದಾರೆ.
ಇದೇ ವೇಳೆ ಇಲ್ಲಿಯೇ ಇದ್ದ ಮಹಿಳಾ ವೈದ್ಯೆ ಡಾ.ರವಳಿಕಾ ಈ ಪೋಷಕರ ಗೋಳಾಟ ಕಂಡು ಸ್ಥಳಕ್ಕೆ ಓಡಿ ಬಂದು ಹುಡುಗನಿಗೆ ಪ್ರಥಮ ಚಿಕಿತ್ಸೆ ಮಾಡುವುದಾಗಿ ಹೇಳಿ ಕೂಡಲೆ ಸಿಪಿಆರ್ (ಕಾರ್ಡಿಯೋಪಲ್ಮನರಿ ರೆಸಸಿಟೇಶನ್) ಆರಂಭಿಸಿದ್ದಾರೆ. ಐದು ನಿಮಿಷಗಳ ನಿರಂತರ ಸಿಪಿಆರ್ ಮೂಲಕ ಬಾಲಕ ಪ್ರಜ್ಞಾ ಸ್ಥಿತಿಗೆ ಬಂದಿದ್ದಾನೆ. ಇದನ್ನು ಕಂಡ ಸುತ್ತಲಿನವರು ವೈದ್ಯೆ ಕಾರ್ಯಕ್ಕೆ ಮೆಚ್ಚಿ ಚಪ್ಪಾಳೆ ಹೊಡೆದು ದೇವರಂತೆ ಬಂದು ಬಾಲಕನ ಜೀವ ಉಳಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವೈದ್ಯರು ಒಂದು ನಿಮಿಷವೂ ಸಮಯ ಹಾಳು ಮಾಡದೆ ಬಾಲಕನಿಗೆ ರಸ್ತೆಯಲ್ಲಿಯೇ ಸಿಪಿಆರ್ಗೆ ಮುಂದಾದರು. ಈ ದೃಶ್ಯ ನೋಡಿದ ಮಂದಿ ಗುಂಪು ಗುಂಪಾಗಿ ಅಲ್ಲಿ ಸೇರಿದ್ದರೆ ಕೆಲವರು ಅಚ್ಚರಿಯಿಂದ ಇಲ್ಲೇನು ನಡೆಯುತ್ತಿದೆ ಎಂದು ಅಚ್ಚರಿಗೊಳಗಾದರು. ವೈದ್ಯೆ ಬಾಲಕನ ಎದೆ ಮೇಲೆ ಕೈ ಇಟ್ಟು ನಿರಂತರ ಸಿಪಿಆರ್ ಮಾಡಿದ್ದಾರೆ. ಬಾಲಕ ಸ್ವಲ್ಪ ಚೇತರಿಸಿಕೊಂಡಿದ್ದನ್ನು ನೋಡಿದ ಪೋಷಕರು ವೈದ್ಯೆಗೆ ಕೈಮುಗಿದು ಧನ್ಯವಾದ ಅರ್ಪಿಸಿದ್ದಾರೆ.
ಇನ್ನು ಸಿಪಿಆರ್ ಬಳಿಕ ಮತ್ತೆ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕನ ಪರೀಕ್ಷಿಸಿದ ವೈದ್ಯರು ಮೊದಲು ಸಿಪಿಆರ್ ಮಾಡಿದ್ದರಿಂದ ಬಾಲಕನ ಜೀವ ಉಳಿದಿದೆ ಎಂದಿದ್ದಾರೆ. ಜೊತೆಗೆ ಆ ವೈದ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ರೀತಿಯ ಸಿಪಿಆರ್ ತರಬೇತಿ ಎಲ್ಲರಿಗೂ ನೀಡಬೇಕು ತುರ್ತು ಸಂದರ್ಭದಲ್ಲಿ ನೆರವಿಗೆ ಬರಲಿದೆ ಎಂದು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ.
ಜೊತೆಗೆ ಸಮಯ ಪ್ರಜ್ಞೆ ಮೆರೆದ ವೈದ್ಯೆಯ ಕಾರ್ಯಕ್ಕೆ ಜನರು ಮೆಚ್ಚಿ ಆಕೆಯ ಹಾಡಿ ಹೊಗಳಿದ್ದಾರೆ. ಇಂತಹ ವೈದ್ಯರು ಎಲ್ಲೆಡೆ ಇದ್ದರೆ ಒಂದಿಷ್ಟು ಜೀವಗಳು ಆಸ್ಪತ್ರೆಗೆ ತಲುಪುವ ಮುನ್ನವೇ ಉಳಿದುಬಿಡುತ್ತವೆ, ಅವರಿಗೊಂದು ಸಲಾಮ್ ಎಂದಿದ್ದಾರೆ. ಜೊತೆಗೆ ಆಕೆಯ ಧೈರ್ಯಕ್ಕೆ ಜನ ಹೊಗಳಿದ್ದಾರೆ. ಇಂತಹ ವೈದ್ಯರಿಂದಲೇ ಇಂದು ನೂರಾರು ಮಂದಿ ಜೀವ ಉಳಿಸಿಕೊಳ್ಳುವಂತಾಗಿದೆ. ಅವರನ್ನು ದೇವರು ಕಾಪಾಡಲಿ ಎಂದು ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ.



Click it and Unblock the Notifications