Latest Updates
-
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ವ್ಯಾಯಾಮದ ಸಮಯ ಬದಲಾಯಿಸಿ -
ಅಕ್ಷಯ ತೃತೀಯ: ಮದುವೆ ಮತ್ತು ಚಿನ್ನದ ಖರೀದಿಗೆ ಹೀಗೆ ಪ್ಲಾನ್ ಮಾಡಿ -
ಮನೆಯನ್ನು ತಂಪಾಗಿಡಲು ಹೀಟ್ವೇವ್ ಸಮಯದಲ್ಲಿ ಈ ಟ್ರಿಕ್ಸ್ ಫಾಲೋ ಮಾಡಿ -
ಮಾವಿನ ಹಣ್ಣು ಖರೀದಿಸುವ ಮುನ್ನ ಈ ತಪ್ಪು ಮಾಡಬೇಡಿ! -
ಅಕ್ಷಯ ತೃತೀಯ ಚಿನ್ನದ ಖರೀದಿ: ಈ ಆಫರ್ ಮಿಸ್ ಮಾಡ್ಬೇಡಿ!
5ನೇ ಶ್ರಾವಣ ಸೋಮವಾರ : ಪೂಜಾ ವಿಧಿ, ಆಚರಣೆ ಹೇಗಿರಬೇಕು?
ಶ್ರಾವಣ ಹಿಂದೂಗಳಿಗೆ ಒಂದು ರೀತಿ ವಿಶೇಷವಾದ ತಿಂಗಳು. ಈ ಸಮಯದಲ್ಲಿ ಶಿವನಿಗೆ ಭಕ್ತಿಯಿಂದ ಪೂಜೆ ಮಾಡಿ, ಉಪವಾಸವನ್ನು ಕೈಗೊಂಡರೆ ಆತ ನಮ್ಮೆಲ್ಲರ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ ಎಂಬ ನಂಬಿಕೆಯಿದೆ. ಅಷ್ಟಕ್ಕು ಐದನೇ ಶ್ರಾವಣ ಸೋಮವಾರ ಯಾವಾಗ? ಯಾವ ರೀತಿ ಪೂಜೆ ನೆರವೇರಿಸಬೇಕು ಅನ್ನೋದನ್ನು ತಿಳಿಯೋಣ.

5 ನೇ ಶ್ರಾವಣ ಸೋಮವಾರ 2023 ದಿನಾಂಕ :
ಐದನೇ ಶ್ರಾವಣ ಸೋಮವಾರದ ಉಪವಾಸವನ್ನು ಆಗಸ್ಟ್ 21, 2023 ರಂದು ಆಚರಿಸಲಾಗುತ್ತದೆ. ಈ ದಿನದಂದು ವಿವಾಹಿತರು ಅದೃಷ್ಟ ಮತ್ತು ಸಂಪತ್ತನ್ನು ಪಡೆಯಲು ನಿಯಮ ಮತ್ತು ನಿಬಂಧನೆಗಳನ್ನು ಪಾಲಿಸುವುದರ ಮೂಲಕ ಶಿವನ ಪೂಜೆಯನ್ನು ಮಾಡಬೇಕು. ಈ ಉಪವಾಸದ ಪರಿಣಾಮದಿಂದ ಸೂಕ್ತವಾದ ಜೀವನ ಸಂಗಾತಿಯನ್ನು ಪಡೆಯುವ ನಿಮ್ಮ ಬಯಕೆಯೂ ಈಡೇರುತ್ತದೆ.
5 ನೇ ಶ್ರಾವಣ ಸೋಮವಾರ 2023 ಮುಹೂರ್ತ :
ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯು ಆಗಸ್ಟ್ 21, 2023 ರಂದು ಬೆಳಗ್ಗೆ 12:53 ಕ್ಕೆ ಪ್ರಾರಂಭವಾಗುತ್ತದೆ. ಮತ್ತು 21 ಆಗಸ್ಟ್ 2023 ರಂದು ಬೆಳಗ್ಗೆ 2:00 ರವರೆಗೆ ಇರುತ್ತದೆ. ನಂಬಿಕೆಗಳ ಪ್ರಕಾರ ನಾಗ ಪಂಚಮಿಯ ದಿನದಂದು ಹಾವುಗಳ ಪೂಜೆಗೆ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಯ ಪ್ರಕಾರ ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಜೀವನದಲ್ಲಿ ಸಮಸ್ಯೆಗಳು ನಾಶವಾಗುತ್ತವೆ. ಅಲ್ಲದೆ ವ್ಯಕ್ತಿಯ ಎಲ್ಲಾ ಆಸೆಗಳು ಈಡೇರುತ್ತಂತೆ.
ಶ್ರಾವಣ ಸೋಮವಾರದಂದು ಶಿವನ ಆರಾಧನೆಯ ಮಹತ್ವವೇನು?
ಶಿವನ ಅರ್ಧನಾರೀಶ್ವರ ರೂಪವು ಅರ್ಧ ಹೆಣ್ಣು ಮತ್ತು ಅರ್ಧ ಗಂಡು. ಮನುಕುಲವನ್ನು ಜಗತ್ತಿನಲ್ಲಿ ಮುನ್ನಡೆಸಲು ಶಿವನು ಅರ್ಧನಾರೀಶ್ವರನ ರೂಪವನ್ನು ಪಡೆದಿದ್ದನು. ಶ್ರಾವನ ಸೋಮವಾರದಂದು ಶಿವನ ಅರ್ಧನಾರೀಶ್ವರ ರೂಪವನ್ನು ಪೂಜಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ. ಮತ್ತು ಪತಿ-ಪತ್ನಿಯರಲ್ಲಿ ಮಾಧುರ್ಯ ಹೆಚ್ಚಾಗುತ್ತಂತೆ.
ಸಾವನ ಸೋಮವಾರದಂದು ಶಿವನನ್ನು ಆರಾಧನೆ ಮಾಡುವವರು ಭಕ್ತಿಯಿಂದ ಎಲ್ಲಾ ಪೂಜಾ ವಿಧಾನಗಳನ್ನು ಕೈಗೊಳ್ಳಬೇಕು. ಬೆಳಗ್ಗೆ ಬೇಗನೆ ಎದ್ದು ಶಿವನಿಗೆ ಜಲಾಭಿಷೇಕವನ್ನು ಮಾಡಿ. ನಂತರ 'ಓಂ ಮಹಾದೇವಾಯ ಸರ್ವ ಕಾರ್ಯ ಸಿದ್ಧಿ ದೇಹಿ-ದೇಹಿ ಕಾಮೇಶ್ವರಾಯ ನಮಃ ಮಂತ್ರವನ್ನು 108 ಬಾರಿ ಜಪಿಸಿ. ಸಾಧ್ಯವಾದ್ರೆ ನೀವು ಅರ್ಧನಾರೀಶ್ವರ ಸ್ತೋತ್ರವನ್ನು ಸಹ ಪಠಿಸಬಹುದು. ಕೊನೆಯಲ್ಲಿ ಭೋಲೆನಾಥನ ಆರತಿಯನ್ನು ಮಾಡಿ ನಂತರ ಪ್ರಸಾದವನ್ನು ವಿತರಿಸಿ.



Click it and Unblock the Notifications











