Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಈ ವಾರ ಗುರು ಪೂರ್ಣಿಮಾ ಸೇರಿ 4 ಪ್ರಮುಖ ವ್ರತಗಳಿವೆ, ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವದ್ದಾಗಿವೆ
ಈ ವಾರ ಯಾವೆಲ್ಲಾ ಪ್ರಮುಖ ವ್ರತಗಳಿವೆ, ಈ ವ್ರತಗಳ ವೈಶಿಷ್ಠ್ಯತೆಯೇನು ಎಂದು ನೋಡೋಣ ಬನ್ನಿ:
ಜುಲೈ 2: ಕೋಕಿಲ ವ್ರತ
ಕೋಕಿಲ ವ್ರತವನ್ನು ಆಷಾಢಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಆಚರಿಸುತ್ತೇವೆ. ಈ ದಿನ ಉಪವಾಸವಿದ್ದು ಆದಿಶಕ್ತಿಯ ಆರಾಧನೆ ಮಾಡಲಾಗುವುದು. ಈ ವ್ರತವನ್ನು ಅವಾಹಿತ ಮಹಿಳೆಯರು ಮಾಡಿದರೆ ಮದುವೆಗೆ ಇರುವ ಅಡೆತಡೆ ದೂರಾಗುವುದು. ವಿವಾಹಿತರು ಪಾಲಿಸುವುದರಿಂದ ವೈವಾಹಿಕ ಜೀವನದಲ್ಲಿರುವ ಸಮಸ್ಯೆ ದೂರಾಗುವುದು.

ಜುಲೈ 3: ಗುರು ಪೂರ್ಣಿಮಾ, ವ್ಯಾಸ ಪೂಜೆ, ಆಷಾಢ ಪೂರ್ಣಿಮಾ ವ್ರತ
ವ್ಯಾಸರ ನೆನಪಿಗಾಗಿ ಈ ದಿವವನ್ನು ಆಚರಿಸಲಾಗುತ್ತದೆ. ನಾಲ್ಕು ವೇದಗಳನ್ನು, 18 ಪುರಾಣಗಳನ್ನು ಮಹಾಭಾರತ ಮತ್ತು ಶ್ರೀಮದ್ಭಾಗವತವನ್ನು ರಚಿಸಿದವರು ವೇದವ್ಯಾಸರು. ಬೌದ್ಧರಿಗೂ ಗುರು ಪೂರ್ಣಿಮೆ ಮಹತ್ವದ ದಿನವಾಗಿದೆ. ಸಾಂಪ್ರದಾಯಿಕವಾಗಿ ಬೌದ್ಧರು ಬುದ್ಧನಿಗೆ ಗೌರವ ಅರ್ಪಿಸುವ ದಿನವನ್ನಾಗಿ ಗುರುಪೂರ್ಣಿಮೆಯನ್ನು ಆಚರಿಸುತ್ತಾರೆ. ಸಾರನಾಥದಲ್ಲಿ ಬುದ್ಧನು ಪ್ರಥಮ ಉಪದೇಶವನ್ನು ಮಾಡಿದರೆಂದು ಪ್ರತೀತಿ ಇದೆ. ಈ ದಿನ ಗುರುವಿನ ಪಾದ ಮುಟ್ಟಿ ಆಶೀರ್ವಾದ ಪಡೆದರೆ ಒಳ್ಳೆಯದು. ನಮ್ಮ ಬದುಕಿನಲ್ಲಿ ಸನ್ಮಾರ್ಗದಲ್ಲಿ ನಡೆಯಲು ಗುರುವಿನ ಸ್ಥಾನ ತುಂಬಾನೇ ಮುಖ್ಯ.
ಜುಲೈ 4: ಉತ್ತರ ಭಾರತದ ಕಡೆ ಶ್ರಾವಣ ಪ್ರಾರಂಭ : ಉತ್ತರ ಭಾರತದ ಪಂಚಾಂಗದ ಪ್ರಕಾರ ಜುಲೈ ಹಾಗೂ ಆಗಸ್ಟ್ ತಿಂಗಳು ಶ್ರಾವಣ ಮಾಸವಾಗಿದೆ.
ಜುಲೈ 6: ಗಜಾನನ ಸಂಕಷ್ಠಿ ಚತುರ್ದಶಿ: ಈ ದಿನ ವಿಘ್ನ ನಿವಾರಕನಾದ ವಿನಾಯಕನ ಪೂಜೆ ಮಾಡಲಾಗುವುದು. ಉಪವಾಸವಿದ್ದು ಗಣೇಶನ ಆರಾಧನೆ ಮಾಡುವುದರಿಂದ ಜೀವನದಲ್ಲಿ ಎಲ್ಲಾ ಒಳಿತಾಗಲಿದೆ. ಈ ದಿನ ಗಣೇಶನಿಗೆ ಗರಿಕೆಯನ್ನು ಅರ್ಪಿಸಿ ಆರಾಧನೆ ಮಾಡಿ.
ಜುಲೈ 7: ಆಷಾಢ ಶುಕ್ರವಾರ: ಆಷಾಢ ಮಾಸದ ಶುಕ್ರವಾರ ಲಕ್ಷ್ಮಿಯನ್ನು ಪೂಜಿಸುತ್ತಾರೆ. ಈ ದಿನ ಲಕ್ಷ್ಮಿ ಪೂಜೆ ಮಾಡುವುದರಿಂದ ಸಂಪತ್ತು ವೃದ್ಧಿಸಲಿದೆ. ತುಂಬಾ ಜನರು ಶ್ರಾವಣ ಶುಕ್ರವಾರದಂದು ಲಕ್ಷ್ಮಿ ವ್ರತ ಪ್ರಾರಂಭಿಸಿ ವರಲಕ್ಷ್ಮಿ ಪೂಜೆಯಂದು ಮುಕ್ತಾಯ ಮಾಡುತ್ತಾರೆ.



Click it and Unblock the Notifications