Latest Updates
-
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್!
ಗರುಡ ಪುರಾಣದ ಪ್ರಕಾರ ಲಕ್ಷ್ಮೀಯನ್ನು ಒಲಿಸಿಕೊಳ್ಳುವುದು ಹೇಗೆ?
ಹದಿನೆಂಟು ಪುರಾಣಗಳಲ್ಲಿ ಗರುಡ ಪುರಾಣವು ಕೂಡ ಒಂದು. ಹಿಂದೂ ಧರ್ಮದಲ್ಲಿ ಗರುಡ ಪುರಾಣಕ್ಕೆ ಮಹತ್ವದ ಸ್ಥಾನ ನೀಡಲಾಗಿದೆ. ಒರ್ವ ವ್ಯಕ್ತಿ ಸರಿ ದಾರಿಯಲ್ಲಿ ನಡೆಯೋದಕ್ಕೆ ಗರುಡ ಪುರಾಣದಲ್ಲಿ ಎಲ್ಲಾ ರೀತಿಯ ಪರಿಹಾರಗಳಿದೆ.
ಅದೇ ರೀತಿ ಪ್ರತಿಯೊಬ್ಬರು ಜೀವನದಲ್ಲಿ ಶ್ರೀಮಂತರಾಗಬೇಕು, ಉತ್ತಮ ಜೀವನ ನಡೆಸಬೇಕು ಎಂದು ಅಪೇಕ್ಷಿಸುತ್ತಾರೆ. ಇದಕ್ಕೆಲ್ಲಾ ಮುಖ್ಯ ಲಕ್ಷ್ಮೀ ಕೃಪಾಕಟಾಕ್ಷ.

ಆದರೆ ಲಕ್ಷ್ಮೀ ಕೃಪೆಗೆ ಪಾತ್ರರಾಗುವುದು ನಾವು ಅಂದುಕೊಂಡಷ್ಟು ಸುಲಭವಲ್ಲ. ಹಾಗಾದ್ರೆ ಲಕ್ಷ್ಮೀಯನ್ನ ಒಲಿಸಿಕೊಳ್ಳಬೇಕಾದರೆ ಏನು ಮಾಡಬೇಕು? ಗರುಡ ಪುರಾಣ ಈ ಬಗ್ಗೆ ಏನು ಹೇಳುತ್ತೆ ಅನ್ನೋದನ್ನ ನೋಡೋಣ.
ದೇವರಿಗೆ ನೈವೇದ್ಯ ಸಲ್ಲಿಸದೆ ತಿನ್ನಬೇಡಿ
ಗರುಡ ಪುರಾಣದ ಪ್ರಕಾರ ನಾವುದೇ ಯಾವುದೇ ಆಹಾರ ತಯಾರಿಸಿದಾಗಲೂ ಮೊದಲು ದೇವರಿಗೆ ನೈವೇದ್ಯದ ರೂಪದಲ್ಲಿ ಸಲ್ಲಿಸಬೇಕು. ಆ ನಂತರ ನಾವು ಸೇವನೆ ಮಾಡಬೇಕು. ಅದರ ಜೊತೆಗೆ ಆಹಾರಕ್ಕೆ ಅಗೌರವ ಸಲ್ಲಿಸುವುದು ಮತ್ತು ಆಹಾರದ ಬಗ್ಗೆ ಸುಳ್ಳು ಹೇಳುವುದನ್ನು ಮಾಡಬಾರದು. ಹೀಗೆ ಮಾಡಿದರೆ ಲಕ್ಷ್ಮೀ ಒಲಿಯುವುದಿಲ್ಲ. ಇನ್ನೂ ಯಾವ ಮನೆಯಲ್ಲಿ ಆಹಾರವನ್ನು ವ್ಯರ್ಥ ಮಾಡುತ್ತಾರೋ ಆ ಮನೆಯಲ್ಲಿ ಶಾಂತಿ ನೆಲೆಸುವುದಿಲ್ಲವಂತೆ.
