Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಶುಕ್ರವಾರ ಈ ಪರಿಹಾರ ಮಾಡಿದರೆ ಆರ್ಥಿಕ ಸಂಕಷ್ಟ ದೂರಾಗುವುದು
ಶುಕ್ರವಾರ ಲಕ್ಷ್ಮಿ ಪೂಜೆಗೆ ಶ್ರೇಷ್ಠವಾದ ದಿನ, ಈ ದಿನ ಲಕ್ಷ್ಮಿಯನ್ನು ಆರಾಧಿಸಿದರೆ ನಮ್ಮೆಲ್ಲಾ ಆರ್ಥಿಕ ಸಂಕಷ್ಟ ದೂರಾಗಿ ಸಂಪತ್ತು ಹೆಚ್ಚಾಗುವುದು, ಶುಕ್ರವಾರದಂದು ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ ಬನ್ನಿ:

ಲಕ್ಷ್ಮಿ ಆರಾಧನೆಗೆ ಶುಕ್ರವಾರ ಶ್ರೇಷ್ಠವಾದ ದಿನ
ವಾರದ ಏಳು ದಿನಗಳಲ್ಲಿ ಶುಕ್ರವಾರ ಲಕ್ಷ್ಮಿ ದೇವಿಗೆ ಮೀಸಲಾದ ದಿನ. ಈ ದಿನ ಲಕ್ಷ್ಮಿ ಆರಾಧನೆ ಮಾಡುವುದರಿಂದ ಮನೆಯಲ್ಲಿ ಸಂಪತ್ತು ಹೆಚ್ಚಾಗುವುದು, ಲಕ್ಷ್ಮಿ ಕೃಪೆಗೆ ಪಾತ್ರರಾಗಬೇಕೆಂದರೆ ಮನೆಯನ್ನು ಶುದ್ಧವಾಗಿ ಇಡಬೇಕು, ಮನೆಯಲ್ಲಿ ಗಲಾಟೆವಿರಬಹುದು, ಮನೆಯಲ್ಲಿ ಪಾಸಿಟಿವಿಟಿ ಹೆಚ್ಚಿರಬೇಕು, ಹೀಗೆ ಮಾಡುವುದರಿಂದ ಆ ಮನೆಯತ್ತ ಲಕ್ಷ್ಮಿ ಆಕರ್ಷಿತಳಾಗುತ್ತಾಳೆ.
ಈ ದಿನ ಲಕ್ಷ್ಮಿಯನ್ನು ಹೀಗೆ ಆರಾಧಿಸಿದರೆ ಒಳ್ಳೆಯದು
ತಾವರೆ ಹೂವು ಅರ್ಪಿಸಿ ಲಕ್ಷ್ಮಿ ಪೂಜೆ
ಲಕ್ಷ್ಮಿ ಪೂಜೆಯಂದು ನೀವು ಕಮಲದ ಹೂವು ಅರ್ಪಿಸಿ, ತುಪ್ಪದ ದೀಪ ಹಚ್ಚಿ ಪೂಜೆಯನ್ನು ಮಾಡಿ. ಹೀಗೆ ಮಾಡುವುದರಿಂದ ಲಕ್ಷ್ಮಿಗೆ ಹೊಸ ಆದಾಯದ ಅವಕಾಶಗಳು ದೊರೆಯುವುದು.
ಶಂಖ ನಾದ
ಸಂಜೆ ಹೊತ್ತು ಲಕ್ಷ್ಮಿ ಪೂಜೆ ಸಮಯದಲ್ಲಿ ಶಂಖವನ್ನು ಊದಿ, ಈ ಶಂಖದ ಶಬ್ದದಿಂದ ಮನೆಯಲ್ಲಿ ಮೊಳಗಿದಾಗ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತದೆ.
ಈ ದಿನ ಹಸುವಿಗೆ ಮೇವು ತಿನ್ನಿಸಿ
ಶುಕ್ರವಾರ ಲಕ್ಷ್ಮಿಯನ್ನು ಪೂಜಿಸಿದ ಬಳಿಕ ಪ್ರಸಾದವನ್ನು ಹಸುವಿಗೆ ತಿನ್ನಿಸಿ, ಇದರಿಂದ ಆರ್ಥಿಕ ತೊಂದರೆ ದೂರಾಗುವುದು.
ಈ ದಿನ ಕುಬೇರ ಯಂತ್ರ ಸ್ಥಾಪಿಸಿ
ಶುಕ್ರವಾರದಂದು ಲಕ್ಷ್ಮಿಯನ್ನು ಪೂಜಿಸಿ ಕುಬೇರ ಯಂತ್ರ ಸ್ಥಾಪಿಸಿ, ಈ ಯಂತ್ರವನ್ನು ಪ್ರತಿ ಶುಕ್ರವಾರ ಆರಾಧಿಸಿ, ಇದರಿಂದ ಮನೆಯಲ್ಲಿ ಸಂಪತ್ತು ಹೆಚ್ಚಾಗುವುದು.
ಶುಕ್ರವಾರ ನೀವು ಲಕ್ಷ್ಮಿಯನ್ನು ಆರಾಧಿಸುವುದು ಮಾತ್ರವಲ್ಲ, ಕೆಲವೊಂದು ಕಾರ್ಯ ಮಾಡಬಾರದು ಎಂದು ಹೇಳಲಾಗುವುದು.
