Latest Updates
-
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ! -
ಶಾಖದ ಅಲೆ ಎಚ್ಚರಿಕೆ: ಎಸಿ ಇಲ್ಲದೆ ಮನೆಯನ್ನು ತಂಪಾಗಿಡಲು ಮತ್ತು ನಿಮ್ಮ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ಪಾನೀಯ ಮತ್ತು ಆಹಾರವೇ ಸಂಜೀವಿನಿ! -
ಸೀರೆ ಉಡೋದ್ರಲ್ಲಿ ಹೊಸ ಕ್ರಾಂತಿ: ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗ್ತಿರೋ 'ದೇಸಿ-ಕೋರ್' ಸೀರೆ ಸ್ಟೈಲ್ಸ್ ಮಿಸ್ ಮಾಡ್ಬೇಡಿ!
ಈ ವಾರ ಗುರು ಪೂರ್ಣಿಮಾ ಸೇರಿ 4 ಪ್ರಮುಖ ವ್ರತಗಳಿವೆ, ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವದ್ದಾಗಿವೆ
ಈ ವಾರ ಯಾವೆಲ್ಲಾ ಪ್ರಮುಖ ವ್ರತಗಳಿವೆ, ಈ ವ್ರತಗಳ ವೈಶಿಷ್ಠ್ಯತೆಯೇನು ಎಂದು ನೋಡೋಣ ಬನ್ನಿ:
ಜುಲೈ 2: ಕೋಕಿಲ ವ್ರತ
ಕೋಕಿಲ ವ್ರತವನ್ನು ಆಷಾಢಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಆಚರಿಸುತ್ತೇವೆ. ಈ ದಿನ ಉಪವಾಸವಿದ್ದು ಆದಿಶಕ್ತಿಯ ಆರಾಧನೆ ಮಾಡಲಾಗುವುದು. ಈ ವ್ರತವನ್ನು ಅವಾಹಿತ ಮಹಿಳೆಯರು ಮಾಡಿದರೆ ಮದುವೆಗೆ ಇರುವ ಅಡೆತಡೆ ದೂರಾಗುವುದು. ವಿವಾಹಿತರು ಪಾಲಿಸುವುದರಿಂದ ವೈವಾಹಿಕ ಜೀವನದಲ್ಲಿರುವ ಸಮಸ್ಯೆ ದೂರಾಗುವುದು.

ಜುಲೈ 3: ಗುರು ಪೂರ್ಣಿಮಾ, ವ್ಯಾಸ ಪೂಜೆ, ಆಷಾಢ ಪೂರ್ಣಿಮಾ ವ್ರತ
ವ್ಯಾಸರ ನೆನಪಿಗಾಗಿ ಈ ದಿವವನ್ನು ಆಚರಿಸಲಾಗುತ್ತದೆ. ನಾಲ್ಕು ವೇದಗಳನ್ನು, 18 ಪುರಾಣಗಳನ್ನು ಮಹಾಭಾರತ ಮತ್ತು ಶ್ರೀಮದ್ಭಾಗವತವನ್ನು ರಚಿಸಿದವರು ವೇದವ್ಯಾಸರು. ಬೌದ್ಧರಿಗೂ ಗುರು ಪೂರ್ಣಿಮೆ ಮಹತ್ವದ ದಿನವಾಗಿದೆ. ಸಾಂಪ್ರದಾಯಿಕವಾಗಿ ಬೌದ್ಧರು ಬುದ್ಧನಿಗೆ ಗೌರವ ಅರ್ಪಿಸುವ ದಿನವನ್ನಾಗಿ ಗುರುಪೂರ್ಣಿಮೆಯನ್ನು ಆಚರಿಸುತ್ತಾರೆ. ಸಾರನಾಥದಲ್ಲಿ ಬುದ್ಧನು ಪ್ರಥಮ ಉಪದೇಶವನ್ನು ಮಾಡಿದರೆಂದು ಪ್ರತೀತಿ ಇದೆ. ಈ ದಿನ ಗುರುವಿನ ಪಾದ ಮುಟ್ಟಿ ಆಶೀರ್ವಾದ ಪಡೆದರೆ ಒಳ್ಳೆಯದು. ನಮ್ಮ ಬದುಕಿನಲ್ಲಿ ಸನ್ಮಾರ್ಗದಲ್ಲಿ ನಡೆಯಲು ಗುರುವಿನ ಸ್ಥಾನ ತುಂಬಾನೇ ಮುಖ್ಯ.
ಜುಲೈ 4: ಉತ್ತರ ಭಾರತದ ಕಡೆ ಶ್ರಾವಣ ಪ್ರಾರಂಭ : ಉತ್ತರ ಭಾರತದ ಪಂಚಾಂಗದ ಪ್ರಕಾರ ಜುಲೈ ಹಾಗೂ ಆಗಸ್ಟ್ ತಿಂಗಳು ಶ್ರಾವಣ ಮಾಸವಾಗಿದೆ.
ಜುಲೈ 6: ಗಜಾನನ ಸಂಕಷ್ಠಿ ಚತುರ್ದಶಿ: ಈ ದಿನ ವಿಘ್ನ ನಿವಾರಕನಾದ ವಿನಾಯಕನ ಪೂಜೆ ಮಾಡಲಾಗುವುದು. ಉಪವಾಸವಿದ್ದು ಗಣೇಶನ ಆರಾಧನೆ ಮಾಡುವುದರಿಂದ ಜೀವನದಲ್ಲಿ ಎಲ್ಲಾ ಒಳಿತಾಗಲಿದೆ. ಈ ದಿನ ಗಣೇಶನಿಗೆ ಗರಿಕೆಯನ್ನು ಅರ್ಪಿಸಿ ಆರಾಧನೆ ಮಾಡಿ.
ಜುಲೈ 7: ಆಷಾಢ ಶುಕ್ರವಾರ: ಆಷಾಢ ಮಾಸದ ಶುಕ್ರವಾರ ಲಕ್ಷ್ಮಿಯನ್ನು ಪೂಜಿಸುತ್ತಾರೆ. ಈ ದಿನ ಲಕ್ಷ್ಮಿ ಪೂಜೆ ಮಾಡುವುದರಿಂದ ಸಂಪತ್ತು ವೃದ್ಧಿಸಲಿದೆ. ತುಂಬಾ ಜನರು ಶ್ರಾವಣ ಶುಕ್ರವಾರದಂದು ಲಕ್ಷ್ಮಿ ವ್ರತ ಪ್ರಾರಂಭಿಸಿ ವರಲಕ್ಷ್ಮಿ ಪೂಜೆಯಂದು ಮುಕ್ತಾಯ ಮಾಡುತ್ತಾರೆ.



Click it and Unblock the Notifications