Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
5ನೇ ಶ್ರಾವಣ ಸೋಮವಾರ : ಪೂಜಾ ವಿಧಿ, ಆಚರಣೆ ಹೇಗಿರಬೇಕು?
ಶ್ರಾವಣ ಹಿಂದೂಗಳಿಗೆ ಒಂದು ರೀತಿ ವಿಶೇಷವಾದ ತಿಂಗಳು. ಈ ಸಮಯದಲ್ಲಿ ಶಿವನಿಗೆ ಭಕ್ತಿಯಿಂದ ಪೂಜೆ ಮಾಡಿ, ಉಪವಾಸವನ್ನು ಕೈಗೊಂಡರೆ ಆತ ನಮ್ಮೆಲ್ಲರ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ ಎಂಬ ನಂಬಿಕೆಯಿದೆ. ಅಷ್ಟಕ್ಕು ಐದನೇ ಶ್ರಾವಣ ಸೋಮವಾರ ಯಾವಾಗ? ಯಾವ ರೀತಿ ಪೂಜೆ ನೆರವೇರಿಸಬೇಕು ಅನ್ನೋದನ್ನು ತಿಳಿಯೋಣ.

5 ನೇ ಶ್ರಾವಣ ಸೋಮವಾರ 2023 ದಿನಾಂಕ :
ಐದನೇ ಶ್ರಾವಣ ಸೋಮವಾರದ ಉಪವಾಸವನ್ನು ಆಗಸ್ಟ್ 21, 2023 ರಂದು ಆಚರಿಸಲಾಗುತ್ತದೆ. ಈ ದಿನದಂದು ವಿವಾಹಿತರು ಅದೃಷ್ಟ ಮತ್ತು ಸಂಪತ್ತನ್ನು ಪಡೆಯಲು ನಿಯಮ ಮತ್ತು ನಿಬಂಧನೆಗಳನ್ನು ಪಾಲಿಸುವುದರ ಮೂಲಕ ಶಿವನ ಪೂಜೆಯನ್ನು ಮಾಡಬೇಕು. ಈ ಉಪವಾಸದ ಪರಿಣಾಮದಿಂದ ಸೂಕ್ತವಾದ ಜೀವನ ಸಂಗಾತಿಯನ್ನು ಪಡೆಯುವ ನಿಮ್ಮ ಬಯಕೆಯೂ ಈಡೇರುತ್ತದೆ.
5 ನೇ ಶ್ರಾವಣ ಸೋಮವಾರ 2023 ಮುಹೂರ್ತ :
ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯು ಆಗಸ್ಟ್ 21, 2023 ರಂದು ಬೆಳಗ್ಗೆ 12:53 ಕ್ಕೆ ಪ್ರಾರಂಭವಾಗುತ್ತದೆ. ಮತ್ತು 21 ಆಗಸ್ಟ್ 2023 ರಂದು ಬೆಳಗ್ಗೆ 2:00 ರವರೆಗೆ ಇರುತ್ತದೆ. ನಂಬಿಕೆಗಳ ಪ್ರಕಾರ ನಾಗ ಪಂಚಮಿಯ ದಿನದಂದು ಹಾವುಗಳ ಪೂಜೆಗೆ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಯ ಪ್ರಕಾರ ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಜೀವನದಲ್ಲಿ ಸಮಸ್ಯೆಗಳು ನಾಶವಾಗುತ್ತವೆ. ಅಲ್ಲದೆ ವ್ಯಕ್ತಿಯ ಎಲ್ಲಾ ಆಸೆಗಳು ಈಡೇರುತ್ತಂತೆ.
ಶ್ರಾವಣ ಸೋಮವಾರದಂದು ಶಿವನ ಆರಾಧನೆಯ ಮಹತ್ವವೇನು?
ಶಿವನ ಅರ್ಧನಾರೀಶ್ವರ ರೂಪವು ಅರ್ಧ ಹೆಣ್ಣು ಮತ್ತು ಅರ್ಧ ಗಂಡು. ಮನುಕುಲವನ್ನು ಜಗತ್ತಿನಲ್ಲಿ ಮುನ್ನಡೆಸಲು ಶಿವನು ಅರ್ಧನಾರೀಶ್ವರನ ರೂಪವನ್ನು ಪಡೆದಿದ್ದನು. ಶ್ರಾವನ ಸೋಮವಾರದಂದು ಶಿವನ ಅರ್ಧನಾರೀಶ್ವರ ರೂಪವನ್ನು ಪೂಜಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ. ಮತ್ತು ಪತಿ-ಪತ್ನಿಯರಲ್ಲಿ ಮಾಧುರ್ಯ ಹೆಚ್ಚಾಗುತ್ತಂತೆ.
ಸಾವನ ಸೋಮವಾರದಂದು ಶಿವನನ್ನು ಆರಾಧನೆ ಮಾಡುವವರು ಭಕ್ತಿಯಿಂದ ಎಲ್ಲಾ ಪೂಜಾ ವಿಧಾನಗಳನ್ನು ಕೈಗೊಳ್ಳಬೇಕು. ಬೆಳಗ್ಗೆ ಬೇಗನೆ ಎದ್ದು ಶಿವನಿಗೆ ಜಲಾಭಿಷೇಕವನ್ನು ಮಾಡಿ. ನಂತರ 'ಓಂ ಮಹಾದೇವಾಯ ಸರ್ವ ಕಾರ್ಯ ಸಿದ್ಧಿ ದೇಹಿ-ದೇಹಿ ಕಾಮೇಶ್ವರಾಯ ನಮಃ ಮಂತ್ರವನ್ನು 108 ಬಾರಿ ಜಪಿಸಿ. ಸಾಧ್ಯವಾದ್ರೆ ನೀವು ಅರ್ಧನಾರೀಶ್ವರ ಸ್ತೋತ್ರವನ್ನು ಸಹ ಪಠಿಸಬಹುದು. ಕೊನೆಯಲ್ಲಿ ಭೋಲೆನಾಥನ ಆರತಿಯನ್ನು ಮಾಡಿ ನಂತರ ಪ್ರಸಾದವನ್ನು ವಿತರಿಸಿ.



Click it and Unblock the Notifications