Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ವಾರ ಗುರು ಪೂರ್ಣಿಮಾ ಸೇರಿ 4 ಪ್ರಮುಖ ವ್ರತಗಳಿವೆ, ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವದ್ದಾಗಿವೆ
ಈ ವಾರ ಯಾವೆಲ್ಲಾ ಪ್ರಮುಖ ವ್ರತಗಳಿವೆ, ಈ ವ್ರತಗಳ ವೈಶಿಷ್ಠ್ಯತೆಯೇನು ಎಂದು ನೋಡೋಣ ಬನ್ನಿ:
ಜುಲೈ 2: ಕೋಕಿಲ ವ್ರತ
ಕೋಕಿಲ ವ್ರತವನ್ನು ಆಷಾಢಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಆಚರಿಸುತ್ತೇವೆ. ಈ ದಿನ ಉಪವಾಸವಿದ್ದು ಆದಿಶಕ್ತಿಯ ಆರಾಧನೆ ಮಾಡಲಾಗುವುದು. ಈ ವ್ರತವನ್ನು ಅವಾಹಿತ ಮಹಿಳೆಯರು ಮಾಡಿದರೆ ಮದುವೆಗೆ ಇರುವ ಅಡೆತಡೆ ದೂರಾಗುವುದು. ವಿವಾಹಿತರು ಪಾಲಿಸುವುದರಿಂದ ವೈವಾಹಿಕ ಜೀವನದಲ್ಲಿರುವ ಸಮಸ್ಯೆ ದೂರಾಗುವುದು.

ಜುಲೈ 3: ಗುರು ಪೂರ್ಣಿಮಾ, ವ್ಯಾಸ ಪೂಜೆ, ಆಷಾಢ ಪೂರ್ಣಿಮಾ ವ್ರತ
ವ್ಯಾಸರ ನೆನಪಿಗಾಗಿ ಈ ದಿವವನ್ನು ಆಚರಿಸಲಾಗುತ್ತದೆ. ನಾಲ್ಕು ವೇದಗಳನ್ನು, 18 ಪುರಾಣಗಳನ್ನು ಮಹಾಭಾರತ ಮತ್ತು ಶ್ರೀಮದ್ಭಾಗವತವನ್ನು ರಚಿಸಿದವರು ವೇದವ್ಯಾಸರು. ಬೌದ್ಧರಿಗೂ ಗುರು ಪೂರ್ಣಿಮೆ ಮಹತ್ವದ ದಿನವಾಗಿದೆ. ಸಾಂಪ್ರದಾಯಿಕವಾಗಿ ಬೌದ್ಧರು ಬುದ್ಧನಿಗೆ ಗೌರವ ಅರ್ಪಿಸುವ ದಿನವನ್ನಾಗಿ ಗುರುಪೂರ್ಣಿಮೆಯನ್ನು ಆಚರಿಸುತ್ತಾರೆ. ಸಾರನಾಥದಲ್ಲಿ ಬುದ್ಧನು ಪ್ರಥಮ ಉಪದೇಶವನ್ನು ಮಾಡಿದರೆಂದು ಪ್ರತೀತಿ ಇದೆ. ಈ ದಿನ ಗುರುವಿನ ಪಾದ ಮುಟ್ಟಿ ಆಶೀರ್ವಾದ ಪಡೆದರೆ ಒಳ್ಳೆಯದು. ನಮ್ಮ ಬದುಕಿನಲ್ಲಿ ಸನ್ಮಾರ್ಗದಲ್ಲಿ ನಡೆಯಲು ಗುರುವಿನ ಸ್ಥಾನ ತುಂಬಾನೇ ಮುಖ್ಯ.
ಜುಲೈ 4: ಉತ್ತರ ಭಾರತದ ಕಡೆ ಶ್ರಾವಣ ಪ್ರಾರಂಭ : ಉತ್ತರ ಭಾರತದ ಪಂಚಾಂಗದ ಪ್ರಕಾರ ಜುಲೈ ಹಾಗೂ ಆಗಸ್ಟ್ ತಿಂಗಳು ಶ್ರಾವಣ ಮಾಸವಾಗಿದೆ.
ಜುಲೈ 6: ಗಜಾನನ ಸಂಕಷ್ಠಿ ಚತುರ್ದಶಿ: ಈ ದಿನ ವಿಘ್ನ ನಿವಾರಕನಾದ ವಿನಾಯಕನ ಪೂಜೆ ಮಾಡಲಾಗುವುದು. ಉಪವಾಸವಿದ್ದು ಗಣೇಶನ ಆರಾಧನೆ ಮಾಡುವುದರಿಂದ ಜೀವನದಲ್ಲಿ ಎಲ್ಲಾ ಒಳಿತಾಗಲಿದೆ. ಈ ದಿನ ಗಣೇಶನಿಗೆ ಗರಿಕೆಯನ್ನು ಅರ್ಪಿಸಿ ಆರಾಧನೆ ಮಾಡಿ.
ಜುಲೈ 7: ಆಷಾಢ ಶುಕ್ರವಾರ: ಆಷಾಢ ಮಾಸದ ಶುಕ್ರವಾರ ಲಕ್ಷ್ಮಿಯನ್ನು ಪೂಜಿಸುತ್ತಾರೆ. ಈ ದಿನ ಲಕ್ಷ್ಮಿ ಪೂಜೆ ಮಾಡುವುದರಿಂದ ಸಂಪತ್ತು ವೃದ್ಧಿಸಲಿದೆ. ತುಂಬಾ ಜನರು ಶ್ರಾವಣ ಶುಕ್ರವಾರದಂದು ಲಕ್ಷ್ಮಿ ವ್ರತ ಪ್ರಾರಂಭಿಸಿ ವರಲಕ್ಷ್ಮಿ ಪೂಜೆಯಂದು ಮುಕ್ತಾಯ ಮಾಡುತ್ತಾರೆ.



Click it and Unblock the Notifications