Latest Updates
-
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಲಾಲಾಬಾಗ್ ಗಣಪನಿಗೆ ಮೊದಲ ದಿನವೇ ₹50 ಲಕ್ಷ ದೇಣಿಗೆ..!
ದೇಶದಾದ್ಯಂತ ಈಗ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಹಲವು ಕಡೆಗಳಲ್ಲಿ ದೈತ್ಯ ಗಣೇಶನ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗಿದೆ. ಹಾಗೆ ವಿಶೇಷ ಪೂಜೆ, ಕಾರ್ಯಕ್ರಮಗಳು ನಡೆಯುತ್ತಿದೆ. ಬಹುತೇಕ ಸಾರ್ವಜನಿಕ ಗಣೇಶೋತ್ಸವಗಳು ಮೂರು ದಿನಗಳಿಂದ ಹಿಡಿದು ಒಂದು ತಿಂಗಳ ಕಾಲ ವಿಜೃಂಭಣೆಯಿಂದ ನಡೆಯುತ್ತದೆ.
ಇನ್ನು ಮುಂಬೈನ ಕಿಂಗ್ ಆಫ್ ಲಾಲಾಭಾಗ್ ಎಂದು ಕರೆಯಲ್ಪಡುವ 'ಲಾಲ್ಬಾಗ್ಚಾ ರಾಜಾ' ಗಣಪತಿ ಇಡೀ ದೇಶದಲ್ಲೇ ಖ್ಯಾತಿ ಪಡೆದಿರುವ ಗಣೇಶ ಆಗಿದೆ. ಮುಂಬೈನ ಅತೀ ದೊಡ್ಡ ಹಾಗೂ ಅತೀ ಹೆಚ್ಚು ಮಂದಿ ಸೇರುವ ಗಣೇಶ ಇದಾಗಿದೆ. ಹೀಗಾಗಿ ಲಾಲ್ಬಾಗ್ ಗಣೇಶ ಹೆಸರು ಪಡೆದುಕೊಂಡಿದೆ.

ಈಗ ಲಾಲ್ಬಾಗ್ನ ಈ ಗಣಪ ಮೊದಲ ದಿವನೇ ದಾಖಲೆಯ ದೇಣಿಗೆ ಸಂಗ್ರಹಿಸುವ ಮೂಲಕ ಮತ್ತೆ ಸುದ್ದಿಯಾಗಿದೆ. 7 ತಾರೀಖಿನಂದು ಈ ಗಣೇಶನ ಪ್ರತಿಷ್ಠಾಪಿಸಲಾಗಿತ್ತು. ಪ್ರತಿಷ್ಠಾಪನೆಯ ದಿನವೇ ಲಕ್ಷ ಲಕ್ಷ ಮಂದಿ ಗಣೇಶನ ದರ್ಶನ ಪಡೆದಿದ್ದಾರೆ. ಅದೇ ದಿನ ದೇಣಿಗೆಯಾಗಿ 48,30,000 ರೂ ಸಂಗ್ರಹಿಸಲಾಗಿದೆ.
ಮುಂಬೈನ ಹಲವು ಪ್ರಸಿದ್ಧ ಗಣಪನ ಮೂರ್ತಿಗಳಲ್ಲಿ ಇದು ಸಹ ಒಂದಾಗಿದೆ. ಮೊದಲ ದಿನವೇ ಭಕ್ತರ ಕಾಣಿಗೆ ಹಾಗೂ ದೇಣಿಗೆಯ ಹಣ 50 ಲಕ್ಷ ರೂಪಾಯಿ ಸನಿಹಕ್ಕೆ ತಲುಪಿದೆ. ಗಣೇಶೋತ್ಸವ ಮುಗಿಯು ವೇಳೆಗೆ 1 ಕೋಟಿ ರೂಪಾಯಿಗೂ ಅಧಿಕ ದೇಣಿಗೆ ಸಂಗ್ರಹವಾಗುವ ನಿರೀಕ್ಷೆ ಇದೆ.
ಮಧ್ಯ ಮುಂಬೈನಲ್ಲಿರುವ 'ಲಾಲ್ಬಾಗ್ಚಾ ರಾಜಾ' ಮತ್ತು 'ಚಿಂಚಪೋಕ್ಲಿ ಚಾ ಚಿಂತಾಮಣಿ' ಸೇರಿದಂತೆ ದೊಡ್ಡ ಮತ್ತು ಪ್ರಸಿದ್ಧ ಗಣಪತಿ ಮಂಡಲಗಳಿಗೆ ದೇವರ ದರ್ಶನ ಪಡೆಯಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದರು. ಗಣೇಶ ಚತುರ್ಥಿಯ ನಿಮಿತ್ತ ಶನಿವಾರ ಹಲವು ಮಂಡಲಗಳು ತಮ್ಮ ಗಣಪತಿ ಮೂರ್ತಿಗಳನ್ನು ಭವ್ಯ ಮೆರವಣಿಗೆಯೊಂದಿಗೆ ತಂದಿದ್ದಾರೆ.
