Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ: ಜಾಹೀರಾತು ವೈರಲ್..! ಏನಿದು ಸಂಪ್ರದಾಯ ಗೊತ್ತಾ
ಹುಡುಗ ಹುಡುಗಿಗೆ ಮದುವೆ ಮಾಡಲು ಕುಟುಂಬಸ್ಥರು ವಧು ವರರ ಅನ್ವೇಷಣೆ ಕೇಂದ್ರ ಅಥವಾ ಬ್ರೋಕರ್ ಇಲ್ಲದಿದ್ದರೆ ಪತ್ರಿಕೆಯಲ್ಲಿ ಜಾಹೀರಾತು ಸಹ ನೀಡುತ್ತಾರೆ. ಆದ್ರೆ ಮೃತಪಟ್ಟವರಿಗೆ ಮದುವೆ ಮಾಡೋ ಸಂಪ್ರದಾಯದ ಕುರಿತು ಎಂದಾದ್ರು ಕೇಳಿದ್ದೀರಾ? ಹೌದು ರಾಜ್ಯದಲ್ಲಿ ಇಂತಹದೊಂದು ಜಾಹೀರಾತು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಪ್ರೇತ ಮದುವೆಯ ಕುರಿತ ಚರ್ಚೆ ಆರಂಭವಾಗಿದೆ.
ಹೌದು ಮಲೆನಾಡು, ಕರಾವಳಿ ಭಾಗದಲ್ಲಿ ಈಗಲೂ ಈ ಪ್ರೇತ ಮದುವೆ ನಡೆಯುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಮರೆಯಾಗಿದ್ದ ಈ ಮದುವೆ, ಈಗ ದಿನಪತ್ರಿಕೆಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದೆ. ದಿನಪತ್ರಿಕೆಯೊಂದರಲ್ಲಿ ಪ್ರೇತ ಮದುವೆಗೆ ವರ ಬೇಕಿದೆ ಎನ್ನುವ ಜಾಹೀರಾತು ಪ್ರಕಟವಾಗಿದ್ದು ಓದುಗರನ್ನು ಅಚ್ಚರಿಗೆ ತಳ್ಳಿದೆ.

"ಬಂಗೇರ ಬದಿಯ 30 ವರ್ಷಗಳ ಹಿಂದೆ ತೀರಿ ಹೋದ ಹೆಣ್ಣು ಮಗುವಿಗೆ ಅದೇ ಜಾತಿಯ ಇತರ ಬದಿಯ 30 ವರ್ಷಗಳ ಹಿಂದೆ ತೀರಿಹೋದ ಗಂಡಿನ ಮನೆಯವರು ಪ್ರೇತ ಮದುವೆ ಮಾಡಿಸಲು ತಯಾರಿದ್ದರೆ, ದಯವಿಟ್ಟು ಸಂಪರ್ಕಿಸಿ" ಎಂದು ಜಾಹೀರಾತು ನೀಡಲಾಗಿದೆ.
ಏನಿದು ಏನಿದು ಪ್ರೇತ ಮದುವೆ? ಮದುವೆ ಸಂಪ್ರದಾಯ ಹೇಗೆ?
ಯಾರ ಮನೆಯಲ್ಲಾದರು ಮದುವೆಗೆ ಮುನ್ನವೇ ಹುಡುಗ ಅಥವಾ ಹುಡುಗಿ ಮೃತಪಟ್ಟರೆ ಅವರು ಮದುವೆ ವಯಸ್ಸಿಗೆ ಬಂದಾಗ ಮದುವೆ ಮಾಡಬೇಕು ಎಂದು ನಂಬಲಾಗಿದೆ. ಅವರು ಮದುವೆಯಾಗದಿದ್ದರೆ ಅವರ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ, ಬದಲಿಗೆ ಕುಟುಂಬಸ್ಥರಿಗೆ ಕಾಡುತ್ತಾರೆ ಎಂದು ನಂಬಲಾಗಿದೆ.
ಅಲ್ಲದೆ ಆ ಕುಟುಂಬದಲ್ಲಿ ಯಾವ ಶುಭ ಕಾರ್ಯವನ್ನೂ ಮಾಡಲು ಈ ಪ್ರೇತಗಳು ಬಿಡುವುದಿಲ್ಲ ಎಂದು ನಂಬಲಾಗಿದೆ. ಹೀಗಾಗಿ ಈ ಸಮಸ್ಯೆಗಳಿಂದ ದೂರಾಗಲು ಪ್ರೇತ ಮದುವೆ ಮಾಡಿಸಲಾಗುತ್ತದೆ. ಆ ಪ್ರೇತಗಳನ್ನು ಸಂತೃಪ್ತಿಪಡಿಸಲು ಮದುವೆ ಮಾಡಿಸಲು ಆ ಕುಟುಂಬದವರು ಮುಂದಾಗುತ್ತಾರೆ. ಇದರಿಂದ ತಮ್ಮ ಕುಟುಂಬಕ್ಕಾಗಲಿ ಮುಂದಿನ ಪೀಳಿಗೆಗಾಲಿ ಯಾವುದೇ ತೊಂದರೆ ಬರುವುದಿಲ್ಲ ಎನ್ನುವುದು ಉದ್ದೇಶವಾಗಿದೆ.
