Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಗಸ್ಟ್ 19 ಹಾಗೂ 20 ರಂದು ಮೈಸೂರಿನಲ್ಲಿ ಭೂ ಮೇಳ : ವಿಶೇಷತೆ ಏನು ಗೊತ್ತಾ?
ಮೈಸೂರಿನಲ್ಲಿ ಇದೇ ಆಗಸ್ಟ್ 19 ಮತ್ತು 20 ರಂದು ಭೂ ಮೇಳವನ್ನು ಹಮ್ಮಿಕೊಳ್ಳಾಗಿದೆ. ಪರಿಸರ ಸ್ನೇಹಿ ಅಭ್ಯಾಸಗಳನ್ನು ಉತ್ತೇಜಿಸಲು ಮತ್ತು ಅದನ್ನು ಅಳವಡಿಸಿಕೊಳ್ಳುವ ಉದ್ದೇಶದಿಂದ ಹಸಿರು ಉದ್ಯಮಿಗಳು, ಉತ್ಸಾಹಿಗಳು ಮತ್ತು ಸ್ಥಳೀಯ ಸಮುದಾಯಗಳು ಸೇರಿಕೊಂಡು ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದಾರೆ.

ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಫೀನಿಕ್ಸ್ ಇಂಟರ್ನ್ಯಾಶನಲ್ ಅಕಾಡೆಮಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಎರಡು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಪರಿಸರದ ಬಗ್ಗೆ ಆಸಕ್ತಿ ಇರುವವರಿಗೆ ಮತ್ತು ಪರಿಸರ ಪ್ರಜ್ಞೆಯ ಜೀವನಶೈಲಿಯನ್ನು ಅನ್ವೇಷಿಸಲು ಮತ್ತು ಅಳವಡಿಸಿಕೊಳ್ಳಲು ಒಂದು ಅನನ್ಯ ಅವಕಾಶ ಅಂತಾನೇ ಹೇಳಬಹುದು.
ಇನ್ನೂ ಈ ಕಾರ್ಯಕ್ರಮದ ವಿಶೇಷ ಆಕರ್ಷಣೆ ಎಂದರೆ ಸಾವಯವ, ಕೈಯಿಂದ ತಯಾರಿಸಿದ ಮತ್ತು ಮನೆಯಲ್ಲಿ ತಯಾರಿಸಿದ ಉತ್ಪನ್ನಗಳ ಮಳಿಗೆಯನ್ನು ನಾವಿಲ್ಲಿ ಕಾಣಬಹುದಾಗಿದೆ. ಇದಿಷ್ಟೇ ಅಲ್ಲದೇ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿಗಳು, ಪರಿಸರ ಸ್ನೇಹಿ ಹತ್ತಿ ಮತ್ತು ಸೆಣಬಿನ ಚೀಲಗಳು, ಕರಕುಶಲ ವಸ್ತುಗಳು, ಸೇರಿದಂತೆ ಇನ್ನಿತರ ವಸ್ತುಗಳನ್ನು ಖರೀದಿಸೋದಕ್ಕೆ ನಿಮಗೆ ಅವಕಾಶವಿದೆ.
ಈ ಭೂ ಮೇಳವು ಮನೆಯಿಂದಲೇ ಕಾರ್ಯನಿರ್ವಹಿಸುವ ಸ್ಥಳೀಯ ಸಣ್ಣ ವ್ಯಾಪಾರಗಳಿಗೆ ತನ್ನ ಬೆಂಬಲವನ್ನು ವಿಸ್ತರಿಸುತ್ತದೆ ಅಂದ್ರೆ ತಪ್ಪಾಗೋದಿಲ್ಲ. ಸಣ್ಣ ವ್ಯಾಪಾರಿಗಳಿಗೆ ಇದೊಂದು ಅವಕಾಶವಾಗಿ ಪರಿವರ್ತನೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಈ ಮೇಳವು ನವೀನ ಪರಿಸರ ಸ್ನೇಹಿ ಉತ್ಪನ್ನಗಳನ್ನು ಪ್ರದರ್ಶಿಸುವ ಅವಕಾಶವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಶಾಲಾ ಮಕ್ಕಳು ಹತ್ತಿ ನೂಲು ನೂಲುವಂತಹ ಚಟುವಟಿಕೆಗಳು, ಅಡುಗೆ ಗೊಬ್ಬರ ತಯಾರಿಕೆ ಮತ್ತು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ಕುರಿತು ಮಾಹಿತಿಯನ್ನು ನೀಡಲಿದ್ದಾರೆ. ಒಟ್ಟಿನಲ್ಲಿ ಈ ಎರಡು ದಿನದಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯಲಿದೆ. ಆಸಕ್ತಿಯಿದ್ದವರು ಈ ಮೇಳದಲ್ಲಿ ಭಾಗವಹಿಸಬಹುದು.



Click it and Unblock the Notifications