ಮಹಾರಾಷ್ಟ್ರದ ಜಲ್ನಾದಲ್ಲಿ ಭಕ್ತಾದಿಗಳು ಗಣೇಶನ ಪ್ರತಿಷ್ಠಾಪನೆ ಮಾಡಿದ ಬಳಿಕ ಆರತಿ ಮಾಡಿ ಸಂವಿಧಾನದ ಪೀಠಿಕೆಯನ್ನು ಓದಿ ಗಮನ ಸೆಳೆದಿದ್ದಾರೆ. ಮುಂಬೈನ ಬಹುತೇಕ ಗಣಪತಿಯು ಸುಮಾರು 10 ದಿನಗಳ ಕಾಲ ನಡೆಯುತ್ತದೆ.
ಚಿನ್ನದ ಕಿರೀಟ ನೀಡಿದ ಅನಂತ್ ಅಂಬಾನಿ
ಇತ್ತೀಚಿಗೆ ಭವ್ಯ ರೀತಿಯಲ್ಲಿ ವಿವಾಹವಾದ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೇ ಗಣಪನಿಗೆ ಚಿನ್ನದ ಕಿರೀಟ ಉಡುಗೊರೆಯಾಗಿ ನೀಡಿದ್ದಾರೆ. ಸುಮಾರು 20 ಕೆ.ಜಿ ತೂಕದ ಚಿನ್ನದ ಕಿರೀಟ ಇದಾಗಿದೆ. ಈ ಸೇವಾ ಸಮಿತಿಯ ಸದಸ್ಯರು ಆಗಿರುವ ಅನಂತ್ ಅಂಬಾನಿ ಚಿನ್ನದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದಾರೆ.
ಈ ಕಿರೀಟವು ಸುಮಾರು 15 ಕೋಟಿ ರೂಪಾಯಿ ಮೌಲ್ಯದ್ದು ಎನ್ನಲಾಗಿದೆ. ಇದಕ್ಕೂ ಮೊದಲು ಸಹ ಈ ಗಣೇಶನಿಗೆ ಹಲವಾರು ಮಂದಿ ಬೆಳ್ಳಿ, ಚಿನ್ನ ಸೇರಿ ವಿವಿಧ ರೀತಿಯ ವಸ್ತುಗಳ ದೇಣಿಗೆಯಾಗಿ ನೀಡಿದ್ದರು. ಈ ಸಾಲಿಗೆ ಚಿನ್ನದ ಕಿರೀಟವೊಂದು ಸೇರಿಕೊಂಡಿದೆ. ಅಲ್ಲದೆ ಅನಂತ್ ಅಂಬಾನಿ ಹಾಗೂ ಈ ಲಾಲಾಬಾಗ್ ಗಣಪನ ನಡುವೆ ಹಲವು ವರ್ಷಗಳ ನಂಟಿದೆ.
ಕೋವಿಡ್ ಕಾಲದಲ್ಲಿ ಅಗತ್ಯವಿರುವ ಮಂದಿಗೆ ಕಿಟ್ಗಳ ನೀಡುವುದು ಸೇರಿ ನೆರವು ನೀಡಲು ಈ ಗಣೇಶನ ಸಮಿತಿ ಮುಂದಾಗಿತ್ತು. ಲಕ್ಷಕ್ಕೂ ಅಧಿಕ ಮಂದಿಗೆ ನೆರವು ನೀಡಿತ್ತು. ಇದೇ ವೇಳೆ ಅನಂತ್ ಅಂಬಾನಿ ತಮ್ಮ ರಿಲಾಯನ್ಸ್ ಫೌಂಡೇಶನ್ ವತಿಯಿಂದ 24 ಡಯಾಲಿಸಿಸ್ ಯಂತ್ರವನ್ನು ದೇಣಿಗೆಯಾಗಿ ನೀಡಿದ್ದರು.
ಸೆಪ್ಟೆಂಬರ್ 7 ರಿಂದ ಪ್ರಾರಂಭವಾಗುವ ಗಣಪತಿ ಹಬ್ಬವು ಮಹಾರಾಷ್ಟ್ರದಲ್ಲಿ ಪ್ರಮುಖ ಆಚರಣೆಯಾಗಿದೆ. 11ನೇ ದಿನ ಮುಂಬೈನ ಪ್ರಮುಖ ಬೀದಿಯಲ್ಲಿ ಲಾಲಾಬಾಗ್ ಗಣೇಶನ ಮೆರವಣಿಗೆ ಸಾಗುತ್ತದೆ. ಈ ವೇಳೆ ಲಕ್ಷ ಲಕ್ಷ ಮಂದಿ ರಸ್ತೆಯ ಇಕ್ಕೆಲಗಳಲ್ಲಿ ಸೇರುತ್ತಾರೆ.



Click it and Unblock the Notifications