ದಾನ ಹಾಗೂ ದೇವರ ಕಾರ್ಯಗಳನ್ನು ಮಾಡಿ
ಗರುಡ ಪುರಾಣದ ಪ್ರಕಾರ ದಾನ ಹಾಗೂ ದೇವರ ಕಾರ್ಯಗಳನ್ನು ಮಾಡುವುದರಿಂದ ಲಕ್ಷ್ಮೀ ಕೃಪೆಗೆ ಪಾತ್ರವಾಗಬಹುದಂತೆ. ಯಾವ ವ್ಯಕ್ತಿ ದಾನ ಕಾರ್ಯದಲ್ಲಿ ತೊಡಗುತ್ತಾನೋ ಹಾಗೂ ಪ್ರತಿನಿತ್ಯ ದೇವರ ಕಾರ್ಯ ಮಾಡುತ್ತಾನೋ ಅಂತವರಿಗೆ ಲಕ್ಷ್ಮೀ ಕೃಪಾಕಪಟಾಕ್ಷ ಇದ್ದೇ ಇರುತ್ತಂತೆ.
ಧರ್ಮಗ್ರಂಥಗಳ ಬಗ್ಗೆ ಜ್ಞಾನ ಹೊಂದಿರಬೇಕು
ಗರುಡ ಪುರಾಣದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೂ ಆತನ ಧರ್ಮಗ್ರಂಥಗಳ ಬಗ್ಗೆ ಜ್ಞಾನ ಇರಬೇಕಂತೆ. ಧರ್ಮ ಗ್ರಂಥಗಳ ಬಗ್ಗೆ ತಿಳಿದುಕೊಂಡವರು ಮತ್ತೊಬ್ಬರಿಗೆ ತಿಳಿಸುವ ಪ್ರಯತ್ನವನ್ನು ಖಂಡಿತ ಮಾಡಬೇಕು. ಹೀಗಾದಾಗ ಮಾತ್ರ ಜೀವನದ ಮಹತ್ವ ಏನು ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಹಾಗೂ ಸರಿಯಾದ ದಾರಿಯಲ್ಲಿ ನಡೆಯೋದಕ್ಕೆ ಸಾಧ್ಯ.
ಕೊಳಕು ಬಟ್ಟೆಗಳನ್ನು ಧರಿಸಬೇಡಿ
ಗರುಡ ಪುರಾಣದ ಪ್ರಕಾರ ಲಕ್ಷ್ಮೀಯನ್ನು ಒಲಿಸಿಕೊಳ್ಳಬೇಕಾದರೆ ಕೊಳಕಾದ ಬಟ್ಟೆಯನ್ನು ಧರಿಸಬಾರದಂತೆ. ಶುಭ್ರವಾದ ಬಟ್ಟೆಯನ್ನು ಧರಿಸಬೇಕು. ಲಕ್ಷ್ಮೀಯು ಸಂಪತ್ತು ಮತ್ತು ಸಮೃದ್ಧಿಯ ಸಂಕೇತ. ಹೀಗಾಗಿ ತಾಯಿ ಲಕ್ಷ್ಮೀಯನ್ನು ಒಲಿಸಿಕೊಳ್ಳಲು ಶುಚಿಯಾದ ಬಟ್ಟೆಯನ್ನೇ ಧರಿಸಿರಬೇಕು. ಯಾರು ಅವರ ನೋಟದ ಬಗ್ಗೆ ನಿರ್ಲಕ್ಷ್ಯದಿಂದಿರುತ್ತಾರೋ ಅಂತವರಿಗೆ ಲಕ್ಷ್ಮೀ ಒಲಿಯುವುದಿಲ್ಲ.
ಗರುಡ ಪುರಾಣದ ಪ್ರಕಾರ ಈ ವಿಧಾನಗಳನ್ನು ಅನುಸರಿಸಿದರೆ ಖಂಡಿತ ಲಕ್ಷ್ಮೀಯನ್ನು ಒಲಿಸಿಕೊಳ್ಳಬಹುದು. ಧರ್ಮ ಮಾರ್ಗದಲ್ಲಿ ನಡೆದರೆ ಸಂಪತ್ತು ಹಾಗೂ ಯಶಸ್ಸು ಒಲಿಯದೇ ಇರೋದಿಲ್ಲ.



Click it and Unblock the Notifications