ಲಕ್ಷ್ಮಿ ಮಂತ್ರ ಪಠಿಸಿ
ಲಕ್ಷ್ಮಿಬೀಜ ಮಂತ್ರ 1
ಓಂ ಹ್ರೀಮ್ ಶ್ರೀಮ್ ಲಕ್ಷ್ಮೀಭ್ಯೋ ನಮಃ
ಲಕ್ಷ್ಮಿ ಬೀಜ ಮಂತ್ರ 2
ಓಂ ಶ್ರಿಂಗ್ ಶ್ರೀಯೆ ನಮಃ
ಲಕ್ಷ್ಮಿ ಗಾಯತ್ರಿ ಮಂತ್ರ
ಓಂ ಶ್ರೀ ಮಹಾಲಕ್ಷ್ಮೀಯೇ ಚ ವಿದಾಮಹೇ ವಿಷ್ಣು ಪತ್ನಿಯೇ ಚ ದೀಮಹಿ ತನ್ನೊ ಲಕ್ಷ್ಮೀ ಪ್ರಚೋದಯಾತ್ ಓಂ
ಮಹಾಲಕ್ಷ್ಮಿ ಮಂತ್ರ
ಓಂ ಸರ್ವಬಾಧಾ ವಿನಿರ್ಮುಕ್ತೋ, ಧನ್ ಧಾನ್ಯ್ ಸು ತನ್ವಿತಾಃ ಮನುಷ್ಯೊ ಮತಪ್ರಸಾದಿನ್ ಭವಿಷ್ಯತಿ ನ ಸನ್ಷ್ಯಾ ಓಂ
ಜ್ಯೇಷ್ಠ ಲಕ್ಷ್ಮಿ ಮಂತ್ರ
ಓಂ ಅಲಿಂಗ್ ಹ್ರಿಂಗ್ ಶ್ರಿಂಗ್ ಜ್ಯೇಷ್ಠ ಲಕ್ಷ್ಮಿ ಸ್ವಯಂಭೂವೆ ಹ್ರಿಂಗ್ ಜ್ಯೇಷ್ಟಾಯೀ ನಮಃ
ಶ್ರೀ ಲಕ್ಷ್ಮಿ ನರಸಿಂಗ ಮಂತ್ರ
ಓಂ ಹ್ರಿಂಗ್ ಕ್ಷರಂಗ್ ಶ್ರಿಂಗ್ ಲಕ್ಷ್ಮಿ ನರಸಿಂಹಾಯಾ ನಮಃ
ಓಂ ಕ್ಲಿಂಗ್ ಕ್ಷರಂಗ್ ಶ್ರಿಂಗ್ ಲಕ್ಷ್ಮಿ ದೇವಾಯೀ ನಮಃ
ಏಕಾದಶಾಕ್ಷರ್ ಸಿದ್ಧ ಲಕ್ಷ್ಮಿ ಮಂತ್ರ
ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್ ಶ್ರಿಂಗ್ ಸಿದ್ಧದಾ ಲಕ್ಷ್ಮೀಯೇ ನಮಃ
ದ್ವದಶಾಕ್ಷರ್ ಮಹಾಲಕ್ಷ್ಮಿ ಮಂತ್ರ
ಓಮ್ ಅಲಿಂಗ್ ಹ್ರಿಂಗ್ ಶ್ರಿಂಗ್ ಕ್ಲಿಂಗ್ ಸಾಹು ಜಗತ್ಪ್ರಸೂತಾಯಿ ನಮಃ
ಈ ಮಂತ್ರಗಳನ್ನು ಪಠಿಸುವುದರಿಂದ ಸಂಪತ್ತು ಹೆಚ್ಚಾಗಲಿದೆ.
ಶುಕ್ರವಾರದಂದು ಈ 5 ತಪ್ಪುಗಳನ್ನು ಮಾಡಬೇಡಿ
- ಧರ್ಮಗ್ರಂಥಗಳ ಪ್ರಕಾರ, ಈ ದಿನ ಕೊಳಕು ಬಟ್ಟೆಗಳನ್ನು ಧರಿಸಬಾರದು. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಗೆ ಕೋಪ ಬರುತ್ತದೆ , ಧರಿದ್ರ ಹೆಚ್ಚಾಗುವುದು.
- ಮನೆಯನ್ನು ಸ್ವಚ್ಛವಾಗಿಡಬೇಕು, ಕೊಳೆ, ಕಸಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ.
- ಶುಕ್ರವಾರದಂದು ಹಣ, ಆಸ್ತಿಗೆ ಸಂಬಂಧಿಸಿದ ಕೆಲಸ ಮಾಡುವುದನ್ನು ತಪ್ಪಿಸಬೇಕು. ಶಾಸ್ತ್ರಗಳ ಪ್ರಕಾರ, ಈ ದಿನದಂದು ಆಸ್ತಿಯನ್ನು ಖರೀದಿಸುವುದು ಅಥವಾ ಮಾರುವುದು ಶುಭವಲ್ಲ.
- ಈ ದಿನದಂದು ಹಣದ ಕೊಡುವುದು, ಸಾಲ ಪಡೆಯುವುದು ಮಾಡಬಾರದು.
- ಶಾಸ್ತ್ರಗಳ ಪ್ರಕಾರ ಶುಕ್ರವಾರದಂದು ಸಕ್ಕರೆ ಸಾಲ ನೀಡಬಾರದು ಎಂದು ಹೇಳಲಾಗುವುದು.



Click it and Unblock the Notifications