Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ: ಜಾಹೀರಾತು ವೈರಲ್..! ಏನಿದು ಸಂಪ್ರದಾಯ ಗೊತ್ತಾ
ಹುಡುಗ ಹುಡುಗಿಗೆ ಮದುವೆ ಮಾಡಲು ಕುಟುಂಬಸ್ಥರು ವಧು ವರರ ಅನ್ವೇಷಣೆ ಕೇಂದ್ರ ಅಥವಾ ಬ್ರೋಕರ್ ಇಲ್ಲದಿದ್ದರೆ ಪತ್ರಿಕೆಯಲ್ಲಿ ಜಾಹೀರಾತು ಸಹ ನೀಡುತ್ತಾರೆ. ಆದ್ರೆ ಮೃತಪಟ್ಟವರಿಗೆ ಮದುವೆ ಮಾಡೋ ಸಂಪ್ರದಾಯದ ಕುರಿತು ಎಂದಾದ್ರು ಕೇಳಿದ್ದೀರಾ? ಹೌದು ರಾಜ್ಯದಲ್ಲಿ ಇಂತಹದೊಂದು ಜಾಹೀರಾತು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಪ್ರೇತ ಮದುವೆಯ ಕುರಿತ ಚರ್ಚೆ ಆರಂಭವಾಗಿದೆ.
ಹೌದು ಮಲೆನಾಡು, ಕರಾವಳಿ ಭಾಗದಲ್ಲಿ ಈಗಲೂ ಈ ಪ್ರೇತ ಮದುವೆ ನಡೆಯುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಮರೆಯಾಗಿದ್ದ ಈ ಮದುವೆ, ಈಗ ದಿನಪತ್ರಿಕೆಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದೆ. ದಿನಪತ್ರಿಕೆಯೊಂದರಲ್ಲಿ ಪ್ರೇತ ಮದುವೆಗೆ ವರ ಬೇಕಿದೆ ಎನ್ನುವ ಜಾಹೀರಾತು ಪ್ರಕಟವಾಗಿದ್ದು ಓದುಗರನ್ನು ಅಚ್ಚರಿಗೆ ತಳ್ಳಿದೆ.

"ಬಂಗೇರ ಬದಿಯ 30 ವರ್ಷಗಳ ಹಿಂದೆ ತೀರಿ ಹೋದ ಹೆಣ್ಣು ಮಗುವಿಗೆ ಅದೇ ಜಾತಿಯ ಇತರ ಬದಿಯ 30 ವರ್ಷಗಳ ಹಿಂದೆ ತೀರಿಹೋದ ಗಂಡಿನ ಮನೆಯವರು ಪ್ರೇತ ಮದುವೆ ಮಾಡಿಸಲು ತಯಾರಿದ್ದರೆ, ದಯವಿಟ್ಟು ಸಂಪರ್ಕಿಸಿ" ಎಂದು ಜಾಹೀರಾತು ನೀಡಲಾಗಿದೆ.
ಏನಿದು ಏನಿದು ಪ್ರೇತ ಮದುವೆ? ಮದುವೆ ಸಂಪ್ರದಾಯ ಹೇಗೆ?
ಯಾರ ಮನೆಯಲ್ಲಾದರು ಮದುವೆಗೆ ಮುನ್ನವೇ ಹುಡುಗ ಅಥವಾ ಹುಡುಗಿ ಮೃತಪಟ್ಟರೆ ಅವರು ಮದುವೆ ವಯಸ್ಸಿಗೆ ಬಂದಾಗ ಮದುವೆ ಮಾಡಬೇಕು ಎಂದು ನಂಬಲಾಗಿದೆ. ಅವರು ಮದುವೆಯಾಗದಿದ್ದರೆ ಅವರ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ, ಬದಲಿಗೆ ಕುಟುಂಬಸ್ಥರಿಗೆ ಕಾಡುತ್ತಾರೆ ಎಂದು ನಂಬಲಾಗಿದೆ.
ಅಲ್ಲದೆ ಆ ಕುಟುಂಬದಲ್ಲಿ ಯಾವ ಶುಭ ಕಾರ್ಯವನ್ನೂ ಮಾಡಲು ಈ ಪ್ರೇತಗಳು ಬಿಡುವುದಿಲ್ಲ ಎಂದು ನಂಬಲಾಗಿದೆ. ಹೀಗಾಗಿ ಈ ಸಮಸ್ಯೆಗಳಿಂದ ದೂರಾಗಲು ಪ್ರೇತ ಮದುವೆ ಮಾಡಿಸಲಾಗುತ್ತದೆ. ಆ ಪ್ರೇತಗಳನ್ನು ಸಂತೃಪ್ತಿಪಡಿಸಲು ಮದುವೆ ಮಾಡಿಸಲು ಆ ಕುಟುಂಬದವರು ಮುಂದಾಗುತ್ತಾರೆ. ಇದರಿಂದ ತಮ್ಮ ಕುಟುಂಬಕ್ಕಾಗಲಿ ಮುಂದಿನ ಪೀಳಿಗೆಗಾಲಿ ಯಾವುದೇ ತೊಂದರೆ ಬರುವುದಿಲ್ಲ ಎನ್ನುವುದು ಉದ್ದೇಶವಾಗಿದೆ.
