Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಕಾಡಿನಲ್ಲಿ ಸಿಕ್ಕವನೇ ಪಂದಳಕಂದ..! ಅಯ್ಯಪ್ಪನ ಕಥೆ ಗೊತ್ತಾ..?
ಶಬರಿಮಲೆ...ಹಿಂದೂಗಳಿಗೆ ಅತ್ಯಂತ ಪವಿತ್ರ ಸ್ಥಳ. ಜನವರಿ ತಿಂಗಳಲ್ಲಿ ಲಕ್ಷ ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆಯಲು ಬರುತ್ತಾರೆ. ಆದರೆ ಇಲ್ಲಿಗೆ ಬರುವ ಮುನ್ನ ಅವರು ಅತ್ಯಂತ ಕಠಿಣ ವ್ರತ ಪಾಲಿಸಿರುತ್ತಾರೆ. ಅಯ್ಯಪ್ಪನ ಸನ್ನಿದಾನದಲ್ಲಿರುವ 18 ಮೆಟ್ಟಿಲುಗಳ ಏರಬೇಕೆಂಬುದು ಭಕ್ತಾಧಿಗಳ ಮಹದಾಸೆಯಾಗಿರುತ್ತೆ. ಇದಕ್ಕಾಗಿ ವರ್ಷವೆಲ್ಲಾ ಭಕ್ತರು ಕಾಯುತ್ತಾರೆ.
ಇಂತಹ ಲಕ್ಷಾಂತರ ಭಕ್ತಾಧಿಕಗಳ ಸಂಪಾದಿಸಿರುವ ಈ ಅಯ್ಯಪ್ಪಸ್ವಾಮಿ ಯಾರು? ಹೇಗೆ ಈ ದೇವಾಲಯ ಹುಟ್ಟಿಕೊಂಡಿತು. ಏನಿದು ಅಯ್ಯಪ್ಪನ ಸ್ವಾಮಿಯ ಕಥೆ? ಈ ಎಲ್ಲಾ ಪ್ರಶ್ನೆಗಳಿಗೂ ನಾವಿಲ್ಲಿ ಉತ್ತರ ಹುಡುಕುವ ಪ್ರಯತ್ನ ಮಾಡಿದ್ದೇವೆ.

ಕಾಡಿನಲ್ಲಿ ಸಿಕ್ಕ ಮಗು ಈ ಪಂದಳ ರಾಜ
ಶಬರಿಮಲೆಯಲ್ಲಿರುವ ಪ್ರಧಾನ ದೇವರಾದ ಅಯ್ಯಪ್ಪನ ಕಥೆಯು ಪಾಂಡ್ಯ ರಾಜವಂಶದಿಂದ ಬೇರ್ಪಟ್ಟ ನಂತರ ಪತ್ತನಂತಿಟ್ಟದ ಇಂದಿನ ಭಾಗಗಳಲ್ಲಿ ನೆಲೆಸಿದ್ದ ಪಂದಳಂ ರಾಜವಂಶಕ್ಕೆ ಸಂಬಂಧಿಸಿದೆ. ಪಂದಳಂನ ರಾಜ ಮತ್ತು ರಾಣಿಗೆ ಮಕ್ಕಳಿರಲಿಲ್ಲವಂತೆ. ರಾಜನು ಒಂದು ದಿನ ಬೇಟೆಯಾಡಲು ಹೋದಾಗ, ಕಾಡಿನಲ್ಲಿ ನದಿಯ ಪಕ್ಕದಲ್ಲಿ ಅಳುತ್ತಿರುವ ಮಗುವನ್ನು ಕಂಡು ಅದನ್ನು ಎತ್ತಿಕೊಳ್ಳುತ್ತಾನೆ.
ಬಳಿಕ ನದಿ ಸುತ್ತಲೂ ಮಗುವಿನ ಪೋಷಕರಿಗಾಗಿ ಅಲೆದಾಡುತ್ತಾನೆ. ಈ ಅಲೆದಾಟದ ವೇಳೆ ರಾಜನ ಕಣ್ಣಿಗೆ ಓರ್ವ ಮುನಿ ಸಿಗುತ್ತಾನೆ. ಆತ ಈ ಮಗುವನ್ನೂ ನೀನೇ ಸಾಕಿ ಸಲಹುವಂತೆ ಸೂಚಿಸುತ್ತಾನೆ. ಋಷಿ ಮುನಿಯ ಮಾತಿನಂತೆ ರಾಜ ಸಿಕ್ಕ ಮಗುವನ್ನು ಅರಮನೆಗೆ ತಂದು ಸಾಕುತ್ತಾನೆ. ಬಳಿಕ ಆ ಮಗು ಮಣಿಕಂಠ ಆಗಿ ಪಂದಳಂನ ರಾಜಕುಮಾರನಾಗುತ್ತಾನೆ.
ಮಣಿಕಂಠ 12 ವರ್ಷದವನಾಗಿದ್ದಾಗ, ಪಂದಳಂನ ರಾಣಿ ಹಠಾತ್ ಅನಾರೋಗ್ಯಕ್ಕೆ ಒಳಗಾದಳು. ಆದರೆ ಆಕೆಯ ಚಿಕಿತ್ಸೆಗೆ ಹುಲಿ ಹಾಲಿನ ಅಗತ್ಯವಿದೆ ಎಂದು ವೈದ್ಯರು ತಿಳಿಸಿದಾಗ ಒಂದು ಕ್ಷಣವೂ ಯೋಚಿಸದೆ ಮಠಿಕಂಠ ಹುಲಿ ಹಾಲು ತರಲೆಂದು ಕಾಡಿಗೆ ತೆರಳುತ್ತಾನೆ. ಆದರೆ ವಾಪಾಸು ಬರುವಾಗ ಹುಲಿ ಮೇಲೆ ಸವಾರಿ ಮಾಡುವುದು ಮಾತ್ರವಲ್ಲ ಹತ್ತಾರು ಹುಲಿ ಮರಿಗಳನ್ನು ತನ್ನೊಡನೆ ಕರೆತರುತ್ತಾನೆ.
