Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
5ನೇ ಶ್ರಾವಣ ಸೋಮವಾರ : ಪೂಜಾ ವಿಧಿ, ಆಚರಣೆ ಹೇಗಿರಬೇಕು?
ಶ್ರಾವಣ ಹಿಂದೂಗಳಿಗೆ ಒಂದು ರೀತಿ ವಿಶೇಷವಾದ ತಿಂಗಳು. ಈ ಸಮಯದಲ್ಲಿ ಶಿವನಿಗೆ ಭಕ್ತಿಯಿಂದ ಪೂಜೆ ಮಾಡಿ, ಉಪವಾಸವನ್ನು ಕೈಗೊಂಡರೆ ಆತ ನಮ್ಮೆಲ್ಲರ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ ಎಂಬ ನಂಬಿಕೆಯಿದೆ. ಅಷ್ಟಕ್ಕು ಐದನೇ ಶ್ರಾವಣ ಸೋಮವಾರ ಯಾವಾಗ? ಯಾವ ರೀತಿ ಪೂಜೆ ನೆರವೇರಿಸಬೇಕು ಅನ್ನೋದನ್ನು ತಿಳಿಯೋಣ.

5 ನೇ ಶ್ರಾವಣ ಸೋಮವಾರ 2023 ದಿನಾಂಕ :
ಐದನೇ ಶ್ರಾವಣ ಸೋಮವಾರದ ಉಪವಾಸವನ್ನು ಆಗಸ್ಟ್ 21, 2023 ರಂದು ಆಚರಿಸಲಾಗುತ್ತದೆ. ಈ ದಿನದಂದು ವಿವಾಹಿತರು ಅದೃಷ್ಟ ಮತ್ತು ಸಂಪತ್ತನ್ನು ಪಡೆಯಲು ನಿಯಮ ಮತ್ತು ನಿಬಂಧನೆಗಳನ್ನು ಪಾಲಿಸುವುದರ ಮೂಲಕ ಶಿವನ ಪೂಜೆಯನ್ನು ಮಾಡಬೇಕು. ಈ ಉಪವಾಸದ ಪರಿಣಾಮದಿಂದ ಸೂಕ್ತವಾದ ಜೀವನ ಸಂಗಾತಿಯನ್ನು ಪಡೆಯುವ ನಿಮ್ಮ ಬಯಕೆಯೂ ಈಡೇರುತ್ತದೆ.
5 ನೇ ಶ್ರಾವಣ ಸೋಮವಾರ 2023 ಮುಹೂರ್ತ :
ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯು ಆಗಸ್ಟ್ 21, 2023 ರಂದು ಬೆಳಗ್ಗೆ 12:53 ಕ್ಕೆ ಪ್ರಾರಂಭವಾಗುತ್ತದೆ. ಮತ್ತು 21 ಆಗಸ್ಟ್ 2023 ರಂದು ಬೆಳಗ್ಗೆ 2:00 ರವರೆಗೆ ಇರುತ್ತದೆ. ನಂಬಿಕೆಗಳ ಪ್ರಕಾರ ನಾಗ ಪಂಚಮಿಯ ದಿನದಂದು ಹಾವುಗಳ ಪೂಜೆಗೆ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಯ ಪ್ರಕಾರ ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಜೀವನದಲ್ಲಿ ಸಮಸ್ಯೆಗಳು ನಾಶವಾಗುತ್ತವೆ. ಅಲ್ಲದೆ ವ್ಯಕ್ತಿಯ ಎಲ್ಲಾ ಆಸೆಗಳು ಈಡೇರುತ್ತಂತೆ.
ಶ್ರಾವಣ ಸೋಮವಾರದಂದು ಶಿವನ ಆರಾಧನೆಯ ಮಹತ್ವವೇನು?
ಶಿವನ ಅರ್ಧನಾರೀಶ್ವರ ರೂಪವು ಅರ್ಧ ಹೆಣ್ಣು ಮತ್ತು ಅರ್ಧ ಗಂಡು. ಮನುಕುಲವನ್ನು ಜಗತ್ತಿನಲ್ಲಿ ಮುನ್ನಡೆಸಲು ಶಿವನು ಅರ್ಧನಾರೀಶ್ವರನ ರೂಪವನ್ನು ಪಡೆದಿದ್ದನು. ಶ್ರಾವನ ಸೋಮವಾರದಂದು ಶಿವನ ಅರ್ಧನಾರೀಶ್ವರ ರೂಪವನ್ನು ಪೂಜಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ. ಮತ್ತು ಪತಿ-ಪತ್ನಿಯರಲ್ಲಿ ಮಾಧುರ್ಯ ಹೆಚ್ಚಾಗುತ್ತಂತೆ.
ಸಾವನ ಸೋಮವಾರದಂದು ಶಿವನನ್ನು ಆರಾಧನೆ ಮಾಡುವವರು ಭಕ್ತಿಯಿಂದ ಎಲ್ಲಾ ಪೂಜಾ ವಿಧಾನಗಳನ್ನು ಕೈಗೊಳ್ಳಬೇಕು. ಬೆಳಗ್ಗೆ ಬೇಗನೆ ಎದ್ದು ಶಿವನಿಗೆ ಜಲಾಭಿಷೇಕವನ್ನು ಮಾಡಿ. ನಂತರ 'ಓಂ ಮಹಾದೇವಾಯ ಸರ್ವ ಕಾರ್ಯ ಸಿದ್ಧಿ ದೇಹಿ-ದೇಹಿ ಕಾಮೇಶ್ವರಾಯ ನಮಃ ಮಂತ್ರವನ್ನು 108 ಬಾರಿ ಜಪಿಸಿ. ಸಾಧ್ಯವಾದ್ರೆ ನೀವು ಅರ್ಧನಾರೀಶ್ವರ ಸ್ತೋತ್ರವನ್ನು ಸಹ ಪಠಿಸಬಹುದು. ಕೊನೆಯಲ್ಲಿ ಭೋಲೆನಾಥನ ಆರತಿಯನ್ನು ಮಾಡಿ ನಂತರ ಪ್ರಸಾದವನ್ನು ವಿತರಿಸಿ.



Click it and Unblock the Notifications