Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗರುಡ ಪುರಾಣದ ಪ್ರಕಾರ ಲಕ್ಷ್ಮೀಯನ್ನು ಒಲಿಸಿಕೊಳ್ಳುವುದು ಹೇಗೆ?
ಹದಿನೆಂಟು ಪುರಾಣಗಳಲ್ಲಿ ಗರುಡ ಪುರಾಣವು ಕೂಡ ಒಂದು. ಹಿಂದೂ ಧರ್ಮದಲ್ಲಿ ಗರುಡ ಪುರಾಣಕ್ಕೆ ಮಹತ್ವದ ಸ್ಥಾನ ನೀಡಲಾಗಿದೆ. ಒರ್ವ ವ್ಯಕ್ತಿ ಸರಿ ದಾರಿಯಲ್ಲಿ ನಡೆಯೋದಕ್ಕೆ ಗರುಡ ಪುರಾಣದಲ್ಲಿ ಎಲ್ಲಾ ರೀತಿಯ ಪರಿಹಾರಗಳಿದೆ.
ಅದೇ ರೀತಿ ಪ್ರತಿಯೊಬ್ಬರು ಜೀವನದಲ್ಲಿ ಶ್ರೀಮಂತರಾಗಬೇಕು, ಉತ್ತಮ ಜೀವನ ನಡೆಸಬೇಕು ಎಂದು ಅಪೇಕ್ಷಿಸುತ್ತಾರೆ. ಇದಕ್ಕೆಲ್ಲಾ ಮುಖ್ಯ ಲಕ್ಷ್ಮೀ ಕೃಪಾಕಟಾಕ್ಷ.

ಆದರೆ ಲಕ್ಷ್ಮೀ ಕೃಪೆಗೆ ಪಾತ್ರರಾಗುವುದು ನಾವು ಅಂದುಕೊಂಡಷ್ಟು ಸುಲಭವಲ್ಲ. ಹಾಗಾದ್ರೆ ಲಕ್ಷ್ಮೀಯನ್ನ ಒಲಿಸಿಕೊಳ್ಳಬೇಕಾದರೆ ಏನು ಮಾಡಬೇಕು? ಗರುಡ ಪುರಾಣ ಈ ಬಗ್ಗೆ ಏನು ಹೇಳುತ್ತೆ ಅನ್ನೋದನ್ನ ನೋಡೋಣ.
ದೇವರಿಗೆ ನೈವೇದ್ಯ ಸಲ್ಲಿಸದೆ ತಿನ್ನಬೇಡಿ
ಗರುಡ ಪುರಾಣದ ಪ್ರಕಾರ ನಾವುದೇ ಯಾವುದೇ ಆಹಾರ ತಯಾರಿಸಿದಾಗಲೂ ಮೊದಲು ದೇವರಿಗೆ ನೈವೇದ್ಯದ ರೂಪದಲ್ಲಿ ಸಲ್ಲಿಸಬೇಕು. ಆ ನಂತರ ನಾವು ಸೇವನೆ ಮಾಡಬೇಕು. ಅದರ ಜೊತೆಗೆ ಆಹಾರಕ್ಕೆ ಅಗೌರವ ಸಲ್ಲಿಸುವುದು ಮತ್ತು ಆಹಾರದ ಬಗ್ಗೆ ಸುಳ್ಳು ಹೇಳುವುದನ್ನು ಮಾಡಬಾರದು. ಹೀಗೆ ಮಾಡಿದರೆ ಲಕ್ಷ್ಮೀ ಒಲಿಯುವುದಿಲ್ಲ. ಇನ್ನೂ ಯಾವ ಮನೆಯಲ್ಲಿ ಆಹಾರವನ್ನು ವ್ಯರ್ಥ ಮಾಡುತ್ತಾರೋ ಆ ಮನೆಯಲ್ಲಿ ಶಾಂತಿ ನೆಲೆಸುವುದಿಲ್ಲವಂತೆ.