ಇದನ್ನು ಕಂಡ ರಾಜ ದಂಗಾಗುತ್ತಾನೆ. ಆತ ಸಮಾನ್ಯ ವ್ಯಕ್ತಿಯಲ್ಲ ಎಂದು ಭಾವಿಸುತ್ತಾನೆ. ಹೀಗಾಗಿ ರಾಜ ತನ್ನೆಲ್ಲಾ ಸಂಪತ್ತನ್ನು ಆತನಿಗೆ ಅರ್ಪಿಸಲು ಮುಂದಾಗುತ್ತಾನೆ. ಅಲ್ಲದೆ ಅರಮನೆಯಿಂದ 30 ಕಿ.ಮೀ ದೂರದಲ್ಲಿರುವ ಕಾಡಿನ ಬೆಟ್ಟದಲ್ಲಿ ಮಣಿಕಂಠನಿಗಾಗಿ ದೇವಾಲಯ ನಿರ್ಮಿಸುತ್ತಾನೆ. ಈ ದೇವಾಲಯ ಶಬರಿಮಲೆಯಾಗಿ ಕರೆಯಲ್ಪಟ್ಟಿತ್ತು. ಮಣಿಕಂಠ ದೈವಿ ಸ್ವರೂಪನಾಗಿ ಅಯ್ಯಪ್ಪ ಎಂಬ ಹೆಸರಿನಿಂದ ಕರೆಯಲ್ಪಡುತ್ತಾನೆ.
ಶಬರಿಮಲೆ ಹುಟ್ಟಿನ ಮತ್ತೊಂದು ಕಥೆ
ರಾಣಿಗೆ ಮಣಿಕಂಠ ಮುಂದಿನ ರಾಜನಾಗುವುದನ್ನು ನೋಡಲು ಇಷ್ಟವಿರಲಿಲ್ಲವಂತೆ ಹೀಗಾಗಿ ಆಕೆ ಸುಳ್ಳು ಕಾಯಿಲೆಯ ನೆಪ ಹೇಳಿ ಅಯ್ಯಪ್ಪನನ್ನು ಕಾಡಿಗೆ ಹುಲಿಯ ಹಾಲು ತರಲು ಕಳುಹಿಸಿಲು ಮುಂದಾಗುತ್ತಾಳೆ. ಆತ ಕಾಡಿಗೆ ಹೋದರೆ ಹುಲಿ ಆತನ ಸಾಯಿಸಲಿದೆ ಎಂದು ಆಕೆ ಭಾವಿಸಿದ್ದಳಂತೆ. ಆದರೆ ಅಯ್ಯಪ್ಪನು ಹುಲಿಯ ಹಾಲಿನೊಂದಿಗೆ ರಾಜ್ಯಕ್ಕೆ ಮರಳುವಾಗ ಹುಲಿಯ ಮೇಲೆ ಕೂತು ಒಂದಿಷ್ಟು ಹುಲಿಗಳ ಗುಂಪಿನೊಂದಿಗೆ ಬರುತ್ತಾನೆ.
ಬಳಿಕ ಈ ಪಟ್ಟದ ಆಸೆ ಬೇಡವೆಂದು ಅಯ್ಯಪ್ಪನೇ ತಿರಸ್ಕರಿಸುತ್ತಾನೆ. ಆದರೆ ಆತನ ಕೋರಿಕೆಯಂತೆ ತಾನು ಬಿಟ್ಟ ಬಾಣ ಎಲ್ಲಿಗೆ ತಲುಪುತ್ತದೆಯೋ ಅಲ್ಲಿ ನೆಲೆಸುವುದಾಗಿ ಆತ ಹೇಳುತ್ತಾನೆ. ಹೀಗೆ ಮಣಿಕಂಠ ಬಿಟ್ಟ ಬಾಣ ಬೆಟ್ಟದಲ್ಲಿ ನೆಲೆಗೊಂಡು ಮುಂದೆ ಅದು ಶಬರಿಮಲೆಯಾಗುತ್ತದೆ ಎಂಬ ಪುರಾಣ ಕಥೆಯೂ ಇದೆ.
ಶಬರಿಮಲೆ ಇರುವುದೆಲ್ಲಿ?
ಕೇರಳದ ಇಂದಿನ ಪಥನಂತಿಟ್ಟ ಜಿಲ್ಲೆಯಲ್ಲಿ ಶಬರಿಮಲೆ ಅಯ್ಯಪ್ಪ ದೇಗುಲವಿದೆ. ಸಮುದ್ರ ಮಟ್ಟದಿಂದ ಸುಮಾರು 3000 ಅಡಿ ಎತ್ತರದ ಬೆಟ್ಟದಲ್ಲಿ ಅಯ್ಯಪ್ಪ ಸ್ವಾಮಿಯ ದೇವಾಲಯವಿದೆ. ದೇವಸ್ಥಾನ ತಲುಪಲು ಬೆಟ್ಟದ ಕಳೆಭಾಗವಾದ ಪಂಬಾದಿಂದ ಚಾರಣ ಮಾಡಬೇಕಿದೆ. ಈ ದಾರಿ ಅತ್ಯಂತ ಕಠಿಣ ಸವಾಲಾಗಿದ್ದು, ಕಲ್ಲು, ಮುಳ್ಳು ದಾಟಿ ಬೆಟ್ಟವನ್ನು ಹತ್ತಬೇಕಾಗುತ್ತದೆ.



Click it and Unblock the Notifications
