Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಶುಕ್ರವಾರ ಈ ಪರಿಹಾರ ಮಾಡಿದರೆ ಆರ್ಥಿಕ ಸಂಕಷ್ಟ ದೂರಾಗುವುದು
ಶುಕ್ರವಾರ ಲಕ್ಷ್ಮಿ ಪೂಜೆಗೆ ಶ್ರೇಷ್ಠವಾದ ದಿನ, ಈ ದಿನ ಲಕ್ಷ್ಮಿಯನ್ನು ಆರಾಧಿಸಿದರೆ ನಮ್ಮೆಲ್ಲಾ ಆರ್ಥಿಕ ಸಂಕಷ್ಟ ದೂರಾಗಿ ಸಂಪತ್ತು ಹೆಚ್ಚಾಗುವುದು, ಶುಕ್ರವಾರದಂದು ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ ಬನ್ನಿ:

ಲಕ್ಷ್ಮಿ ಆರಾಧನೆಗೆ ಶುಕ್ರವಾರ ಶ್ರೇಷ್ಠವಾದ ದಿನ
ವಾರದ ಏಳು ದಿನಗಳಲ್ಲಿ ಶುಕ್ರವಾರ ಲಕ್ಷ್ಮಿ ದೇವಿಗೆ ಮೀಸಲಾದ ದಿನ. ಈ ದಿನ ಲಕ್ಷ್ಮಿ ಆರಾಧನೆ ಮಾಡುವುದರಿಂದ ಮನೆಯಲ್ಲಿ ಸಂಪತ್ತು ಹೆಚ್ಚಾಗುವುದು, ಲಕ್ಷ್ಮಿ ಕೃಪೆಗೆ ಪಾತ್ರರಾಗಬೇಕೆಂದರೆ ಮನೆಯನ್ನು ಶುದ್ಧವಾಗಿ ಇಡಬೇಕು, ಮನೆಯಲ್ಲಿ ಗಲಾಟೆವಿರಬಹುದು, ಮನೆಯಲ್ಲಿ ಪಾಸಿಟಿವಿಟಿ ಹೆಚ್ಚಿರಬೇಕು, ಹೀಗೆ ಮಾಡುವುದರಿಂದ ಆ ಮನೆಯತ್ತ ಲಕ್ಷ್ಮಿ ಆಕರ್ಷಿತಳಾಗುತ್ತಾಳೆ.
ಈ ದಿನ ಲಕ್ಷ್ಮಿಯನ್ನು ಹೀಗೆ ಆರಾಧಿಸಿದರೆ ಒಳ್ಳೆಯದು
ತಾವರೆ ಹೂವು ಅರ್ಪಿಸಿ ಲಕ್ಷ್ಮಿ ಪೂಜೆ
ಲಕ್ಷ್ಮಿ ಪೂಜೆಯಂದು ನೀವು ಕಮಲದ ಹೂವು ಅರ್ಪಿಸಿ, ತುಪ್ಪದ ದೀಪ ಹಚ್ಚಿ ಪೂಜೆಯನ್ನು ಮಾಡಿ. ಹೀಗೆ ಮಾಡುವುದರಿಂದ ಲಕ್ಷ್ಮಿಗೆ ಹೊಸ ಆದಾಯದ ಅವಕಾಶಗಳು ದೊರೆಯುವುದು.
ಶಂಖ ನಾದ
ಸಂಜೆ ಹೊತ್ತು ಲಕ್ಷ್ಮಿ ಪೂಜೆ ಸಮಯದಲ್ಲಿ ಶಂಖವನ್ನು ಊದಿ, ಈ ಶಂಖದ ಶಬ್ದದಿಂದ ಮನೆಯಲ್ಲಿ ಮೊಳಗಿದಾಗ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತದೆ.
ಈ ದಿನ ಹಸುವಿಗೆ ಮೇವು ತಿನ್ನಿಸಿ
ಶುಕ್ರವಾರ ಲಕ್ಷ್ಮಿಯನ್ನು ಪೂಜಿಸಿದ ಬಳಿಕ ಪ್ರಸಾದವನ್ನು ಹಸುವಿಗೆ ತಿನ್ನಿಸಿ, ಇದರಿಂದ ಆರ್ಥಿಕ ತೊಂದರೆ ದೂರಾಗುವುದು.
ಈ ದಿನ ಕುಬೇರ ಯಂತ್ರ ಸ್ಥಾಪಿಸಿ
ಶುಕ್ರವಾರದಂದು ಲಕ್ಷ್ಮಿಯನ್ನು ಪೂಜಿಸಿ ಕುಬೇರ ಯಂತ್ರ ಸ್ಥಾಪಿಸಿ, ಈ ಯಂತ್ರವನ್ನು ಪ್ರತಿ ಶುಕ್ರವಾರ ಆರಾಧಿಸಿ, ಇದರಿಂದ ಮನೆಯಲ್ಲಿ ಸಂಪತ್ತು ಹೆಚ್ಚಾಗುವುದು.
ಶುಕ್ರವಾರ ನೀವು ಲಕ್ಷ್ಮಿಯನ್ನು ಆರಾಧಿಸುವುದು ಮಾತ್ರವಲ್ಲ, ಕೆಲವೊಂದು ಕಾರ್ಯ ಮಾಡಬಾರದು ಎಂದು ಹೇಳಲಾಗುವುದು.
