Latest Updates
-
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು!
5ನೇ ಶ್ರಾವಣ ಸೋಮವಾರ : ಪೂಜಾ ವಿಧಿ, ಆಚರಣೆ ಹೇಗಿರಬೇಕು?
ಶ್ರಾವಣ ಹಿಂದೂಗಳಿಗೆ ಒಂದು ರೀತಿ ವಿಶೇಷವಾದ ತಿಂಗಳು. ಈ ಸಮಯದಲ್ಲಿ ಶಿವನಿಗೆ ಭಕ್ತಿಯಿಂದ ಪೂಜೆ ಮಾಡಿ, ಉಪವಾಸವನ್ನು ಕೈಗೊಂಡರೆ ಆತ ನಮ್ಮೆಲ್ಲರ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ ಎಂಬ ನಂಬಿಕೆಯಿದೆ. ಅಷ್ಟಕ್ಕು ಐದನೇ ಶ್ರಾವಣ ಸೋಮವಾರ ಯಾವಾಗ? ಯಾವ ರೀತಿ ಪೂಜೆ ನೆರವೇರಿಸಬೇಕು ಅನ್ನೋದನ್ನು ತಿಳಿಯೋಣ.

5 ನೇ ಶ್ರಾವಣ ಸೋಮವಾರ 2023 ದಿನಾಂಕ :
ಐದನೇ ಶ್ರಾವಣ ಸೋಮವಾರದ ಉಪವಾಸವನ್ನು ಆಗಸ್ಟ್ 21, 2023 ರಂದು ಆಚರಿಸಲಾಗುತ್ತದೆ. ಈ ದಿನದಂದು ವಿವಾಹಿತರು ಅದೃಷ್ಟ ಮತ್ತು ಸಂಪತ್ತನ್ನು ಪಡೆಯಲು ನಿಯಮ ಮತ್ತು ನಿಬಂಧನೆಗಳನ್ನು ಪಾಲಿಸುವುದರ ಮೂಲಕ ಶಿವನ ಪೂಜೆಯನ್ನು ಮಾಡಬೇಕು. ಈ ಉಪವಾಸದ ಪರಿಣಾಮದಿಂದ ಸೂಕ್ತವಾದ ಜೀವನ ಸಂಗಾತಿಯನ್ನು ಪಡೆಯುವ ನಿಮ್ಮ ಬಯಕೆಯೂ ಈಡೇರುತ್ತದೆ.
5 ನೇ ಶ್ರಾವಣ ಸೋಮವಾರ 2023 ಮುಹೂರ್ತ :
ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯು ಆಗಸ್ಟ್ 21, 2023 ರಂದು ಬೆಳಗ್ಗೆ 12:53 ಕ್ಕೆ ಪ್ರಾರಂಭವಾಗುತ್ತದೆ. ಮತ್ತು 21 ಆಗಸ್ಟ್ 2023 ರಂದು ಬೆಳಗ್ಗೆ 2:00 ರವರೆಗೆ ಇರುತ್ತದೆ. ನಂಬಿಕೆಗಳ ಪ್ರಕಾರ ನಾಗ ಪಂಚಮಿಯ ದಿನದಂದು ಹಾವುಗಳ ಪೂಜೆಗೆ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಯ ಪ್ರಕಾರ ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಜೀವನದಲ್ಲಿ ಸಮಸ್ಯೆಗಳು ನಾಶವಾಗುತ್ತವೆ. ಅಲ್ಲದೆ ವ್ಯಕ್ತಿಯ ಎಲ್ಲಾ ಆಸೆಗಳು ಈಡೇರುತ್ತಂತೆ.
ಶ್ರಾವಣ ಸೋಮವಾರದಂದು ಶಿವನ ಆರಾಧನೆಯ ಮಹತ್ವವೇನು?
ಶಿವನ ಅರ್ಧನಾರೀಶ್ವರ ರೂಪವು ಅರ್ಧ ಹೆಣ್ಣು ಮತ್ತು ಅರ್ಧ ಗಂಡು. ಮನುಕುಲವನ್ನು ಜಗತ್ತಿನಲ್ಲಿ ಮುನ್ನಡೆಸಲು ಶಿವನು ಅರ್ಧನಾರೀಶ್ವರನ ರೂಪವನ್ನು ಪಡೆದಿದ್ದನು. ಶ್ರಾವನ ಸೋಮವಾರದಂದು ಶಿವನ ಅರ್ಧನಾರೀಶ್ವರ ರೂಪವನ್ನು ಪೂಜಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ. ಮತ್ತು ಪತಿ-ಪತ್ನಿಯರಲ್ಲಿ ಮಾಧುರ್ಯ ಹೆಚ್ಚಾಗುತ್ತಂತೆ.
ಸಾವನ ಸೋಮವಾರದಂದು ಶಿವನನ್ನು ಆರಾಧನೆ ಮಾಡುವವರು ಭಕ್ತಿಯಿಂದ ಎಲ್ಲಾ ಪೂಜಾ ವಿಧಾನಗಳನ್ನು ಕೈಗೊಳ್ಳಬೇಕು. ಬೆಳಗ್ಗೆ ಬೇಗನೆ ಎದ್ದು ಶಿವನಿಗೆ ಜಲಾಭಿಷೇಕವನ್ನು ಮಾಡಿ. ನಂತರ 'ಓಂ ಮಹಾದೇವಾಯ ಸರ್ವ ಕಾರ್ಯ ಸಿದ್ಧಿ ದೇಹಿ-ದೇಹಿ ಕಾಮೇಶ್ವರಾಯ ನಮಃ ಮಂತ್ರವನ್ನು 108 ಬಾರಿ ಜಪಿಸಿ. ಸಾಧ್ಯವಾದ್ರೆ ನೀವು ಅರ್ಧನಾರೀಶ್ವರ ಸ್ತೋತ್ರವನ್ನು ಸಹ ಪಠಿಸಬಹುದು. ಕೊನೆಯಲ್ಲಿ ಭೋಲೆನಾಥನ ಆರತಿಯನ್ನು ಮಾಡಿ ನಂತರ ಪ್ರಸಾದವನ್ನು ವಿತರಿಸಿ.



Click it and Unblock the Notifications