ಆದರೆ ಅದೇ ವಯಸ್ಸಿನ ಹುಡುಗ ಅಥವಾ ಹುಡುಗಿಯನ್ನು ಹುಡುಕಿ ಮದುವೆ ಮಾಡಿಸಬೇಕಾಗುತ್ತದೆ. ಅವರೂ ಸಹ ಮದುವೆಯಾಗದೇ ಮೃತಪಟ್ಟಿರಬೇಕಾಗುತ್ತದೆ. ಹೀಗಾಗಿ ವರನಿಗಾಗಿ ಹುಡುಗಿ ಮನೆಯವರು ಜಾಹೀರಾತು ನೀಡಿದ್ದಾರೆ. ಈ ಜಾಹೀರಾತು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಬಹುತೇಕ ಮಂದಿ ಈ ಪ್ರೇತ ಮದುವೆ ಕುರಿತು ಕೇಳದೆ ಇರುವವರು ಇದೇನು ವಿಚಿತ್ರ ಎಂದು ಹುಬ್ಬೇರಿಸಿದ್ದಾರೆ. ಅದರಲ್ಲೂ ಪ್ರೇತ ಮದುವೆ ಹೇಗೆ ಮಾಡುತ್ತಾರೆ ಎಂಬ ಗೊಂದಲಕ್ಕೆ ಬಿದ್ದಿದ್ದಾರೆ. ಜೀವ ಇರುವವರ ನಿಲ್ಲಿಸಿ ಮದುವೆ ಮಾಡುವುದಕ್ಕೂ ಪ್ರೇತಗಳಿಗೆ ಮದುವೆ ಮಾಡುವುದಕ್ಕೂ ಇರುವ ವ್ಯತ್ಯಾಸ ತಿಳಿಯದೆ ಮಂದಿ ತಲೆ ಕೆಡಿಸಿಕೊಂಡಿದ್ದಾರೆ.
ಈ ಮದುವೆ ನಡೆಯೋದು ಹೇಗೆ?
ಈ ಮದುವೆಯಲ್ಲಿ ಎರಡು ಪ್ರೇತಾತ್ಮಗಳಿಗೆ ಮದುವೆ ಮಾಡಲಾಗುತ್ತದೆ. ವಧು-ವರನಿಗೆ ಹಾಕಲಾಗುವ ಬಟ್ಟೆಗಳ ಇಟ್ಟು ಅದಕ್ಕೆ ಮದುವೆ ಮಾಡಿಸಲಾಗುತ್ತದೆ. ಅದರಲ್ಲೂ ಆಷಾಢದಲ್ಲಿಯೇ ಮದುವೆ ಮಾಡಿಸಲಾಗುತ್ತದೆ. ಸಂಪ್ರದಾಯದಂತೆ ಹುಡುಗಿಗೆ ರೇಷ್ಮೆ ಸೀರೆ, ತಾಳಿ, ಹೂವು ಮತ್ತು ಹುಡುಗನಿಗೆ ಪಂಚೆ, ಶಲ್ಯ ಎಲ್ಲವನ್ನೂ ತಂದು ಮದುವೆ ಮಾಡಲಾಗುತ್ತದೆ. ಮದುವೆ ಬಳಿಕ ಅತಿಥಿಗಳಿಗೆ ಊಟ ಕೂಡ ಹಾಕಲಾಗುತ್ತದೆ. ಆದರೆ ಹುಡುಗ ಹುಡುಗಿ ಮಾತ್ರ ಕಣ್ಣ ಮುಂದೆ ಕಾಣಸಿಗುವುದಿಲ್ಲ. ಆದರೆ ಈ ಮದುವೆ ಶಾಸ್ತ್ರೋಕ್ತವಾಗಿ ನಡೆದರೆ ಈ ಪ್ರೇತ ಕಾಟದಿಂದ ಮುಕ್ತಿ ಸಿಗುತ್ತದೆ ಎಂಬ ನಂಬಿಕೆ ಇದೆ.
ಈ ಜಾಹೀರಾತು ನೋಡಿದ ಮಂದಿ ನಿಜಕ್ಕೂ ಆಘಾತಕ್ಕೊಳಗಾಗಿದ್ದಾರೆ. ಪ್ರೇತ ಮದುವೆ ಬಿಡಿ ಬದುಕಿರುವ ಮಂದಿಗೆ ಮದುವೆಯಾಗುತ್ತಿಲ್ಲ ಎಂದು ಸಂಕಷ್ಟ ತೋಡಿಕೊಂಡಿದ್ದಾರೆ.



Click it and Unblock the Notifications