Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ರಾಮಮಂದಿರ ಆವರಣದಲ್ಲಿ ಗ್ಯಾಜೆಟ್ ಬ್ಯಾನ್..! ಡ್ರೆಸ್ ಕೋಡ್ ಇದೆಯೇ..?
ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಅಯೋಧ್ಯೆ ಸಹ ಹಬ್ಬದಂತೆ ಕಂಗೊಳಿಸುತ್ತಿದೆ. ರಾಮನ ದರ್ಶನಕ್ಕೆಂದು ಬರುವ ಭಕ್ತರಿಗೆ ಸಕಲ ಸೌಲಭ್ಯ ನೀಡಲು ಆಡಳಿತ ಸಿದ್ಧತೆಯಲ್ಲಿದೆ. ಇಡೀ ಹಿಂದೂ ಸಮಾಜ ಎದುರು ನೋಡುತ್ತಿರುವ ಈ ಸಮಯ ಇನ್ನೇನು ದಿನಗಳು ಮಾತ್ರ ಬಾಕಿ ಉಳಿದಿದೆ. ಸಂಕ್ರಾಂತಿ ನಂತರ ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳುತ್ತಿವೆ.
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ತೆರಳಲು ಇಚ್ಛಿಸುವವರು ಯಾವ ರೀತಿಯ ತಯಾರಿ ನಡೆಸಬೇಕು ಎಂಬುದನ್ನು ಟ್ರಸ್ಟ್ ತಿಳಿಸಿದೆ. ಜೊತೆಗೆ ರಾಮ ಆರತಿಯ ಸಮಯ, ಆರತಿ ಪಡೆಯುವ ವಿಧಾನ ಹೇಗೆ ಎಂಬ ಕುರಿತು ಮಾಹಿತಿ ಹಂಚಿಕೊಂಡಿದೆ. ತಮ್ಮ ಅಧಿಕೃತ ಸೈಟ್ನಲ್ಲಿ ರಾಮ ಆರತಿಗೆ ನೋಂದಾಯಿಸಲು ಸಹ ಅವಕಾಶ ನೀಡಲಾಗಿದೆ.

ಈ ನಡುವೆ ರಾಮಮಂದಿರ ಭೇಟಿಗೆ ಡ್ರೆಸ್ ಕೋಡ್ ಇದೆಯೇ? ಅಲ್ಲಿಗೆ ಯಾವ ಬಟ್ಟೆ ಧರಿಸಿಕೊಂಡು ಹೋಗಬೇಕು. ಯಾವ ರೀತಿ ತೆರಳಲು ಅವಕಾಶವಿಲ್ಲ ಎಂಬ ಪ್ರಶ್ನೆಗಳಿಗೂ ಟ್ರಸ್ಟ್ ಉತ್ತರ ನೀಡಿದೆ. ಹಾಗಾದ್ರೆ ರಾಮಮಂದಿರ ಡ್ರೆಸ್ ಕೋಡ್ಗಳ ಕುರಿತು ಇಲ್ಲಿದೆ ಮಾಹಿತಿ.
ಸಪ್ತಪುರಿ ಎಂದು ಕರೆಯಲ್ಪಡುವ ಭಾರತದ ಏಳು ನಗರಗಳನ್ನು ಹಿಂದೂಗಳಿಗೆ ಅತ್ಯಂತ ಪವಿತ್ರ ಯಾತ್ರಾ ಸ್ಥಳವೆಂದು ಪರಿಗಣಿಸಲಾಗಿದೆ. ಅಯೋಧ್ಯೆ, ಮಥುರಾ, ದ್ವಾರಕಾ, ವಾರಣಾಸಿ, ಹರಿದ್ವಾರ, ಉಜ್ಜಯಿನಿ ಮತ್ತು ಕಾಂಚೀಪುರಂಗಳನ್ನು ಒಳಗೊಂಡಿರುವ ಈ ನಗರಗಳನ್ನು ಮೋಕ್ಷದಾಯಿನಿ ಸಪ್ತಪುರಿಗಳು ಎಂದೂ ಕರೆಯಲಾಗುತ್ತದೆ.
ಜನವರಿ 22 ರಂದು, ಭಗವಾನ್ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದೆ. ಇದು ಅಯೋಧ್ಯೆಯ ಧಾರ್ಮಿಕ ಕೇಂದ್ರಬಿಂದುವಾಗಿ ಜಾಗತಿಕ ಗಮನವನ್ನು ಸೆಳೆಯುತ್ತದೆ. ನಿರೀಕ್ಷೆಯ ನಡುವೆ, ಅಯೋಧ್ಯೆಯಲ್ಲಿ ಭಗವಾನ್ ರಾಮನನ್ನು ಪೂಜಿಸಲು ಸೂಕ್ತವಾದ ಡ್ರೆಸ್ ಕೋಡ್ ಮತ್ತು ಉಡುಪಿನ ಮೂಲಕ ರಾಮ್ ಲಾಲ್ಲಾನ ದರ್ಶನದಲ್ಲಿ ಭಾಗಿಯಾಗಬಹುದು.
ಜನವರಿ 22 ರಂದು ನಡೆಯಲಿರುವ ರಾಮ್ ಲಲ್ಲಾ ಪಟ್ಟಾಭಿಷೇಕ ಸಮಾರಂಭದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಉತ್ತರ ಪ್ರದೇಶವು ಸುಧಾರಿತ ಭದ್ರತಾ ಉಪಕರಣಗಳು ಮತ್ತು ಮೂಲಸೌಕರ್ಯಕ್ಕಾಗಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಅನ್ನು ಸಂಯೋಜಿಸಲು 90 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲು ಸಿದ್ಧವಾಗಿದೆ.