ದಾನ ಹಾಗೂ ದೇವರ ಕಾರ್ಯಗಳನ್ನು ಮಾಡಿ
ಗರುಡ ಪುರಾಣದ ಪ್ರಕಾರ ದಾನ ಹಾಗೂ ದೇವರ ಕಾರ್ಯಗಳನ್ನು ಮಾಡುವುದರಿಂದ ಲಕ್ಷ್ಮೀ ಕೃಪೆಗೆ ಪಾತ್ರವಾಗಬಹುದಂತೆ. ಯಾವ ವ್ಯಕ್ತಿ ದಾನ ಕಾರ್ಯದಲ್ಲಿ ತೊಡಗುತ್ತಾನೋ ಹಾಗೂ ಪ್ರತಿನಿತ್ಯ ದೇವರ ಕಾರ್ಯ ಮಾಡುತ್ತಾನೋ ಅಂತವರಿಗೆ ಲಕ್ಷ್ಮೀ ಕೃಪಾಕಪಟಾಕ್ಷ ಇದ್ದೇ ಇರುತ್ತಂತೆ.
ಧರ್ಮಗ್ರಂಥಗಳ ಬಗ್ಗೆ ಜ್ಞಾನ ಹೊಂದಿರಬೇಕು
ಗರುಡ ಪುರಾಣದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೂ ಆತನ ಧರ್ಮಗ್ರಂಥಗಳ ಬಗ್ಗೆ ಜ್ಞಾನ ಇರಬೇಕಂತೆ. ಧರ್ಮ ಗ್ರಂಥಗಳ ಬಗ್ಗೆ ತಿಳಿದುಕೊಂಡವರು ಮತ್ತೊಬ್ಬರಿಗೆ ತಿಳಿಸುವ ಪ್ರಯತ್ನವನ್ನು ಖಂಡಿತ ಮಾಡಬೇಕು. ಹೀಗಾದಾಗ ಮಾತ್ರ ಜೀವನದ ಮಹತ್ವ ಏನು ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಹಾಗೂ ಸರಿಯಾದ ದಾರಿಯಲ್ಲಿ ನಡೆಯೋದಕ್ಕೆ ಸಾಧ್ಯ.
ಕೊಳಕು ಬಟ್ಟೆಗಳನ್ನು ಧರಿಸಬೇಡಿ
ಗರುಡ ಪುರಾಣದ ಪ್ರಕಾರ ಲಕ್ಷ್ಮೀಯನ್ನು ಒಲಿಸಿಕೊಳ್ಳಬೇಕಾದರೆ ಕೊಳಕಾದ ಬಟ್ಟೆಯನ್ನು ಧರಿಸಬಾರದಂತೆ. ಶುಭ್ರವಾದ ಬಟ್ಟೆಯನ್ನು ಧರಿಸಬೇಕು. ಲಕ್ಷ್ಮೀಯು ಸಂಪತ್ತು ಮತ್ತು ಸಮೃದ್ಧಿಯ ಸಂಕೇತ. ಹೀಗಾಗಿ ತಾಯಿ ಲಕ್ಷ್ಮೀಯನ್ನು ಒಲಿಸಿಕೊಳ್ಳಲು ಶುಚಿಯಾದ ಬಟ್ಟೆಯನ್ನೇ ಧರಿಸಿರಬೇಕು. ಯಾರು ಅವರ ನೋಟದ ಬಗ್ಗೆ ನಿರ್ಲಕ್ಷ್ಯದಿಂದಿರುತ್ತಾರೋ ಅಂತವರಿಗೆ ಲಕ್ಷ್ಮೀ ಒಲಿಯುವುದಿಲ್ಲ.
ಗರುಡ ಪುರಾಣದ ಪ್ರಕಾರ ಈ ವಿಧಾನಗಳನ್ನು ಅನುಸರಿಸಿದರೆ ಖಂಡಿತ ಲಕ್ಷ್ಮೀಯನ್ನು ಒಲಿಸಿಕೊಳ್ಳಬಹುದು. ಧರ್ಮ ಮಾರ್ಗದಲ್ಲಿ ನಡೆದರೆ ಸಂಪತ್ತು ಹಾಗೂ ಯಶಸ್ಸು ಒಲಿಯದೇ ಇರೋದಿಲ್ಲ.



Click it and Unblock the Notifications