ಲಕ್ಷ್ಮಿ ಮಂತ್ರ ಪಠಿಸಿ
ಲಕ್ಷ್ಮಿಬೀಜ ಮಂತ್ರ 1
ಓಂ ಹ್ರೀಮ್ ಶ್ರೀಮ್ ಲಕ್ಷ್ಮೀಭ್ಯೋ ನಮಃ
ಲಕ್ಷ್ಮಿ ಬೀಜ ಮಂತ್ರ 2
ಓಂ ಶ್ರಿಂಗ್ ಶ್ರೀಯೆ ನಮಃ
ಲಕ್ಷ್ಮಿ ಗಾಯತ್ರಿ ಮಂತ್ರ
ಓಂ ಶ್ರೀ ಮಹಾಲಕ್ಷ್ಮೀಯೇ ಚ ವಿದಾಮಹೇ ವಿಷ್ಣು ಪತ್ನಿಯೇ ಚ ದೀಮಹಿ ತನ್ನೊ ಲಕ್ಷ್ಮೀ ಪ್ರಚೋದಯಾತ್ ಓಂ
ಮಹಾಲಕ್ಷ್ಮಿ ಮಂತ್ರ
ಓಂ ಸರ್ವಬಾಧಾ ವಿನಿರ್ಮುಕ್ತೋ, ಧನ್ ಧಾನ್ಯ್ ಸು ತನ್ವಿತಾಃ ಮನುಷ್ಯೊ ಮತಪ್ರಸಾದಿನ್ ಭವಿಷ್ಯತಿ ನ ಸನ್ಷ್ಯಾ ಓಂ
ಜ್ಯೇಷ್ಠ ಲಕ್ಷ್ಮಿ ಮಂತ್ರ
ಓಂ ಅಲಿಂಗ್ ಹ್ರಿಂಗ್ ಶ್ರಿಂಗ್ ಜ್ಯೇಷ್ಠ ಲಕ್ಷ್ಮಿ ಸ್ವಯಂಭೂವೆ ಹ್ರಿಂಗ್ ಜ್ಯೇಷ್ಟಾಯೀ ನಮಃ
ಶ್ರೀ ಲಕ್ಷ್ಮಿ ನರಸಿಂಗ ಮಂತ್ರ
ಓಂ ಹ್ರಿಂಗ್ ಕ್ಷರಂಗ್ ಶ್ರಿಂಗ್ ಲಕ್ಷ್ಮಿ ನರಸಿಂಹಾಯಾ ನಮಃ
ಓಂ ಕ್ಲಿಂಗ್ ಕ್ಷರಂಗ್ ಶ್ರಿಂಗ್ ಲಕ್ಷ್ಮಿ ದೇವಾಯೀ ನಮಃ
ಏಕಾದಶಾಕ್ಷರ್ ಸಿದ್ಧ ಲಕ್ಷ್ಮಿ ಮಂತ್ರ
ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್ ಶ್ರಿಂಗ್ ಸಿದ್ಧದಾ ಲಕ್ಷ್ಮೀಯೇ ನಮಃ
ದ್ವದಶಾಕ್ಷರ್ ಮಹಾಲಕ್ಷ್ಮಿ ಮಂತ್ರ
ಓಮ್ ಅಲಿಂಗ್ ಹ್ರಿಂಗ್ ಶ್ರಿಂಗ್ ಕ್ಲಿಂಗ್ ಸಾಹು ಜಗತ್ಪ್ರಸೂತಾಯಿ ನಮಃ
ಈ ಮಂತ್ರಗಳನ್ನು ಪಠಿಸುವುದರಿಂದ ಸಂಪತ್ತು ಹೆಚ್ಚಾಗಲಿದೆ.
ಶುಕ್ರವಾರದಂದು ಈ 5 ತಪ್ಪುಗಳನ್ನು ಮಾಡಬೇಡಿ
- ಧರ್ಮಗ್ರಂಥಗಳ ಪ್ರಕಾರ, ಈ ದಿನ ಕೊಳಕು ಬಟ್ಟೆಗಳನ್ನು ಧರಿಸಬಾರದು. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಗೆ ಕೋಪ ಬರುತ್ತದೆ , ಧರಿದ್ರ ಹೆಚ್ಚಾಗುವುದು.
- ಮನೆಯನ್ನು ಸ್ವಚ್ಛವಾಗಿಡಬೇಕು, ಕೊಳೆ, ಕಸಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ.
- ಶುಕ್ರವಾರದಂದು ಹಣ, ಆಸ್ತಿಗೆ ಸಂಬಂಧಿಸಿದ ಕೆಲಸ ಮಾಡುವುದನ್ನು ತಪ್ಪಿಸಬೇಕು. ಶಾಸ್ತ್ರಗಳ ಪ್ರಕಾರ, ಈ ದಿನದಂದು ಆಸ್ತಿಯನ್ನು ಖರೀದಿಸುವುದು ಅಥವಾ ಮಾರುವುದು ಶುಭವಲ್ಲ.
- ಈ ದಿನದಂದು ಹಣದ ಕೊಡುವುದು, ಸಾಲ ಪಡೆಯುವುದು ಮಾಡಬಾರದು.
- ಶಾಸ್ತ್ರಗಳ ಪ್ರಕಾರ ಶುಕ್ರವಾರದಂದು ಸಕ್ಕರೆ ಸಾಲ ನೀಡಬಾರದು ಎಂದು ಹೇಳಲಾಗುವುದು.



Click it and Unblock the Notifications