ಅನೇಕ ದೇವಾಲಯಗಳು ಪ್ರವೇಶಕ್ಕಾಗಿ ನಿರ್ದಿಷ್ಟ ಡ್ರೆಸ್ ಕೋಡ್ಗಳನ್ನು ಜಾರಿಗೊಳಿಸಿದರೆ, ಅಯೋಧ್ಯೆಯ ರಾಮಮಂದಿರದ ಮೇಲ್ವಿಚಾರಣೆಯ ರಾಮಮಂದಿರ ಟ್ರಸ್ಟ್ ಯಾವುದೇ ನಿರ್ದಿಷ್ಟ ಡ್ರೆಸ್ ಕೋಡ್ ಅನ್ನು ಕಡ್ಡಾಯಗೊಳಿಸಿಲ್ಲ. ಯಾವುದೇ ಲಿಂಗ ಅಥವಾ ವಯಸ್ಸಿನ ವ್ಯಕ್ತಿಗಳು ಭಾರತೀಯ ಸಂಪ್ರದಾಯಕ್ಕೆ ಅನುಗುಣವಾಗಿ ದೇವಾಲಯವನ್ನು ಪ್ರವೇಶಿಸಲು ಅನುಮತಿಸಲಾಗಿದೆ. ರಾಮ ಮಂದಿರ ಟ್ರಸ್ಟ್ನ ಕಚೇರಿ ಉಸ್ತುವಾರಿ ಪ್ರಕಾಶ್ ಗುಪ್ತಾ, ಯಾವುದೇ ನಿಗದಿತ ಡ್ರೆಸ್ ಕೋಡ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ಆದರೆ ಭಕ್ತರು ಸಾಂಸ್ಕೃತಿಕ ಮಾನದಂಡಗಳಿಗೆ ಬದ್ಧರಾಗಿರಬೇಕೆಂದು ನಿರೀಕ್ಷಿಸಲಾಗಿದೆ, ದೇಹವನ್ನು ಸಂಪೂರ್ಣ ಮುಚ್ಚುವಂತಹ ಬಟ್ಟೆ ಧರಿಸಬೇಕು ಎಂದು ತಿಳಿಸಲಾಗಿದೆ.
ಎಲೆಕ್ಟ್ರಿಕ್ ಗ್ಯಾಜೆಟ್ ನಿಷೇಧ
ರಾಮಮಂದಿರದ ಆವರಣದೊಳಗೆ ಎಲ್ಲಾ ರೀತಿಯ ಎಲೆಕ್ಟ್ರಿಕ್ ಗ್ಯಾಜೆಟ್ಗಳನ್ನು ನಿಷೇಧಿಸಲಾಗಿದೆ. ಇಯರ್ಫೋನ್, ಮೊಬೈಲ್ ಫೋನ್,ಸ್ಮಾರ್ಟ್ ವಾಚ್, ರಿಮೋಟ್ ಕಿ ಸೇರಿ ಎಲ್ಲಾ ಎಲೆಕ್ಟ್ರಿಕ್ ಗ್ಯಾಜೆಟ್ ಬಳಕೆ ನಿಷೇಧಿಸಲಾಗಿದೆ. ಇದರ ಜೊತೆ ಎಲ್ಲಾ ಕಡೆಗಳಲ್ಲೂ ಭದ್ರತೆಯ ದೃಷ್ಟಿಯಿಂದ ನಿಯಮಗಳ ಪಾಲಿಸುವುದು ಕಡ್ಡಾಯವಾಗಿದೆ ಎಂದು ಟ್ರಸ್ಟ್ ತಿಳಿಸಿದೆ.
ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದಿರುವ ಕತೆ'
ಮೊಘಲ್ ಚಕ್ರವರ್ತಿ 1528 ಮತ್ತು 1529 ರ ನಡುವೆ ಬಾಬರಿ ಮಸೀದಿ ನಿರ್ಮಾಣ ಮಾಡಿದನು. ಆದರೆ ಹಿಂದೂಗಳು ಅದು ಶ್ರೀರಾಮನ ಜನ್ಮಸ್ಥಳವಾಗಿದ್ದು ಅದು ಹಿಂದೂಗಳಿಗೆ ಬೇಕೆಂದು ಸುದೀರ್ಘ ಕಾನೂನು ಹೋರಾಟ ಮಾಡಿದ ಬಳಿಕ 2019 ನವೆಂಬರ್ 9ಕ್ಕೆ ಸುಪ್ರೀಂಕೋರ್ಟ್ ವಿವಾದಿತ ಸ್ಥಳ ಹಿಂದೂಗಳಿಗೆ ಸೇರಿದ್ದು ಎಂದು ತೀರ್ಪು ನೀಡಿದ ಬಳಿಕ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿದೆ. ಆಗಸ್ಟ್ 5, 2020ರಲ್ಲಿ ಶಂಕುಸ್ಥಾಪನೆ ಮಾಡಿ ದೇವಾಲಯ ನಿರ್ಮಾಣ ಕಾರ್ಯ ಶುರು ಮಾಡಲಾಯ್ತು.



Click it and Unblock the Notifications