ಆದರೆ ಅದೇ ವಯಸ್ಸಿನ ಹುಡುಗ ಅಥವಾ ಹುಡುಗಿಯನ್ನು ಹುಡುಕಿ ಮದುವೆ ಮಾಡಿಸಬೇಕಾಗುತ್ತದೆ. ಅವರೂ ಸಹ ಮದುವೆಯಾಗದೇ ಮೃತಪಟ್ಟಿರಬೇಕಾಗುತ್ತದೆ. ಹೀಗಾಗಿ ವರನಿಗಾಗಿ ಹುಡುಗಿ ಮನೆಯವರು ಜಾಹೀರಾತು ನೀಡಿದ್ದಾರೆ. ಈ ಜಾಹೀರಾತು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಬಹುತೇಕ ಮಂದಿ ಈ ಪ್ರೇತ ಮದುವೆ ಕುರಿತು ಕೇಳದೆ ಇರುವವರು ಇದೇನು ವಿಚಿತ್ರ ಎಂದು ಹುಬ್ಬೇರಿಸಿದ್ದಾರೆ. ಅದರಲ್ಲೂ ಪ್ರೇತ ಮದುವೆ ಹೇಗೆ ಮಾಡುತ್ತಾರೆ ಎಂಬ ಗೊಂದಲಕ್ಕೆ ಬಿದ್ದಿದ್ದಾರೆ. ಜೀವ ಇರುವವರ ನಿಲ್ಲಿಸಿ ಮದುವೆ ಮಾಡುವುದಕ್ಕೂ ಪ್ರೇತಗಳಿಗೆ ಮದುವೆ ಮಾಡುವುದಕ್ಕೂ ಇರುವ ವ್ಯತ್ಯಾಸ ತಿಳಿಯದೆ ಮಂದಿ ತಲೆ ಕೆಡಿಸಿಕೊಂಡಿದ್ದಾರೆ.
ಈ ಮದುವೆ ನಡೆಯೋದು ಹೇಗೆ?
ಈ ಮದುವೆಯಲ್ಲಿ ಎರಡು ಪ್ರೇತಾತ್ಮಗಳಿಗೆ ಮದುವೆ ಮಾಡಲಾಗುತ್ತದೆ. ವಧು-ವರನಿಗೆ ಹಾಕಲಾಗುವ ಬಟ್ಟೆಗಳ ಇಟ್ಟು ಅದಕ್ಕೆ ಮದುವೆ ಮಾಡಿಸಲಾಗುತ್ತದೆ. ಅದರಲ್ಲೂ ಆಷಾಢದಲ್ಲಿಯೇ ಮದುವೆ ಮಾಡಿಸಲಾಗುತ್ತದೆ. ಸಂಪ್ರದಾಯದಂತೆ ಹುಡುಗಿಗೆ ರೇಷ್ಮೆ ಸೀರೆ, ತಾಳಿ, ಹೂವು ಮತ್ತು ಹುಡುಗನಿಗೆ ಪಂಚೆ, ಶಲ್ಯ ಎಲ್ಲವನ್ನೂ ತಂದು ಮದುವೆ ಮಾಡಲಾಗುತ್ತದೆ. ಮದುವೆ ಬಳಿಕ ಅತಿಥಿಗಳಿಗೆ ಊಟ ಕೂಡ ಹಾಕಲಾಗುತ್ತದೆ. ಆದರೆ ಹುಡುಗ ಹುಡುಗಿ ಮಾತ್ರ ಕಣ್ಣ ಮುಂದೆ ಕಾಣಸಿಗುವುದಿಲ್ಲ. ಆದರೆ ಈ ಮದುವೆ ಶಾಸ್ತ್ರೋಕ್ತವಾಗಿ ನಡೆದರೆ ಈ ಪ್ರೇತ ಕಾಟದಿಂದ ಮುಕ್ತಿ ಸಿಗುತ್ತದೆ ಎಂಬ ನಂಬಿಕೆ ಇದೆ.
ಈ ಜಾಹೀರಾತು ನೋಡಿದ ಮಂದಿ ನಿಜಕ್ಕೂ ಆಘಾತಕ್ಕೊಳಗಾಗಿದ್ದಾರೆ. ಪ್ರೇತ ಮದುವೆ ಬಿಡಿ ಬದುಕಿರುವ ಮಂದಿಗೆ ಮದುವೆಯಾಗುತ್ತಿಲ್ಲ ಎಂದು ಸಂಕಷ್ಟ ತೋಡಿಕೊಂಡಿದ್ದಾರೆ.



Click it and Unblock the Notifications









