Latest Updates
-
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ!
ಈ ವಾರ ಗುರು ಪೂರ್ಣಿಮಾ ಸೇರಿ 4 ಪ್ರಮುಖ ವ್ರತಗಳಿವೆ, ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವದ್ದಾಗಿವೆ
ಈ ವಾರ ಯಾವೆಲ್ಲಾ ಪ್ರಮುಖ ವ್ರತಗಳಿವೆ, ಈ ವ್ರತಗಳ ವೈಶಿಷ್ಠ್ಯತೆಯೇನು ಎಂದು ನೋಡೋಣ ಬನ್ನಿ:
ಜುಲೈ 2: ಕೋಕಿಲ ವ್ರತ
ಕೋಕಿಲ ವ್ರತವನ್ನು ಆಷಾಢಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಆಚರಿಸುತ್ತೇವೆ. ಈ ದಿನ ಉಪವಾಸವಿದ್ದು ಆದಿಶಕ್ತಿಯ ಆರಾಧನೆ ಮಾಡಲಾಗುವುದು. ಈ ವ್ರತವನ್ನು ಅವಾಹಿತ ಮಹಿಳೆಯರು ಮಾಡಿದರೆ ಮದುವೆಗೆ ಇರುವ ಅಡೆತಡೆ ದೂರಾಗುವುದು. ವಿವಾಹಿತರು ಪಾಲಿಸುವುದರಿಂದ ವೈವಾಹಿಕ ಜೀವನದಲ್ಲಿರುವ ಸಮಸ್ಯೆ ದೂರಾಗುವುದು.

ಜುಲೈ 3: ಗುರು ಪೂರ್ಣಿಮಾ, ವ್ಯಾಸ ಪೂಜೆ, ಆಷಾಢ ಪೂರ್ಣಿಮಾ ವ್ರತ
ವ್ಯಾಸರ ನೆನಪಿಗಾಗಿ ಈ ದಿವವನ್ನು ಆಚರಿಸಲಾಗುತ್ತದೆ. ನಾಲ್ಕು ವೇದಗಳನ್ನು, 18 ಪುರಾಣಗಳನ್ನು ಮಹಾಭಾರತ ಮತ್ತು ಶ್ರೀಮದ್ಭಾಗವತವನ್ನು ರಚಿಸಿದವರು ವೇದವ್ಯಾಸರು. ಬೌದ್ಧರಿಗೂ ಗುರು ಪೂರ್ಣಿಮೆ ಮಹತ್ವದ ದಿನವಾಗಿದೆ. ಸಾಂಪ್ರದಾಯಿಕವಾಗಿ ಬೌದ್ಧರು ಬುದ್ಧನಿಗೆ ಗೌರವ ಅರ್ಪಿಸುವ ದಿನವನ್ನಾಗಿ ಗುರುಪೂರ್ಣಿಮೆಯನ್ನು ಆಚರಿಸುತ್ತಾರೆ. ಸಾರನಾಥದಲ್ಲಿ ಬುದ್ಧನು ಪ್ರಥಮ ಉಪದೇಶವನ್ನು ಮಾಡಿದರೆಂದು ಪ್ರತೀತಿ ಇದೆ. ಈ ದಿನ ಗುರುವಿನ ಪಾದ ಮುಟ್ಟಿ ಆಶೀರ್ವಾದ ಪಡೆದರೆ ಒಳ್ಳೆಯದು. ನಮ್ಮ ಬದುಕಿನಲ್ಲಿ ಸನ್ಮಾರ್ಗದಲ್ಲಿ ನಡೆಯಲು ಗುರುವಿನ ಸ್ಥಾನ ತುಂಬಾನೇ ಮುಖ್ಯ.
ಜುಲೈ 4: ಉತ್ತರ ಭಾರತದ ಕಡೆ ಶ್ರಾವಣ ಪ್ರಾರಂಭ : ಉತ್ತರ ಭಾರತದ ಪಂಚಾಂಗದ ಪ್ರಕಾರ ಜುಲೈ ಹಾಗೂ ಆಗಸ್ಟ್ ತಿಂಗಳು ಶ್ರಾವಣ ಮಾಸವಾಗಿದೆ.
ಜುಲೈ 6: ಗಜಾನನ ಸಂಕಷ್ಠಿ ಚತುರ್ದಶಿ: ಈ ದಿನ ವಿಘ್ನ ನಿವಾರಕನಾದ ವಿನಾಯಕನ ಪೂಜೆ ಮಾಡಲಾಗುವುದು. ಉಪವಾಸವಿದ್ದು ಗಣೇಶನ ಆರಾಧನೆ ಮಾಡುವುದರಿಂದ ಜೀವನದಲ್ಲಿ ಎಲ್ಲಾ ಒಳಿತಾಗಲಿದೆ. ಈ ದಿನ ಗಣೇಶನಿಗೆ ಗರಿಕೆಯನ್ನು ಅರ್ಪಿಸಿ ಆರಾಧನೆ ಮಾಡಿ.
ಜುಲೈ 7: ಆಷಾಢ ಶುಕ್ರವಾರ: ಆಷಾಢ ಮಾಸದ ಶುಕ್ರವಾರ ಲಕ್ಷ್ಮಿಯನ್ನು ಪೂಜಿಸುತ್ತಾರೆ. ಈ ದಿನ ಲಕ್ಷ್ಮಿ ಪೂಜೆ ಮಾಡುವುದರಿಂದ ಸಂಪತ್ತು ವೃದ್ಧಿಸಲಿದೆ. ತುಂಬಾ ಜನರು ಶ್ರಾವಣ ಶುಕ್ರವಾರದಂದು ಲಕ್ಷ್ಮಿ ವ್ರತ ಪ್ರಾರಂಭಿಸಿ ವರಲಕ್ಷ್ಮಿ ಪೂಜೆಯಂದು ಮುಕ್ತಾಯ ಮಾಡುತ್ತಾರೆ.



Click it and Unblock the Notifications