Latest Updates
-
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ
ಈ ವಾರ ಗುರು ಪೂರ್ಣಿಮಾ ಸೇರಿ 4 ಪ್ರಮುಖ ವ್ರತಗಳಿವೆ, ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವದ್ದಾಗಿವೆ
ಈ ವಾರ ಯಾವೆಲ್ಲಾ ಪ್ರಮುಖ ವ್ರತಗಳಿವೆ, ಈ ವ್ರತಗಳ ವೈಶಿಷ್ಠ್ಯತೆಯೇನು ಎಂದು ನೋಡೋಣ ಬನ್ನಿ:
ಜುಲೈ 2: ಕೋಕಿಲ ವ್ರತ
ಕೋಕಿಲ ವ್ರತವನ್ನು ಆಷಾಢಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಆಚರಿಸುತ್ತೇವೆ. ಈ ದಿನ ಉಪವಾಸವಿದ್ದು ಆದಿಶಕ್ತಿಯ ಆರಾಧನೆ ಮಾಡಲಾಗುವುದು. ಈ ವ್ರತವನ್ನು ಅವಾಹಿತ ಮಹಿಳೆಯರು ಮಾಡಿದರೆ ಮದುವೆಗೆ ಇರುವ ಅಡೆತಡೆ ದೂರಾಗುವುದು. ವಿವಾಹಿತರು ಪಾಲಿಸುವುದರಿಂದ ವೈವಾಹಿಕ ಜೀವನದಲ್ಲಿರುವ ಸಮಸ್ಯೆ ದೂರಾಗುವುದು.

ಜುಲೈ 3: ಗುರು ಪೂರ್ಣಿಮಾ, ವ್ಯಾಸ ಪೂಜೆ, ಆಷಾಢ ಪೂರ್ಣಿಮಾ ವ್ರತ
ವ್ಯಾಸರ ನೆನಪಿಗಾಗಿ ಈ ದಿವವನ್ನು ಆಚರಿಸಲಾಗುತ್ತದೆ. ನಾಲ್ಕು ವೇದಗಳನ್ನು, 18 ಪುರಾಣಗಳನ್ನು ಮಹಾಭಾರತ ಮತ್ತು ಶ್ರೀಮದ್ಭಾಗವತವನ್ನು ರಚಿಸಿದವರು ವೇದವ್ಯಾಸರು. ಬೌದ್ಧರಿಗೂ ಗುರು ಪೂರ್ಣಿಮೆ ಮಹತ್ವದ ದಿನವಾಗಿದೆ. ಸಾಂಪ್ರದಾಯಿಕವಾಗಿ ಬೌದ್ಧರು ಬುದ್ಧನಿಗೆ ಗೌರವ ಅರ್ಪಿಸುವ ದಿನವನ್ನಾಗಿ ಗುರುಪೂರ್ಣಿಮೆಯನ್ನು ಆಚರಿಸುತ್ತಾರೆ. ಸಾರನಾಥದಲ್ಲಿ ಬುದ್ಧನು ಪ್ರಥಮ ಉಪದೇಶವನ್ನು ಮಾಡಿದರೆಂದು ಪ್ರತೀತಿ ಇದೆ. ಈ ದಿನ ಗುರುವಿನ ಪಾದ ಮುಟ್ಟಿ ಆಶೀರ್ವಾದ ಪಡೆದರೆ ಒಳ್ಳೆಯದು. ನಮ್ಮ ಬದುಕಿನಲ್ಲಿ ಸನ್ಮಾರ್ಗದಲ್ಲಿ ನಡೆಯಲು ಗುರುವಿನ ಸ್ಥಾನ ತುಂಬಾನೇ ಮುಖ್ಯ.
ಜುಲೈ 4: ಉತ್ತರ ಭಾರತದ ಕಡೆ ಶ್ರಾವಣ ಪ್ರಾರಂಭ : ಉತ್ತರ ಭಾರತದ ಪಂಚಾಂಗದ ಪ್ರಕಾರ ಜುಲೈ ಹಾಗೂ ಆಗಸ್ಟ್ ತಿಂಗಳು ಶ್ರಾವಣ ಮಾಸವಾಗಿದೆ.
ಜುಲೈ 6: ಗಜಾನನ ಸಂಕಷ್ಠಿ ಚತುರ್ದಶಿ: ಈ ದಿನ ವಿಘ್ನ ನಿವಾರಕನಾದ ವಿನಾಯಕನ ಪೂಜೆ ಮಾಡಲಾಗುವುದು. ಉಪವಾಸವಿದ್ದು ಗಣೇಶನ ಆರಾಧನೆ ಮಾಡುವುದರಿಂದ ಜೀವನದಲ್ಲಿ ಎಲ್ಲಾ ಒಳಿತಾಗಲಿದೆ. ಈ ದಿನ ಗಣೇಶನಿಗೆ ಗರಿಕೆಯನ್ನು ಅರ್ಪಿಸಿ ಆರಾಧನೆ ಮಾಡಿ.
ಜುಲೈ 7: ಆಷಾಢ ಶುಕ್ರವಾರ: ಆಷಾಢ ಮಾಸದ ಶುಕ್ರವಾರ ಲಕ್ಷ್ಮಿಯನ್ನು ಪೂಜಿಸುತ್ತಾರೆ. ಈ ದಿನ ಲಕ್ಷ್ಮಿ ಪೂಜೆ ಮಾಡುವುದರಿಂದ ಸಂಪತ್ತು ವೃದ್ಧಿಸಲಿದೆ. ತುಂಬಾ ಜನರು ಶ್ರಾವಣ ಶುಕ್ರವಾರದಂದು ಲಕ್ಷ್ಮಿ ವ್ರತ ಪ್ರಾರಂಭಿಸಿ ವರಲಕ್ಷ್ಮಿ ಪೂಜೆಯಂದು ಮುಕ್ತಾಯ ಮಾಡುತ್ತಾರೆ.



Click it and Unblock the Notifications











