Latest Updates
-
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ!
ಮನೆಯಲ್ಲೇ ಮಾಡಿ ಪರಿಸರ ಸ್ನೇಹಿ ಬಾವುಟ..! ಮಕ್ಕಳ ಕೈಗಿಟ್ಟರೆ ಆ ಖುಷಿಯೇ ಬೇರೆ..!
ಸ್ವಾತಂತ್ರ್ಯ ದಿನಾಚರಣೆ ಹತ್ತಿರವಾಗಿತ್ತಿದೆ, ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿ ಈ ದಿನವನ್ನ ಆಚರಿಸಲಾಗುತ್ತದೆ. ಇಂದು ಸ್ವಾತಂತ್ರ್ಯಕ್ಕಾಗಿ ಮಡಿದ ಮಹಾನ್ ನಾಯಕರ ತ್ಯಾಗ, ಬಲಿದಾನವನ್ನು ನೆನೆದು ಅವರಿಗೆ ಗೌರವ ಸಲ್ಲಿಸಲಾಗುತ್ತದೆ. ನಾವಿಂದು ಅನುಭವಿಸುತ್ತಿರುವ ಈ ಸ್ವಾತಂತ್ರ್ಯದ ಹಿಂದೆ ಎಷ್ಟು ಮಂದಿಯ ಶ್ರಮದ ಬೆವರ ಹನಿ ಇದೆ ಎಂಬುದನ್ನು ನಾವು ನೆನಪು ಮಾಡಿಕೊಳ್ಳುವ ದಿನವಾಗಿರಲಿದೆ.
ಹೀಗೆ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ ಆರಂಭವಾಗುವುದು ಶಾಲೆಗಳಿಂದ. ಶಾಲೆಯಲ್ಲಿ ಇದೊಂದು ಹಬ್ಬವೇ. ಅಂದು ಮಕ್ಕಳು ಕೇಸರಿ ಬಿಳಿ ಹಸಿರು ಬಣ್ಣದ ಬಟ್ಟೆ ಧರಿಸಿ ಧ್ವಜಾರೋಹಣ ಸೆರವೇರಿಸಿ ರಾಷ್ಟ್ರಗೀತೆ ಹಾಡಿ ಸ್ವಾತಂತ್ರ್ಯ ಹೋರಾಟಗಾರರ ನೆನೆಯುತ್ತಾರೆ. ಅವರಲ್ಲೂ ಸ್ವಾತಂತ್ರ್ಯದ ಕುರಿತಾದ ಅರಿವು ಮೂಡಿಸುವ ಪ್ರಯತ್ನ ಇದಾಗಿರಲಿದೆ.

ಇನ್ನು ಈ ಸ್ವಾತಂತ್ರ್ಯೋತ್ಸವ ವೇಳೆ ಪ್ಲಾಸ್ಟಿಕ್ ಬಾವುಟಗಳ ಬಳಸುವುದು ನಾವು ನೋಡಿದ್ದೇವೆ. ಆದರೆ ಈ ಪ್ಲಾಸ್ಟಿಕ್ ಧ್ವಜ ಪರಿಸರಕ್ಕೂ ಒಳ್ಳೆಯದಲ್ಲ ಜೊತೆಗೆ ನಾವು ಎಲ್ಲೆಂದರಲ್ಲಿ ಎಸೆಯುತ್ತೇವೆ, ಇದು ರಾಷ್ಟ್ರ ಧ್ವಜಕ್ಕೆ ಅಗೌರವ ಸೂಚಿಸಿದಂತೆ. ಹೀಗಾಗಿ ಎಲ್ಲರೂ ಪ್ಲಾಸ್ಟಿಕ್ ಮುಕ್ತ ಭಾವುಟ ಬಳಸುವುದು ಉತ್ತಮ. ಹಾಗಾದ್ರೆ ನೈಸರ್ಗಿಕವಾಗಿ ಭಾವುಟ ತಯಾರಿಸುವುದು ಹೇಗೆ? ಮನೆಯಲ್ಲೇ ಭಾವುಟ ತಯಾರಿಸಿ ನಿಮ್ಮ ಮಕ್ಕಳ ಕೈಗೆ ನೀಡಿದರೆ ಅವರಿಗೂ ಪರಿಸರದ ಬಗ್ಗೆ ಕಾಳಜಿ ಮೂಡುತ್ತೆ ಜೊತೆಗೆ ಎಲ್ಲರಲ್ಲೂ ಇದು ಜಾಗೃತಿ ಮೂಡಿಸುತ್ತದೆ.
ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಈ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಮನೆಯಲ್ಲೇ ಬಾಳೆ ಎಲೆ ಬಳಸಿ ಹೇಗೆ ತ್ರಿವರ್ಣ ಧ್ವಜ ತಯಾರಿಸಬಹುದು ಎಂಬುದನ್ನು ವಿಡಿಯೋದಲ್ಲಿ ವಿವರಿಸಲಾಗಿದ್ದು, ನೋಡಿದವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಪರಿಸರಕ್ಕೂ ಹಾನಿಯಿಲ್ಲದೆ ನೋಡಲು ಸುಂದರವಾಗಿ ಹಾಗೂ ಮಣ್ಣಿನಲ್ಲಿ ಕರಗುವಂತಹ ಈ ಭಾವುಟ ಎಲ್ಲರ ಗಮನ ಸೆಳೆಯುತ್ತಿದೆ.
