Latest Updates
-
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ
ಈ ವಾರ ಗುರು ಪೂರ್ಣಿಮಾ ಸೇರಿ 4 ಪ್ರಮುಖ ವ್ರತಗಳಿವೆ, ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವದ್ದಾಗಿವೆ
ಈ ವಾರ ಯಾವೆಲ್ಲಾ ಪ್ರಮುಖ ವ್ರತಗಳಿವೆ, ಈ ವ್ರತಗಳ ವೈಶಿಷ್ಠ್ಯತೆಯೇನು ಎಂದು ನೋಡೋಣ ಬನ್ನಿ:
ಜುಲೈ 2: ಕೋಕಿಲ ವ್ರತ
ಕೋಕಿಲ ವ್ರತವನ್ನು ಆಷಾಢಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಆಚರಿಸುತ್ತೇವೆ. ಈ ದಿನ ಉಪವಾಸವಿದ್ದು ಆದಿಶಕ್ತಿಯ ಆರಾಧನೆ ಮಾಡಲಾಗುವುದು. ಈ ವ್ರತವನ್ನು ಅವಾಹಿತ ಮಹಿಳೆಯರು ಮಾಡಿದರೆ ಮದುವೆಗೆ ಇರುವ ಅಡೆತಡೆ ದೂರಾಗುವುದು. ವಿವಾಹಿತರು ಪಾಲಿಸುವುದರಿಂದ ವೈವಾಹಿಕ ಜೀವನದಲ್ಲಿರುವ ಸಮಸ್ಯೆ ದೂರಾಗುವುದು.

ಜುಲೈ 3: ಗುರು ಪೂರ್ಣಿಮಾ, ವ್ಯಾಸ ಪೂಜೆ, ಆಷಾಢ ಪೂರ್ಣಿಮಾ ವ್ರತ
ವ್ಯಾಸರ ನೆನಪಿಗಾಗಿ ಈ ದಿವವನ್ನು ಆಚರಿಸಲಾಗುತ್ತದೆ. ನಾಲ್ಕು ವೇದಗಳನ್ನು, 18 ಪುರಾಣಗಳನ್ನು ಮಹಾಭಾರತ ಮತ್ತು ಶ್ರೀಮದ್ಭಾಗವತವನ್ನು ರಚಿಸಿದವರು ವೇದವ್ಯಾಸರು. ಬೌದ್ಧರಿಗೂ ಗುರು ಪೂರ್ಣಿಮೆ ಮಹತ್ವದ ದಿನವಾಗಿದೆ. ಸಾಂಪ್ರದಾಯಿಕವಾಗಿ ಬೌದ್ಧರು ಬುದ್ಧನಿಗೆ ಗೌರವ ಅರ್ಪಿಸುವ ದಿನವನ್ನಾಗಿ ಗುರುಪೂರ್ಣಿಮೆಯನ್ನು ಆಚರಿಸುತ್ತಾರೆ. ಸಾರನಾಥದಲ್ಲಿ ಬುದ್ಧನು ಪ್ರಥಮ ಉಪದೇಶವನ್ನು ಮಾಡಿದರೆಂದು ಪ್ರತೀತಿ ಇದೆ. ಈ ದಿನ ಗುರುವಿನ ಪಾದ ಮುಟ್ಟಿ ಆಶೀರ್ವಾದ ಪಡೆದರೆ ಒಳ್ಳೆಯದು. ನಮ್ಮ ಬದುಕಿನಲ್ಲಿ ಸನ್ಮಾರ್ಗದಲ್ಲಿ ನಡೆಯಲು ಗುರುವಿನ ಸ್ಥಾನ ತುಂಬಾನೇ ಮುಖ್ಯ.
ಜುಲೈ 4: ಉತ್ತರ ಭಾರತದ ಕಡೆ ಶ್ರಾವಣ ಪ್ರಾರಂಭ : ಉತ್ತರ ಭಾರತದ ಪಂಚಾಂಗದ ಪ್ರಕಾರ ಜುಲೈ ಹಾಗೂ ಆಗಸ್ಟ್ ತಿಂಗಳು ಶ್ರಾವಣ ಮಾಸವಾಗಿದೆ.
ಜುಲೈ 6: ಗಜಾನನ ಸಂಕಷ್ಠಿ ಚತುರ್ದಶಿ: ಈ ದಿನ ವಿಘ್ನ ನಿವಾರಕನಾದ ವಿನಾಯಕನ ಪೂಜೆ ಮಾಡಲಾಗುವುದು. ಉಪವಾಸವಿದ್ದು ಗಣೇಶನ ಆರಾಧನೆ ಮಾಡುವುದರಿಂದ ಜೀವನದಲ್ಲಿ ಎಲ್ಲಾ ಒಳಿತಾಗಲಿದೆ. ಈ ದಿನ ಗಣೇಶನಿಗೆ ಗರಿಕೆಯನ್ನು ಅರ್ಪಿಸಿ ಆರಾಧನೆ ಮಾಡಿ.
ಜುಲೈ 7: ಆಷಾಢ ಶುಕ್ರವಾರ: ಆಷಾಢ ಮಾಸದ ಶುಕ್ರವಾರ ಲಕ್ಷ್ಮಿಯನ್ನು ಪೂಜಿಸುತ್ತಾರೆ. ಈ ದಿನ ಲಕ್ಷ್ಮಿ ಪೂಜೆ ಮಾಡುವುದರಿಂದ ಸಂಪತ್ತು ವೃದ್ಧಿಸಲಿದೆ. ತುಂಬಾ ಜನರು ಶ್ರಾವಣ ಶುಕ್ರವಾರದಂದು ಲಕ್ಷ್ಮಿ ವ್ರತ ಪ್ರಾರಂಭಿಸಿ ವರಲಕ್ಷ್ಮಿ ಪೂಜೆಯಂದು ಮುಕ್ತಾಯ ಮಾಡುತ್ತಾರೆ.



Click it and Unblock the Notifications