Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಬೆಂಗಳೂರು ಮೆಟ್ರೋದಲ್ಲಿ ಟಿಕೆಟ್ ತೆಗೆಯದೆ ಪ್ರಯಾಣಿಸಿದ ಪ್ರಸಿದ್ಧ ಯೂಟ್ಯೂಬರ್: ನೆಟ್ಟಿಗರಿಂದ ಟೀಕೆಗಳ ಸುರಿಮಳೆ
ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣ ಮಾಡಿದವರಿಗೆ ಟಿಕೆಟ್ ಇಲ್ಲದೆ ಪ್ರಯಾಣ ಮಾಡುವುದು ಸಾಧ್ಯನೇ ಇಲ್ಲ ಎಂಬುವುದು ಗೊತ್ತಿರುವ ವಿಷಯ, ಆದರೆ ಒಬ್ಬ ಪ್ರಸಿದ್ಧ ಯುಟ್ಯೂಬರ್ ಟಿಕೆಟ್ ಇಲ್ಲದೆ ಪ್ರಯಾಣ ಮಾಡಿ ವೀಡಿಯೋ ಮಾಡಿ ಹಾಕಿರುವ ವೀಡಿಯೋ ತುಂಬಾನೇ ವೈರಲ್ ಆಗಿದೆ. ನೆಟ್ಟಿಗರು ಯೂ ಟ್ಯೂಬರ್ ಮಾಡಿರುವುದು ತಪ್ಪು ಎಂದು ಟೀಕಿಸುತ್ತಿದ್ದಾರೆ.

ಆತನ ಹೆಸರು Fidias,ತುಂಬಾನೇ ಪ್ರಸಿದ್ಧ ಯೂಟ್ಯೂಬರ್, ಎಲೆನ್ ಮಸ್ಕ್ ಅವರನ್ನು ಭೇಟಿ ಮಾಡುವ ಮೂಲಕ ತುಂಬಾನೇ ಗಮನ ಸೆಳೆದ ವ್ಯಕ್ತಿ. ಭಾರತವನ್ನು 10 ಡಾಲರ್ ಮಾತ್ರ ಇಟ್ಟು ಸುತ್ತಿ ತೋರಿಸುತ್ತೇನೆ ಎಂದು ಭಾರತಕ್ಕೆ ಪ್ರಯಾಣ ಮಾಡಿದ್ದಾರೆ. ಆ ವೀಡಿಯೋದಲ್ಲಿಯೂ ಭಾರತದ ಮ್ಯಾಪ್ ಅನ್ನು ಸರಿಯಾಗಿ ಹಾಕದೆ ಭಾರತೀಯರ ಭಾವನೆ ಧಕ್ಕೆ ಮಾಡಿದ್ದಾರೆ, ಇನ್ನೂ ಆ ವೀಡಿಯೋ ಅವರ ಖಾತೆಯಲ್ಲಿಯೇ ಇದೆ. ಇದೀಗ ಬೆಂಗಳೂರು ಮೆಟ್ರೋದಲ್ಲಿ ಟಿಕೆಟ್ ಕೊಡದೆ ಪ್ರಯಾಣಿಸಿ ತುಂಬಾನೇ ಗಮನ ಸೆಳೆದಿದ್ದಾರೆ.
ಮೆಟ್ರೋದಲ್ಲಿ ಪ್ರಯಾಣ ಮಾಡಿದವರಿಗೆ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಬೆಂಗಳೂರಿನ ಮೆಟ್ರೋದಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುವುದು ತುಂಬಾನೇ ಕಷ್ಟ, ಅಲ್ಲಿ ಮೆಟ್ರೋ ಕಾಯಿನ್ ಅಥವಾ ಮೆಟ್ರೋ ಕಾರ್ಡ್ ಇಟ್ಟರೆ ಫ್ಲಾಟ್ ಫಾರಂ ಹೋಗಲು ಹಾಗೂ ಎಕ್ಸಿಟ್ ಆಗಲು ಸಾಧ್ಯ. ಆದರೆ ಈ ವ್ಯಕ್ತಿ ಆ ಎಂಟ್ರಿ ಹಾಗೂ ಎಕ್ಸಿಟ್ ಗೇಟ್ ಅನ್ನು ಹಾರಿಕೊಂಡು ಹೋಗಿದ್ದೇನೆ. ಈತ ಈ ರೀತಿ ಮಾಡುವಾಗ ಮೆಟ್ರೋ ಸಿಬ್ಬಂದಿಗಳು ಏನು ಮಾಡುತ್ತಿದ್ದರು ಎಂಬುವುದೇ ಪ್ರಶ್ನೆ. ಈತ ಟಿಕೆಟ್ ತೆಗೆಯದೆ ಪ್ರಯಾಣ ಮಾಡಿದ್ದು ಮಾತ್ರವಲ್ಲ ಮೆಟ್ರೋ ಒಳಗಡೆ ಪ್ಯಾಸೆಂಜರ್ ಹಿಡಿದು ನಿಲ್ಲಲು ಇರುವ ರಾಡ್ಗಳಲ್ಲಿ ವರ್ಕೌಟ್ ಮಾಡಿದ್ದಾನೆ.... ಇಂಥ ಕುಚೇಷ್ಠೆಯನ್ನು ಮಾಡಿ, ನಂತರ ಎಕ್ಸಿಟ್ ಜಂಪ್ ಆಗಿ ಬಂದು ನಾನು ಟಿಕೆಟ್ ತೆಗೆಯದೆ ಬೆಂಗಳೂರು ಮೆಟ್ರೋದಲ್ಲಿ ಬಂದಿದ್ದೇನೆ ಎಂದು ವೀಡಿಯೋದಲ್ಲಿ ಹೇಳಿದ್ದಾನೆ.
ಈ ವೀಡಿಯೋಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಆತನನ್ನು ಏಕೆ ಯಾವುದೇ ಸೆಕ್ಯೂರಿಟಿ ಗಾರ್ಡ್ಸ್ ತಡೆಯಲಿಲ್ಲ ಎಂಬುವುದೇ ಪ್ರಶ್ನೆ. ಕೆಲವರು ಆತನಿಗೆ GOOD JOB! STEALING from the HARD WORKING people of India! ಎಂದು ಕಮೆಂಟ್ ಮಾಡುತ್ತಿದ್ದಾರೆ. ಈತ 10 ಡಾಲರ್ನಲ್ಲಿ ಭಾರತ ಸುತ್ತುತ್ತೇನೆ ಎಂದು ಹೊರಟಿರುವುದು ಹಾಗಂತ ಈ ರೀತಿ ಕಳ್ಳನ ರೀತಿಯಲ್ಲಿ ಸುತ್ತುವುದು ಎಷ್ಟು ಸರಿ... ಈತ ಭಾರತದ ಬಗ್ಗೆ ಏನು ಹೇಳಲು ಹೊರಟಿದ್ದಾನೆ.
ಬೆಂಗಳೂರು ಮೆಟ್ರೋ ಕಾರ್ಯಕಾರಿ ನಿರ್ದೇಶಕ ಎಎಸ್ ಶಂಕರ್ ಪ್ರಯಾಣಿಕರ ಮೇಲೆ ಹೆಚ್ಚಿನ ಕಣ್ಗಾವಲು ಇಡಲಾಗುವುದು ಎಂದು ಹೇಳಿದ್ದಾರೆ.



Click it and Unblock the Notifications