@priyas.artwork ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ವಿಡಿಯೋ ಈಗ ಬರೋಬ್ಬರಿ 7 ಮಿಲಿಯನ್ಗೂ ಅಧಿಕ ವೀಕ್ಷಣೆ ಕಂಡಿದ್ದು, ಎಲ್ಲರ ಮೆಚ್ಚುಗೆ ಗಳಿಸಿದೆ. ಎಲ್ಲರೂ ಈ ರೀತಿ ಪರಿಸರ ಸ್ನೇಹಿ ಭಾವುಟ ಮಾಡಿ ತಮ್ಮ ಮಕ್ಕಳಿಗೆ ನೀಡುವಂತೆ ಸಲಹೆ ನೀಡಿದ್ದಾರೆ.
ವಿಡಿಯೋದಲ್ಲಿ ವಿವರಿಸಿದ್ದಂತೆ ಮೊದಲು ಒಂದು ದೊಡ್ಡ ಬಾಳೆ ಎಲೆ ತೆಗೆದುಕೊಂಡು ಅದರ ಮಧ್ಯದಿಂದ ಅರ್ಧ ದಂಟು ಇರುವಂತೆ ನೋಡಿಕೊಂಡು ಕತ್ತರಿಸಿಕೊಳ್ಳಬೇಕು. ಬಳಿಕ ಅದರ ದಂಟಿಗೆ ನೀಲಿ ಬಣ್ಣ ಬಳಿಯಬೇಕು. ಬಾವುಟದ ಆಕಾರವಾಗಿ ಕೇಸರಿ, ಬಿಳಿ, ಹಸಿರು ಬಣ್ಣ ಬಳಿದು ಮಧ್ಯದಲ್ಲಿ ಸಣ್ಣದಾಗಿ ಅಶೋಕ ಚಕ್ರವನ್ನು ಬಿಡಿಸಬೇಕು. ಇಷ್ಟಾದರೆ ನಿಮ್ಮ ಮುಂದೆ ನೈಸರ್ಗಿಕ ಭಾವುಟ ರೆಡಿಯಾಗುತ್ತದೆ.
ಇಂತಹ ಭಾವುಟಗಳು ಈಗ ಮಾರುಕಟ್ಟೆಗೂ ಲಗ್ಗೆ ಇಟ್ಟಿವೆ, ಪರಿಸರ ಸ್ನೇಹಿ ವಸ್ತುಗಳ ಮೇಲೆ ಹೆಚ್ಚು ಜನರು ಒಲವು ತೋರಿಸಲು ಮುಂದಾದ ಪರಿಣಾಮ ಈಗ ಹೆಚ್ಚಿನವರು ಇಂತಹ ವಸ್ತುಗಳ ಖರೀದಿಗೆ ಮುಂದಾಗುತ್ತಿದ್ದಾರೆ. ಈ ಸಾಲಿಗೆ ಬಾಳೆ ಎಲೆಯ ಭಾವುಟ ಸಹ ಸೇರಿಕೊಂಡಿದೆ. ಈ ವಿಡಿಯೋ ನೋಡಿದ ಮಂದಿ ಈ ಬಾರಿಯ ಸ್ವಾತಂತ್ರ್ಯೋತ್ಸವದಂದು ಈ ಪರಿಸರ ಸ್ನೇಹಿ ಭಾವುಟ ನಾವು ಸಹ ಮಾಡಿ ಕೈ ಜೋಡಿಸೋಣ ಎನ್ನುತ್ತಿದ್ದಾರೆ.
ಮಕ್ಕಳು ಸಹ ಇಂತಹ ಭಾವುಟ ಕೈಯಲ್ಲಿ ಹಿಡಿದು ಪರಿಸರ ಸ್ನೇಹಿಯಾಗಿರುವ ಕುರಿತು ಜಾಗೃತಿ ಮೂಡಿಸುವ ವ್ಯಕ್ತಿಗಳಾಗುತ್ತಾರೆ. ಇತ್ತ ಬೆಲೆಯಲ್ಲೂ ತುಂಬಾನೆ ಕಡಿಮೆಯಾಗುತ್ತದೆ. ನೀವು ಮಾರುಕಟ್ಟೆಯಲ್ಲಿ 10 ರೂಪಾಯಿಯಿಂದ ಸಾವಿರ ರೂಪಾಯಿಯ ಭಾವುಟವನ್ನೂ ಸಹ ನೋಡಬಹುದು. ಆದ್ರೆ ಇದು ಕಡಿಮೆ ಖರ್ಚಿನಲ್ಲಿ ಸುಂದರವಾದ ಭಾವುಟ ಮಾಡುವ ದಾರಿಯಾಗಿದೆ.



Click it and Unblock the Notifications